ಗಾರ್ಮೆಂಟ್‌ಗೆ ರಾಹುಲ್ ಗಾಂಧಿ ಭೇಟಿ; ಅಮೆರಿಕ ಸುಂಕಗಳಿಂದ ಉದ್ಯೋಗ ನಷ್ಟದ ಎಚ್ಚರಿಕೆ

Date:

ಹರಿಯಾಣದ ಗಾರ್ಮೆಂಟ್‌ ಕಾರ್ಖಾನೆಗೆ ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್‌ ಮುಖಂಡ ರಾಹುಲ್ ಗಾಂಧಿ ಭೇಟಿ ನೀಡಿದ್ದರು. ಭಾರತದ ಮೇಲೆ ಅಮೆರಿಕ ಹೇರಿರುವ 50% ಸುಂಕಗಳ ಕುರಿತು ಮಾತನಾಡಿದ ಅವರು, ಅಮೆರಿಕದ ಸುಂಕಗಳು ಭಾರತದ ಜವಳಿ ಕ್ಷೇತ್ರದಲ್ಲಿನ ರಫ್ತು, ಉದ್ಯೋಗಗಳು ಹಾಗೂ ವ್ಯವಹಾರಗಳಿಗೆ ಹೇಗೆ ಬೆದರಿಕೆ ಹಾಕುತ್ತವೆ ಎಂಬುದನ್ನು ವಿವರಿಸಿದ್ದಾರೆ.

ತಮ್ಮ ಭೇಟಿ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, “ಅಮೆರಿಕದ 50% ಸುಂಕಗಳು ಮತ್ತು ಅನಿಶ್ಚಿತತೆಯು ಭಾರತದ ಜವಳಿ ರಫ್ತುದಾರರಿಗೆ ಭೀರಕ ಹಾನಿ ಮಾಡುತ್ತಿದೆ. ಉದ್ಯೋಗ ನಷ್ಟಗಳು, ಕಾರ್ಖಾನೆ ಮುಚ್ಚುವಿಕೆಗಳು ಹಾಗೂ ಕಡಿಮೆ ಉತ್ಪಾದನೆಯು ನಮ್ಮ ‘ಸತ್ತ ಆರ್ಥಿಕತೆ’ಯ ವಾಸ್ತವವನ್ನು ಬಿಚ್ಚಿಡುತ್ತದೆ. ಜವಳಿ ಕ್ಷೇತ್ರದ 4.5 ಕೋಟಿ ಉದ್ಯೋಗಗಳು ಮತ್ತು ಲಕ್ಷಾಂತರ ವ್ಯವಹಾರಗಳು ಸ್ಥಗಿತಗೊಂಡಿದ್ದರೂ, ಪ್ರಧಾನಿ ಮೋದಿ ಅವರು ಯಾವುದೇ ಪರಿಹಾರ ಅಥವಾ ಪ್ರತಿಕ್ರಿಯೆ ನೀಡುವುದಿಲ್ಲ. ಮೋದಿ ಜಿ, ನೀವು ಜವಾಬ್ದಾರರು – ದಯವಿಟ್ಟು ಇದನ್ನು ಪರಿಹರಿಸಿ!” ಎಂದಿದ್ದಾರೆ.

