ಬಿಜೆಪಿಗರೇ ಸಿದ್ಧರಾಗಿ, ಹೈಡ್ರೋಜನ್ ಬಾಂಬ್ ಬರುತ್ತಿದೆ: ರಾಹುಲ್ ಗಾಂಧಿ

Date:

‘ಮತ ಕಳವು’ ಕುರಿತು ಹೊಸ ಮಾಹಿತಿಗಳ ‘ಹೈಡ್ರೋಜನ್ ಬಾಂಬ್’ನ್ನು ಪಕ್ಷವು ಶೀಘ್ರದಲ್ಲಿಯೇ ಸ್ಫೋಟಿಸಲಿದೆ ಮತ್ತು ಅದರ ಬಳಿಕ ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶಕ್ಕೆ ತನ್ನ ಮುಖವನ್ನು ತೋರಿಸಲು ಸಾಧ್ಯವಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಸೋಮವಾರ ಹೇಳಿದರು.

ತನ್ನ ‘ಮತದಾರರ ಅಧಿಕಾರ ಯಾತ್ರೆ’ಯ ಸಮಾರೋಪ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಹಾರ ಕ್ರಾಂತಿಕಾರಿ ರಾಜ್ಯವಾಗಿದೆ ಮತ್ತು ಅದು ದೇಶಕ್ಕೆ ಸಂದೇಶವೊಂದನ್ನು ನೀಡಿದೆ ಎಂದರು.

‘ಬಿಜೆಪಿಯು ಸಂವಿಧಾನದ ಕಗ್ಗೊಲೆ ಮಾಡಲು ನಾವು ಅವಕಾಶವನ್ನು ನೀಡುವುದಿಲ್ಲ ಮತ್ತು ಅದಕ್ಕಾಗಿಯೇ ನಾವು ಯಾತ್ರೆಯನ್ನು ನಡೆಸಿದ್ದೇವೆ. ನಮಗೆ ಭಾರೀ ಜನಸ್ಪಂದನ ಲಭಿಸಿದೆ. ಜನರು ಭಾರೀ ಸಂಖ್ಯೆಯಲ್ಲಿ ಹೊರಬಂದು ‘ವೋಟ್ ಚೋರ್ ಗದ್ದಿ ಛೋಡ್’ ಎಂಬ ಘೋಷಣೆಗಳನ್ನು ಕೂಗಿದ್ದಾರೆ’ ಎಂದ ರಾಹುಲ್, ‘ನಾನು ಬಿಜೆಪಿ ಜನರಿಗೆ ಹೇಳಲು ಬಯಸುತ್ತೇನೆ. ಅಣುಬಾಂಬ್‌ಗಿಂತ ದೊಡ್ಡದೇನಾದರ ಬಗ್ಗೆ ಕೇಳಿದ್ದೀರಾ? ಅದು ಹೈಡ್ರೋಜನ್ ಬಾಂಬ್. ಬಿಜೆಪಿಗರೇ ಸಿದ್ಧರಾಗಿ, ಹೈಡ್ರೋಜನ್ ಬಾಂಬ್ ಬರುತ್ತಿದೆ. ಜನರು ಶೀಘ್ರವೇ ವೋಟ್ ಚೋರಿಯ ವಾಸ್ತವತೆಯನ್ನು ಕಂಡುಕೊಳ್ಳಲಿದ್ದಾರೆ’ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಒಬಿಸಿಗಳಿಗೆ ಸಿಗಬೇಕಿದೆ ಶಾಸನಸಭೆಗಳಲ್ಲಿ ಮೀಸಲಾತಿ

‘ಮುಂಬರುವ ದಿನಗಳಲ್ಲಿ ಹೈಡ್ರೋಜನ್ ಬಾಂಬ್ ಬಂದ ಬಳಿಕ ಮೋದಿಯವರಿಗೆ ದೇಶಕ್ಕೆ ತನ್ನ ಮುಖವನ್ನು ತೋರಿಸಲೂ ಸಾಧ್ಯವಾಗುವುದಿಲ್ಲ ಎಂದು ನಾನು ನಿಮಗೆ ಖಾತರಿ ನೀಡುತ್ತೇನೆ. ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಳಲ್ಲಿ ಮತಗಳನ್ನು ಕದಿಯಲಾಗಿತ್ತು ಮತ್ತು ಬಳಿಕ ಕರ್ನಾಟಕದ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಮಹದೇವಪುರದಲ್ಲಿ ಹೇಗೆ ವೋಟ್ ಚೋರಿ ಮಾಡಲಾಗಿತ್ತು ಎನ್ನುವುದನ್ನು ನಮ್ಮ ಪಕ್ಷವು ಪುರಾವೆಗಳ ಸಹಿತ ತೋರಿಸಿದೆ’ ಎಂದರು.

ನಾನು ಬಿಹಾರದ ಯುವಜನತೆಗೆ ಹೇಳಲು ಬಯಸುತ್ತೇನೆ. ವೋಟ್ ಚೋರಿ ಎಂದರೆ ಅದು ಹಕ್ಕುಗಳ ಕಳವು, ಪ್ರಜಾಪ್ರಭುತ್ವದ ಕಳವು,ಉದ್ಯೋಗದ ಕಳವು. ಅವರು ನಿಮ್ಮ ಪಡಿತರ ಚೀಟಿ ಮತ್ತು ಇತರ ಹಕ್ಕುಗಳನ್ನ ಕಿತ್ತುಕೊಳ್ಳಲಿದ್ದಾರೆ ’ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...