ಪಂಜಾಬ್‌ | ಒಂದೇ ದಿನದಲ್ಲಿ 147 ಬೆಂಕಿ ಅವಘಡ; ಗಾಳಿ ಗುಣಮಟ್ಟ ಕುಸಿತಕ್ಕೆ ಮೂಲ

Date:

ಪಂಜಾಬ್‌ನಲ್ಲಿ ಈ ವರ್ಷದ ಮಳೆ ಋತುವಿಲ್ಲಿ ಅತ್ಯಧಿಕ ಬೆಂಕಿ ಅವಘಡಗಳು (ಕೃಷಿ ಭೂಮಿಗೆ ಬೆಂಕಿ ಹಚ್ಚುವುದು) ಸೋಮವಾರ ಸಂಭವಿಸಿವೆ. ಒಂದೇ ದಿನ 147 ಬೆಂಕಿ ಅವಘಡಗಳು ಘಟಿಸಿವೆ. ಸೆಪ್ಟೆಂಬರ್ 15ರಿಂದ ಈಚೆಗೆ ಸಂಭವಿಸಿದ ಅವಘಡಗಳ ಒಟ್ಟು ಸಂಖ್ಯೆ 890ಕ್ಕೆ ಏರಿಕೆಯಾಗಿದೆ ಎಂದು ಸರ್ಕಾರದ ಅಂಕಿಅಂಶಗಳು ತಿಳಿಸಿವೆ.

ಪಂಜಾಬ್ ಮಾಲಿನ್ಯ ನಿಯಂತ್ರಣ ಮಂಡಳಿ (ಪಿಪಿಸಿಬಿ) ದತ್ತಾಂಶದ ಪ್ರಕಾರ, ಹೆಚ್ಚಿನ ರೈತರು ಬೆಳೆ ತ್ಯಾಜ್ಯ ಸುಡುವುದನ್ನು ನಿಲ್ಲಿಸುವಂತೆ ರಾಜ್ಯ ಸರ್ಕಾರ ಮನವಿ ಮಾಡಿದ್ದರೂ, ರೈತರು ನಿರ್ಲಕ್ಷಿಸುತ್ತಲೇ ಇದ್ದಾರೆ. ಅಕ್ಟೋಬರ್ 20ರ ವೇಳೆಗೆ 353 ಕೃಷಿ ಬೆಂಕಿ ಅವಘಡಗಳು ಸಂಭವಿಸಿದ್ದವು. ಕಳೆದ ಒಂದು ವಾರದಲ್ಲಿ ಅವಘಡಗಳ ಸಂಖ್ಯೆ 890ಕ್ಕೆ ಏರಿಕೆಯಾಗಿದೆ.

ಅಂಕಿಅಂಶದ ಪ್ರಕಾರ, ಟಾರ್ನ್ ತರಣ್‌ನಲ್ಲಿ 249, ಅಮೃತಸರದಲ್ಲಿ 169, ಫಿರೋಜ್‌ಪುರದಲ್ಲಿ 87, ಸಂಗ್ರೂರ್‌ನಲ್ಲಿ 79, ಪಟಿಯಾಲದಲ್ಲಿ 46, ಗುರುದಾಸ್ಪುರದಲ್ಲಿ 41, ಬಟಿಂಡಾದಲ್ಲಿ 38 ಮತ್ತು ಕಪುರ್ತಲಾದಲ್ಲಿ 35 ಬೆಂಕಿ ಅವಘಡಗಳು ವರದಿಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಠಾಣ್‌ಕೋಟ್ ಮತ್ತು ರೂಪನಗರ ಜಿಲ್ಲೆಗಳಲ್ಲಿ ಇದುವರೆಗೆ ಯಾವುದೇ ಕೃಷಿ ಹುಲ್ಲು ಸುಡುವ ಘಟನೆಗಳು ವರದಿಯಾಗಿಲ್ಲ. ಎಸ್‌ಬಿಎಸ್ ನಗರ ಮತ್ತು ಹೋಶಿಯಾರ್‌ಪುರದಲ್ಲಿ ಮೂರು, ಮಲೇರ್‌ಕೋಟ್ಲಾದಲ್ಲಿ ನಾಲ್ಕು ಮತ್ತು ಲುಧಿಯಾನದಲ್ಲಿ ಒಂಬತ್ತು ಪ್ರಕರಣಗಳು ವರದಿಯಾಗಿವೆ.

ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಭತ್ತದ ಬೆಳೆ ಕೊಯ್ಲು ಮಾಡಿದ ನಂತರ ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಾಗಲು ಪಂಜಾಬ್ ಮತ್ತು ಹರಿಯಾಣದಲ್ಲಿ ಕೃಷಿ ಹುಲ್ಲು ಸುಡುತ್ತಿರುವುದೇ ಕಾರಣವೆಂದು ದೂಷಿಸಲಾಗುತ್ತದೆ.

ಭತ್ತದ ಕೊಯ್ಲಿನ ನಂತರ ರಬಿ ಬೆಳೆಯಾದ ಗೋಧಿ ಬಿತ್ತನೆ ಮಾಡಲು ಸಮಯ ಬಹಳ ಕಡಿಮೆ ಇರುತ್ತದೆ. ಹೀಗಾಗಿ, ಕೆಲವು ರೈತರು ಕೃಷಿ ಚಟುವಟಿಕೆಗಳನ್ನು ತ್ವರಿತವಾಗಿ ಆರಂಭಿಸಲು ತಮ್ಮ ಗದ್ದೆಗಳಿಗೆ ಹುಲ್ಲಿಗೆ ಬೆಂಕಿ ಹಚ್ಚುತ್ತಾರೆ.

ಈ ಲೇಖನ ಓದಿದ್ದೀರಾ?: ಸಂಘಿಗಳು ತುಂಬಿರುವ ಕಾಂಗ್ರೆಸ್ಸಿನಲ್ಲಿ ಸಿದ್ದು- ಖರ್ಗೆ-ಹರಿಪ್ರಸಾದ್-ಜಾರಕಿಹೊಳಿ ಸೈದ್ಧಾಂತಿಕ ಬದ್ಧತೆ

ಪಿಪಿಸಿಬಿ ಪ್ರಕಾರ, ಈ ವರ್ಷ ಪಂಜಾಬ್‌ನಲ್ಲಿ ಒಟ್ಟು 31.72 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಯಾಗಿದೆ. ಅಕ್ಟೋಬರ್ 26 ರವರೆಗೆ ಶೇ.59.82ರಷ್ಟು ಕಟಾವು ಮಾಡಲಾಗಿದೆ.

ಇಲ್ಲಿಯವರೆಗೆ, 386 ಬೆಂಕಿ ಹಚ್ಚಿದ ಪ್ರಕರಣಗಳಲ್ಲಿ ಪರಿಸರಕ್ಕೆ ಹಾನಿ ಆರೋಪದಲ್ಲಿ 19.80 ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ. ಒಟ್ಟು 13.40 ಲಕ್ಷ ರೂ.ಗಳನ್ನು ಸಂಗ್ರಹಿಸಲಾಗಿದೆ ಎಂದು ಪಿಪಿಸಿಬಿ ದತ್ತಾಂಶವು ತೋರಿಸಿದೆ.

ಕೃಷಿ ಭೂಮಿಯಲ್ಲಿ ಬೆಂಕಿ ಹಚ್ಚಿದ ಘಟನೆಗಳಿಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತದ ಸೆಕ್ಷನ್ 223 (ಸಾರ್ವಜನಿಕ ಸೇವಕರು ಘೋಷಿಸಿದ ಆದೇಶದ ಉಲ್ಲಂಘನೆ) ಅಡಿಯಲ್ಲಿ ಒಟ್ಟು 302 ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ ಎಂದು ಪಿಪಿಸಿಬಿ ಹೇಳಿದೆ.

ಪಂಜಾಬ್ 2023ರಲ್ಲಿ 36,663 ಕೃಷಿ ಬೆಂಕಿ ಅವಘಡಗಳಿಗೆ ಹೋಲಿಸಿದರೆ 2024ರಲ್ಲಿ ಒಟ್ಟು 10,909 ಕೃಷಿ ಬೆಂಕಿ ಪ್ರಕರಣಗಳು ದಾಖಲಾಗಿದ್ದವು. ಅಂದರೆ, ಪ್ರಕರಣಗಳಲ್ಲಿ 70% ಇಳಿಕೆಯಾಗಿತ್ತು. ಈ ವರ್ಷ ಇನ್ನೂ ಕಡಿಮೆಯಾಗುವ ಸಾಧ್ಯತೆಗಳಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...