8 ನೌಕಾಪಡೆ ಮಾಜಿ ಸಿಬ್ಬಂದಿಗೆ ಮರಣದಂಡನೆ ವಿರುದ್ಧ ಭಾರತದ ಮನವಿ ಸ್ವೀಕರಿಸಿದ ಕತಾರ್

Date:

ಕಳೆದ ತಿಂಗಳು ಕತಾರ್‌ ನ್ಯಾಯಾಲಯವು ಎಂಟು ಭಾರತೀಯ ನೌಕಾಪಡೆಯ ಮಾಜಿ ಸಿಬ್ಬಂದಿಗೆ ಮರಣದಂಡನೆ ವಿಧಿಸಿದ್ದಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರ ಸಲ್ಲಿಸಿದ ಮೇಲ್ಮನವಿಯನ್ನು ಕತಾರ್ ನ್ಯಾಯಾಲಯವು ಗುರುವಾರ ಸ್ವೀಕರಿಸಿದೆ.

ಅಧಿಕಾರಿಗಳು ಮೇಲ್ಮನವಿಯನ್ನು ಅಧ್ಯಯನ ಮಾಡುತ್ತಿದ್ದಾರೆ ಮತ್ತು ಮುಂದಿನ ವಿಚಾರಣೆಯನ್ನು ಶೀಘ್ರದಲ್ಲೇ ತಿಳಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.

ಅಕ್ಟೋಬರ್ 26 ರಂದು, ಕತಾರ್‌ನ ಪ್ರಥಮ ನಿದರ್ಶನದ ನ್ಯಾಯಾಲಯವು ಎಂಟು ಜನರಿಗೆ ಮರಣದಂಡನೆ ವಿಧಿಸಿತ್ತು. ಖಾಸಗಿ ಕಂಪನಿ ಅಲ್ ದಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಮತ್ತು ಕನ್ಸಲ್ಟೆನ್ಸಿ ಸರ್ವಿಸಸ್‌ನೊಂದಿಗೆ ಕೆಲಸ ಮಾಡುತ್ತಿದ್ದ ಅವರನ್ನು ಆಗಸ್ಟ್ 2022 ರಲ್ಲಿ ಬಂಧಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮರಣದಂಡಣೆ ವಿಧಿಸಿದ ನಂತರ ಭಾರತ ಸರ್ಕಾರವು ಆಘಾತ ವ್ಯಕ್ತಪಡಿಸಿ ಪ್ರಕರಣದಿಂದ ಅವರನ್ನು ಬಿಡಿಸಿ ತರಲು ಕಾನೂನಿನ ಎಲ್ಲ ಆಯ್ಕೆಗಳನ್ನು ಪರಿಶೀಲಿಸುವುದಾಗಿ ತಿಳಿಸಿತ್ತು.

ಈ ಸುದ್ದಿ ಓದಿದ್ದೀರಾ? ಪಾಪಿಗಳು ಹಾಜರಾದ ಕಾರಣ ವಿಶ್ವಕಪ್ ಫೈನಲ್‌ನಲ್ಲಿ ಭಾರತ ಸೋತಿದೆ: ಮಮತಾ ಬ್ಯಾನರ್ಜಿ

ನವೆಂಬರ್ 16 ರಂದು, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಅವರು ಈ ವಿಷಯದ ಬಗ್ಗೆ ಭಾರತವು ಕತಾರ್‌ ಅಧಿಕಾರಿಗಳೊಂದಿಗೆ ಮಾತುಕತೆಯಲ್ಲಿ ತೊಡಗಿಸಿಕೊಂಡಿದೆ ಮತ್ತು ನೌಕಾಪಡೆಯ ಮಾಜಿ ಸಿಬ್ಬಂದಿಗೆ ಸರ್ಕಾರವು ಎಲ್ಲ ಕಾನೂನು ಮತ್ತು ದೂತಾವಾಸದ ಸಹಾಯವನ್ನು ನೀಡುವುದನ್ನು ಮುಂದುವರಿಸುತ್ತದೆ ಎಂದು ಹೇಳಿದ್ದರು.

“ಪ್ರಕರಣವು ಪ್ರಸ್ತುತ ಅಲ್ಲಿನ ಕಾನೂನಿನಂತೆ ಪ್ರಕ್ರಿಯೆಯಲ್ಲಿದೆ. ನಾವು ಹೇಳಿದಂತೆ, ಕತಾರ್‌ನ ಮೇಲ್ಮನವಿ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಲಾಗಿದೆ” ಎಂದು ಅರಿಂದಮ್ ಬಾಗ್ಚಿ ಕಳೆದ ವಾರ ತಿಳಿಸಿದ್ದರು.

ಆಗಸ್ಟ್ 2022 ರಲ್ಲಿ, ಕತಾರ್ ಪೊಲೀಸರು ಎಂಟು ಮಾಜಿ ಭಾರತೀಯ ನೌಕಾಪಡೆಯ ಅಧಿಕಾರಿಗಳನ್ನು ಮಧ್ಯಪ್ರಾಚ್ಯ ರಾಷ್ಟ್ರದ ಮೂಲದ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ ಇಸ್ರೇಲ್‌ಗೆ ಗೂಢಚಾರರಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಶಂಕೆಯ ಮೇಲೆ ಬಂಧಿಸಿದ್ದರು.

ಈ ಅಧಿಕಾರಿಗಳ ಜಮೀನಿನ ಅರ್ಜಿಗಳನ್ನು ಕತಾರ್‌ ನ್ಯಾಯಾಲಯ ಹಲವು ಬಾರಿ ತಿರಸ್ಕರಿಸಿತ್ತು. ಈ ವರ್ಷದ ಅಕ್ಟೋಬರ್‌ನಲ್ಲಿ ಕತಾರ್‌ನ ಪ್ರಥಮ ನಿದರ್ಶನದ ನ್ಯಾಯಾಲಯವು ಮರಣದಂಡನೆಯನ್ನು ಘೋಷಿಸಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ಕದನ ವಿರಾಮ ಸೋಗಿನಲ್ಲಿ ಅಮೆರಿಕದ ಹೈಡ್ರಾಮ: ಟ್ರಂಪ್ ದಾಳಿ ಮುಂದೂಡಿಕೆಗೆ ಇರಾನ್ ವ್ಯಂಗ್ಯ

ಯುದ್ಧೋನ್ಮಾದಲ್ಲಿ ಮೆರೆಯುತ್ತಿದ್ದ ಅಮೆರಿಕ ಕೊನೆಗೂ ಇರಾನ್‌ನ ಖಡಕ್ ಎಚ್ಚರಿಕೆಗೆ ಮಣಿದಂತೆ ಕಾಣುತ್ತಿದೆ....

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...