ಜಾತಿ ಗಣತಿಯು ಅಲ್ಪಸಂಖ್ಯಾತರ ‘ಎಕ್ಸ್-ರೇ’: ರಾಹುಲ್ ಗಾಂಧಿ

Date:

ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳ ಸತ್ಯಾಸತ್ಯತೆ ಅರಿಯಲು ದೇಶದಲ್ಲಿ ಜಾತಿ ಗಣತಿಯ ‘ಎಕ್ಸ್ ರೇ’ ಅಗತ್ಯವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದರು.

ಮಧ್ಯ ಪ್ರದೇಶದ ಶಾಹದೋಲ್‌ನ ಸಾರ್ವಜನಿಕ ರ‍್ಯಾಲಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಜಾತಿ ಗಣತಿ ನಡೆಯಬೇಕಿದೆ. ಇದು ಅಲ್ಪಸಂಖ್ಯಾತರ ಸತ್ಯದ ‘ಎಕ್ಸ್-ರೇ’ ಕೂಡ ಆಗಲಿದೆ ಎಂದರು.

“ಏನೇ ಬಂದರೂ ಜಾತಿ ಗಣತಿ ನಡೆಸುವಂತೆ ಕೇಂದ್ರಕ್ಕೆ ಒತ್ತಾಯಿಸುತ್ತೇವೆ. ಹಿಂದುಳಿದ ವರ್ಗಗಳು, ದಲಿತರು, ಆದಿವಾಸಿಗಳ ಸತ್ಯಾಸತ್ಯತೆ ಅರಿಯಲು ಜಾತಿ ಗಣತಿ ‘ಎಕ್ಸ್ ರೇ’ ಆಗಿದೆ. ಇಂದು ಆದಿವಾಸಿಗಳಿಗೆ ಯಾವ ಹಕ್ಕುಗಳನ್ನು ನೀಡಬೇಕು, ಒಬಿಸಿ ಮತ್ತು ಎಸ್‌ಟಿ ವರ್ಗಗಳಿಗೆ ಯಾವ ಸ್ಥಾನಮಾನವನ್ನು ನೀಡಬೇಕು ಎಂಬುದನ್ನು ಇದು ನಿರ್ಧರಿಸುತ್ತದೆ. ಜಾತಿ ಗಣತಿ ದೇಶದ ಮುಂದಿರುವ ಪ್ರಶ್ನೆ. ನಾವು ಜಾತಿ ಗಣತಿಯ ಬಗ್ಗೆ ಏಕೆ ಮಾತನಾಡುತ್ತಿದ್ದೇವೆ ಎಂದರೆ ನಾವು ಅದನ್ನು ಖಂಡಿತಾ ಜಾರಿಗೊಳಿಸುತ್ತೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಇಸ್ರೇಲ್‌ ದಾಳಿ ಖಂಡಿಸಿ ಪ್ಯಾಲೆಸ್ತೀನಿಯರ ಹಕ್ಕುಗಳಿಗೆ ಕಾಂಗ್ರೆಸ್ ಬೆಂಬಲ

“ಲಾಲ್ ಕೃಷ್ಣ ಅಡ್ವಾಣಿ ಅವರು ಬಿಜೆಪಿ – ಆರ್‌ಎಸ್‌ಎಸ್‌ ಮೂಲ ಪ್ರಯೋಗಾಲಯವು ಗುಜರಾತ್‌ನಲ್ಲಿಲ್ಲ. ಆದರೆ ಅದು ಮಧ್ಯ ಪ್ರದೇಶದಲ್ಲಿದೆ ಎಂದು ತಮ್ಮ ಪುಸ್ತಕರಲ್ಲಿ ಬರೆದಿದ್ದಾರೆ. ಮಧ್ಯಪ್ರದೇಶದ ಬಿಜೆಪಿಯ ಪ್ರಯೋಗಾಲಯದಲ್ಲಿ ಸತ್ತವರಿಗೆ ಚಿಕಿತ್ಸೆ ನೀಡಿ ಅವರ ಹಣವನ್ನು ದೋಚಲಾಗುತ್ತಿದೆ. ಬಿಜೆಪಿಯ ಪ್ರಯೋಗಾಲಯದಲ್ಲಿ ಅಲ್ಲಿನ ನಾಯಕರು ಆದಿವಾಸಿಗಳ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಾರೆ” ಎಂದು ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದರು.

“2013 ರಲ್ಲಿ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದ ಬೃಹತ್ ನೇಮಕಾತಿ ಹಗರಣವಾದ ವ್ಯಾಪಂನಿಂದ 1 ಕೋಟಿ ಯುವಕರ ಭವಿಷ್ಯ ಹಾಳಾಗುತ್ತಿದೆ. ಇಲ್ಲಿಯವರೆಗೆ ನಾಲ್ವರ ಹತ್ಯೆಯಾಗಿದೆ. ದೊಡ್ಡ ಹುದ್ದೆಗಳಿಗೆ ನೇಮಕವಾಗಲು ಲಕ್ಷ ಲಕ್ಷ ರೂ. ಲಂಚ ನೀಡಬೇಕು. ಅಲ್ಲದೆ ಇಲ್ಲಿಯವರೆಗೂ 18 ವರ್ಷಗಳಲ್ಲಿ ಮಧ್ಯಪ್ರದೇಶದಲ್ಲಿ 18 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ” ಎಂದು ರಾಹುಲ್ ತಿಳಿಸಿದರು.

ನವೆಂಬರ್ 7 ರಿಂದ 30 ರ ನಡುವೆ ಛತ್ತೀಸ್‌ಗಢ , ಮಧ್ಯಪ್ರದೇಶ, ರಾಜಸ್ಥಾನ, ತೆಲಂಗಾಣ ಮತ್ತು ಮಿಜೋರಾಂ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ಘೋಷಿಸಿದ ಒಂದು ದಿನದ ನಂತರ ರಾಹುಲ್ ಗಾಂಧಿಯವರ ಚುನಾವಣಾ ರ‍್ಯಾಲಿ ಹಮ್ಮಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...