ಕಾರ್ಖಾನೆಯ ಮಾಲೀಕರು ಮತ್ತು ವ್ಯವಸ್ಥಾಪಕರ ಹೆಸರುಗಳನ್ನು ಬಹಿರಂಗಪಡಿಸದ ರಾಹುಲ್, “ಸುಮಾರು 500 ಕಾರ್ಮಿಕರು (ಹೆಚ್ಚಾಗಿ ಉತ್ತರ ಪ್ರದೇಶ ಮತ್ತು ಬಿಹಾರದಿಂದ ವಲಸೆ ಬಂದವರು) ಮೂರು ಘಟಕಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ಚೀನೀ ಯಂತ್ರಗಳಲ್ಲಿ ಕಾರ್ಡುರಾಯ್, ಡೆನಿಮ್ ಹಾಗೂ ಹತ್ತಿಯನ್ನು ಉತ್ಪಾದಿಸುತ್ತಾರೆ. ಎಲ್ಲರೂ ಕೈಜೋಡಿಸಿ ಕೆಲಸ ಮಾಡುತ್ತಿದ್ದಾರೆ. ಆದರೆ, ಸುಂಕಗಳು ಹೆಚ್ಚಾಗುತ್ತವೆಯೇ ಅಥವಾ ಕಡಿಮೆಯಾಗುತ್ತವೆಯೇ ಹಾಗೂ ತಮ್ಮ ಉದ್ಯೋಗಗಳ ಪರಿಸ್ಥಿತಿ ಏನಾಗುತ್ತದೆ ಎಂಬುದರ ಬಗ್ಗೆ ತುಂಬಾ ಅನಿಶ್ಚಿತತೆ ಹೊಂದಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕಡಿಮೆ ಸುಂಕಗಳನ್ನು ಹೊಂದಿರುವ ಬಾಂಗ್ಲಾದೇಶವು ತನ್ನ ಮಹಿಳಾ ಕಾರ್ಯಪಡೆಯನ್ನು ತೊಡಗಿಸಿಕೊಂಡು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದೆ. ಆ ರಾಷ್ಟ್ರಕ್ಕೆ ಹೋಲಿಸಿದರೆ ಜವಳಿ ರಫ್ತಿನ ಮೇಲಿನ 50% ಸುಂಕಗಳು ಇಲ್ಲಿನ ಜವಳಿ ಉದ್ದಿಮೆದಾರರನ್ನು ನಷ್ಟಕ್ಕೆ ದೂಡುತ್ತವೆ. ಮುಂದಿನ ಐದು ವರ್ಷಗಳಲ್ಲಿ ಜವಳಿ ಉದ್ಯಮವು ಸ್ಥಗಿತಗೊಳ್ಳಬಹುದು ಮತ್ತು ಉದ್ಯೋಗ ನಷ್ಟವನ್ನು ಎದುರಿಸಬಹುದು ಎಂಬ ಆತಂಕದಲ್ಲಿ ಇಲ್ಲಿನ ಕಾರ್ಮಿಕರಿದ್ದಾರೆ” ಎಂದು ಹೇಳಿದ್ದಾರೆ.

ಈ ಲೇಖನ ಓದಿದ್ದೀರಾ?: ಪ್ರಾದೇಶಿಕ ಪಕ್ಷಗಳನ್ನು ನುಂಗುವ ಬಿಜೆಪಿ ತಂತ್ರ ಅರಿಯಲು ಜೆಡಿಎಸ್‌ಗೆ ಸಕಾಲ!

ರಾಹುಲ್ ಗಾಂಧಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೇಂದ್ರ ಜವಳಿ ಸಚಿವ ಗಿರಿರಾಜ್ ಸಿಂಗ್, “ಭಾರತದ ಜವಳಿ ರಫ್ತುಗಳು ವಿಕಸನಗೊಳ್ಳುತ್ತಿವೆ. ಭೌಗೋಳಿಕ ರಾಜಕೀಯ ಮತ್ತು ವ್ಯಾಪಾರ ಚಲನಶೀಲತೆಯ ನಡುವೆ ರಚನಾತ್ಮಕ ಶಕ್ತಿಯನ್ನು ಪ್ರದರ್ಶಿಸಿವೆ. ಮಾನವ ನಿರ್ಮಿತ ನೂಲು, ಬಟ್ಟೆ ಮತ್ತು ತಯಾರಿಸಿದ ವಸ್ತುಗಳು 4% ಹೆಚ್ಚಳವನ್ನು ದಾಖಲಿಸಿದರೆ, ಸಿದ್ಧ ಉಡುಪುಗಳು ಸುಮಾರು 7% ರಷ್ಟು ಬೆಳವಣಿಗೆಯನ್ನು ದಾಖಲಿಸಿವೆ” ಎಂದು ಹೇಳಿದ್ದಾರೆ.

ಕೆಲವು ವರದಿಗಳ ಪ್ರಕಾರ, ಅಮೆರಿಕದ ಸುಂಕ ಹೇರಿಕೆಯಿಂದಾಗಿ ಭಾರತದ ಜವಳಿ ರಫ್ತುಗಳು ಕಡಿಮೆಯಾಗಿವೆ. ಕಾಟನ್ ಫ್ಯಾಬ್ರಿಕ್ ಎಕ್ಸ್‌ಪೋರ್ಟ್ 30% ಕಡಿಮೆಯಾಗಿದೆ. ಪರಿಣಾಮ, ಜವಳಿ ಉದ್ಯಮದಲ್ಲಿನ 4.5 ಕೋಟಿ ಉದ್ಯೋಗಗಳು ಅಪಾಯದಲ್ಲಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...