ಸಿಬಿಎಸ್ಇ ಹತ್ತನೇ ತರಗತಿ ವಿದ್ಯಾರ್ಥಿನಿಗೆ ಶೂನ್ಯ ಅಂಕ: ಶಾಲೆಗೆ ಪಂಜಾಬ್ ಹೈಕೋರ್ಟ್ 30 ಸಾವಿರ ರೂ. ದಂಡ

Date:

ಕೇಂದ್ರೀಯ ಮಾಧ್ಯಮಿಕ ಶಿಕ್ಷಣ ಮಂಡಳಿ (ಸಿಬಿಎಸ್ಇ) ಪರೀಕ್ಷೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿನಿಗೆ ತಪ್ಪಾಗಿ ಶೂನ್ಯ ಅಂಕ ನೀಡಿದ್ದ ಶಾಲೆಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಇತ್ತೀಚೆಗೆ 30,000 ರೂ. ದಂಡ ವಿಧಿಸಿದೆ.

“ಶಾಲೆಯ ತಪ್ಪಿನಿಂದಾಗಿ ಅರ್ಜಿದಾರರು ತೊಂದರೆ ಅನುಭವಿಸಿದ್ದು ಮಾತ್ರವಲ್ಲದೆ, ಪ್ರತಿವಾದಿ ಸಿಬಿಎಸ್ಇ ಶಾಲೆ ಕೂಡ ತನ್ನ ಯಾವುದೇ ತಪ್ಪಿಲ್ಲದಿದ್ದರೂ ದಾವೆ ವೆಚ್ಚ ಭರಿಸುವಂತಾಯಿತು” ಎಂದು ನ್ಯಾಯಮೂರ್ತಿ ವಿಕಾಸ್ ಬಹ್ಲ್ ಹೇಳಿದರು.

ಶಾಲೆಯ ನಿರ್ಲಕ್ಷ್ಯದ ಪರಿಣಾಮವಾಗಿ, ಒಂದೇ ಹೆಸರಿದ್ದ ಇಬ್ಬರು ವಿದ್ಯಾರ್ಥಿನಿಯರ ಅಂಕ ಬದಲಾಗಿತ್ತು. ಪರಿಣಾಮ ಶೂನ್ಯ ಅಂಕ ಪಡೆದ ವಿದ್ಯಾರ್ಥಿನಿ ಹನ್ನೆರಡನೇ ತರಗತಿ ಬೋರ್ಡ್ ಪರೀಕ್ಷೆಗಳಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೀಗಾಗಿ ಫಲಿತಾಂಶ ತಿದ್ದುಪಡಿ ಮಾಡಿ ಪರಿಷ್ಕೃತ ಅಂಕಪಟ್ಟಿ ನೀಡುವಂತೆ ಕೋರಿ ವಿದ್ಯಾರ್ಥಿನಿ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರಕರಣದಲ್ಲಿ ಸಿಬಿಎಸ್‌ಇ ಮಧ್ಯ ಪ್ರವೇಶಿಸುವಂತೆ ಆಕೆ ಕೋರಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಂಚೆ- ಪಾರ್ಸೆಲುಗಳ ತೆರೆಯುವ ನಿರಂಕುಶ ಅಧಿಕಾರ ಅಪಾಯಕರ

ಆಗ ಪರಿಷ್ಕೃತ ಅಂಕಗಳನ್ನು ನಿಗದಿತ ಸಮಯದೊಳಗೆ ಆನ್‌ಲೈನ್‌ ವೇದಿಕೆಯಲ್ಲಿ ಸಲ್ಲಿಸಿಲ್ಲ ಎಂದು ಶಾಲೆ ತಿಳಿಸಿತ್ತು. ಪದೇ ಪದೇ ವಿನಂತಿಸಿದರೂ, ಅರ್ಜಿಯನ್ನು ಮಂಡಳಿಗೆ ಕಳುಹಿಸಲಾಗಿದೆ ಎಂದು ಶಾಲೆ ಹೇಳುತ್ತಿತ್ತೇ ವಿನಾ ಕ್ರಮ ಕೈಗೊಳ್ಳುತ್ತಿರಲಿಲ್ಲ ಎಂದು ಆಕೆ ಅಳಲು ತೋಡಿಕೊಂಡಿದ್ದರು.

ವಾದ ಆಲಿಸಿದ ನ್ಯಾಯಾಲಯ “ಅರ್ಜಿದಾರರು ತನ್ನ 11ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು ಶಾಲೆಯ ತಪ್ಪಿನಿಂದಾಗಿ 12ನೇ ತರಗತಿ ಪರೀಕ್ಷೆ ಬರೆಯಲು ಸಾಧ್ಯವಾಗಿಲ್ಲ. ಅರ್ಜಿದಾರರ ಪರವಾಗಿ ಸೂಕ್ತ ನಿರ್ದೇಶನ ನೀಡದೆ ಹೋದರೆ ಅವರ ಭವಿಷ್ಯ ತೊಂದರೆಗೆ ಸಿಲುಕಲಿದೆ” ಎಂದಿತು.

ನಿರ್ಲಕ್ಷ್ಯಕ್ಕಾಗಿ ನ್ಯಾಯಾಲಯ ಶಾಲೆಗೆ 30,000 ರೂ. ದಂಡ ವಿಧಿಸಿತು. ಅನಗತ್ಯವಾಗಿ ವ್ಯಾಜ್ಯಕ್ಕೆ ಸಿಬಿಎಸ್‌ಸಿಯನ್ನು ಎಳೆದು ತಂದಿದ್ದಕ್ಕಾಗಿ ದಾವೆ ವೆಚ್ಚ ಭರಿಸಲೆಂದು ಸಿಬಿಎಸ್‌ಇಗೆ ಆ ದಂಡದ ಮೊತ್ತವನ್ನು ಪಾವತಿಸುವಂತೆಯೂ ಶಾಲೆಗೆ ನಿರ್ದೇಶಿಸಲಾಯಿತು.

ಇದೇ ವೇಳೆ ಅರ್ಜಿದಾರರ ಅಂಕ ಸರಿಪಡಿಸದ ಸಿಬಿಎಸ್‌ಇ ನಿರ್ಧಾರವನ್ನೂ ರದ್ದುಗೊಳಿಸಿದ ನ್ಯಾಯಾಲಯ ಹೊಸದಾಗಿ ಫಲಿತಾಂಶ ಪ್ರಕಟಿಸುವಂತೆ ಸೂಚಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...