ಪುಷ್ಪಾ 2 ಕಾಲ್ತುಳಿತ | ಆಸ್ಪತ್ರೆಯಲ್ಲಿ ಗಾಯಾಳು ಬಾಲಕನ ಭೇಟಿ; ಅಲ್ಲು ಅರ್ಜುನ್‌ಗೆ ಪೊಲೀಸ್‌ ನೋಟಿಸ್‌

Date:

ಇತ್ತೀಚೆಗೆ ಹೈದಾರಾಬಾದ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಪುಷ್ಪಾ 2 ಶೋ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಲ್ಲಿ ಗಾಯಗೊಂಡ ಬಾಲಕನನ್ನು ಸಿನಿಮಾ ನಟ ಅಲ್ಲು ಅರ್ಜುನ್ ಆಸ್ಪತ್ರೆಯಲ್ಲಿ ಭೇಟಿಯಾಗಲು ಮುಂದಾಗಿದ್ದರು. ಈ ಬೆನ್ನಲ್ಲೇ ಪೊಲೀಸರು ಅಲ್ಲು ಅರ್ಜುನ್‌ಗೆ ನೋಟಿಸ್ ನೀಡಿದ್ದಾರೆ.

ಗಾಯಗೊಂಡಿರುವ ಬಾಲಕನನ್ನು ನೋಡಲು ಸಿಕಂದರಾಬಾದ್‌ನ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡದಂತೆ ಹೈದರಾಬಾದ್‌ನ ರಾಮಗೋಪಾಲ್‌ಪೇಟೆ ಪೊಲೀಸ್ ಠಾಣೆಯು ನಟ ಅಲ್ಲು ಅರ್ಜುನ್‌ಗೆ ನೋಟಿಸ್ ಜಾರಿ ಮಾಡಿದೆ.

ಇದನ್ನು ಓದಿದ್ದೀರಾ? ಪುಷ್ಪಾ 2 ಕಾಲ್ತುಳಿತ | ಅಭಿಮಾನಿಗಳ ಜವಾಬ್ದಾರಿ ಸೆಲೆಬ್ರೆಟಿಗಳದ್ದು, ಯಾವುದೇ ರಾಜಿಯಿಲ್ಲ: ರೇವಂತ್ ರೆಡ್ಡಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನೀವು ಆಸ್ಪತ್ರೆಗೆ ಭೇಟಿ ನೀಡುವುದರಿಂದ ಆಸ್ಪತ್ರೆಯ ಕಾರ್ಯಾಚರಣೆಗಳಿಗೆ, ಇತರೆ ರೋಗಿಗಳಿಗೆ ತೊಂದರೆಯಾಗುತ್ತದೆ. ಆದ್ದರಿಂದ ಈ ಭೇಟಿ ನಿರ್ಧಾರವನ್ನು ಮರುಪರಿಶೀಲಿಸುವಂತೆ ನಾವು ಶಿಫಾರಸು ಮಾಡುತ್ತೇವೆ” ಎಂದು ರಾಮಗೋಪಾಲಪೇಟೆ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಹೊರಡಿಸಿದ ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಇನ್ನು ಜಾಮೀನು ಷರತ್ತಿನ ಪ್ರಕಾರ ಭಾನುವಾರ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಹಾಜರಾದ ನಂತರ ಆಸ್ಪತ್ರೆಗೆ ಭೇಟಿ ನೀಡಲು ನಟ ನಿರ್ಧರಿಸಿದ್ದರು. ಆದರೆ ನೋಟೀಸ್ ಬಂದ ನಂತರ ಭಾನುವಾರ ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡುವ ನಿರ್ಧಾರವನ್ನು ನಟ ಕೈಬಿಟ್ಟಿದ್ದಾರೆ.

ಇದನ್ನು ಓದಿದ್ದೀರಾ? ಪುಷ್ಪಾ 2 ಕಾಲ್ತುಳಿತ ಪ್ರಕರಣ | ನಟ ಅಲ್ಲು ಅರ್ಜುನ್‌ಗೆ ಸಮನ್ಸ್

ಆಸ್ಪತ್ರೆಯ ಶಾಂತಿಯುತ ಪರಿಸರಕ್ಕೆ ಭಂಗ ತರುವಂತಹ ಯಾವುದೇ ಸಾರ್ವಜನಿಕರು/ ಮಾಧ್ಯಮಗಳು ಆವರಣದಲ್ಲಿ ಸೇರುವುದನ್ನು ತಡೆಯಲು ತಮ್ಮ ಗೌಪ್ಯತೆಯನ್ನು ಕಾಪಾಡಿಕೊಳ್ಳುವಂತೆ ಅಲ್ಲು ಅರ್ಜುನ್ ಅವರಿಗೆ ಸೂಚಿಸಲಾಗಿದೆ. ಹಾಗೆಯೇ ಈ ಸೂಚನೆ ಹೊರತಾಗಿಯೂ ಆಸ್ಪತ್ರೆಗೆ ಭೇಟಿ ನೀಡಿ ಏನೇ ಸಂಭವಿಸಿದರೂ ಅದಕ್ಕೆ ನಟನೇ ಕಾರಣರಾಗಿರುತ್ತಾರೆ ಎಂದು ನಟನಿಗೆ ಎಚ್ಚರಿಕೆ ನೀಡಲಾಗಿದೆ.

ಪುಷ್ಪಾ 2 ಶೋ ವೇಳೆ ನಡೆದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿ, ಇಬ್ಬರು ಬಾಲಕರು ಗಾಯಗೊಂಡಿದ್ದಾರೆ. ಓರ್ವ ಬಾಲಕ ಚೇತರಿಸಿಕೊಂಡಿದ್ದು ಇನ್ನೋರ್ವ ಬಾಲಕ ಇನ್ನೂ ಆಸ್ಪತ್ರೆಯಲ್ಲೇ ಗಂಭೀರ ಸ್ಥಿತಿಯಲ್ಲಿದ್ದಾನೆ ಎಂದು ಹೇಳಲಾಗಿದೆ. ಥಿಯೇಟರ್‌ಗೆ ನಟ ದಿಢೀರ್ ಭೇಟಿ ನೀಡಿರುವುದೇ ಈ ಕಾಲ್ತುಳಿತಕ್ಕೆ ಕಾರಣ ಎನ್ನಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...