ಬಜರಂಗ್ ಪುನಿಯಾ ಜೊತೆ ಕುಸ್ತಿಯಾಡಿದ ರಾಹುಲ್ ಗಾಂಧಿ

Date:

ಹರ್ಯಾಣಕ್ಕೆ ಭೇಟಿ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇದೇ ಸಂದರ್ಭದಲ್ಲಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಬಜರಂಗ್ ಪುನಿಯಾ ಅವರೊಂದಿಗೆ ಕುಸ್ತಿಯಾಡಿದ್ದಾರೆ.

ಬಜರಂಗ್ ಪುನಿಯಾ ಅವರೊಂದಿಗೆ ಕುಸ್ತಿಯಾಡಿರುವ ಹಲವು ಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಇಬ್ಬರು ಕುಸ್ತಿ ತಾಲೀಮು ನಡೆಸುತ್ತಿದ್ದು, ಇದನ್ನು ಹಲವು ಮಂದಿ  ನೋಡುತ್ತಿರುವುದು ಚಿತ್ರಗಳಲ್ಲಿ ಕಂಡು ಬಂದಿದೆ.

ಹಲವಾರು ವರ್ಷಗಳ ಸತತ ಪರಿಶ್ರಮ, ಶಿಸ್ತು, ತಾಳ್ಮೆಯ ಜೊತೆ ತಮ್ಮ ರಕ್ತವನ್ನು ಬಸಿದ ಆಟಗಾರ ತನ್ನ ದೇಶಕ್ಕೆ ಪದಕ ತಂದುಕೊಡುತ್ತಾನೆ. ಇಂದು ತಾನು ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಹಾಗೂ ಇತರ ಕುಸ್ತಿಪಟುಗಳನ್ನು ಭೇಟಿ ಮಾಡಿ ಅವರ ಸಮಸ್ಯೆಗಳ ಬಗ್ಗೆ ಚರ್ಚಿಸಿದೆ ಎಂದು ರಾಹುಲ್ ಗಾಂಧಿ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಆಟಗಾರರು, ಭಾರತದ ಸುಪುತ್ರಿಯರು ಅಖಾಡದಲ್ಲಿ ಕುಸ್ತಿ ಕೈಬಿಟ್ಟು ತಮ್ಮ ಹಕ್ಕುಗಳಿಗಾಗಿ ಮತ್ತು ನ್ಯಾಯಕ್ಕಾಗಿ ಬೀದಿಗಳಲ್ಲಿ ಹೋರಾಟ ನಡೆಸಿದರೂ ನ್ಯಾಯ ಸಿಗದಿದ್ದರೆ ಮುಂದೆ ತಮ್ಮ ಮಕ್ಕಳನ್ನು ಕ್ರೀಡೆಗಳಿಗೆ ಕಳಿಸಲು ಯಾರು ಪ್ರೋತ್ಸಾಹಿಸುತ್ತಾರೆ? ಇವರೆಲ್ಲ ರೈತ ಕುಟುಂಬದಿಂದ ಬಂದ ಅಮಾಯಕರು, ನೇರವಂತಿಕೆ ಹಾಗೂ ಸರಳ ಸ್ವಭಾವದ ಜನರು. ಇವರು ತ್ರಿವರ್ಣ ಧ್ವಜದ ಸೇವೆ ಮಾಡಲು ಬಿಡೋಣ ಹಾಗೂ ಸಂಪೂರ್ಣ ಗೌರವ ಹಾಗೂ ಘನತೆಯೊಂದಿಗೆ ಭಾರತವು ಹೆಮ್ಮೆ ಪಡುವಂತೆ ಮಾಡಲು ಅವಕಾಶ ನೀಡೋಣ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ₹40 ಸಾವಿರ ಕೋಟಿ ಲೂಟಿ ಆರೋಪ; ಪ್ರಧಾನಿ ಮೋದಿ ಏನು ಹೇಳುತ್ತಾರೆ?

ಬಜರಂಗ್ ಪುನಿಯಾ ಅವರೊಂದಿಗೆ ಇತರ ರಾಷ್ಟ್ರಮಟ್ಟದ ಕುಸ್ತಿಪಟುಗಳಾದ ದೀಪಕ್ ಪುನಿಯಾ ಸೇರಿದಂತೆ ಮುಂತಾದವರನ್ನು ರಾಹುಲ್ ಭೇಟಿ ಮಾಡಿದರು.

ದೀಪಕ್ ಪೂನಿಯಾ 2022 ರ ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತರಾಗಿದ್ದಾರೆ.

ರಾಹುಲ್ ಗಾಂಧಿ ಭೇಟಿಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬಜರಂಗ್ ಪುನಿಯಾ, ‘ರಾಹುಲ್ ಗಾಂಧಿ ಅವರು ಕುಸ್ತಿಪಟುವಿನ ದೈನಂದಿನ ಚಟುವಟಿಕೆಗಳನ್ನು ನೋಡಲು ಬಂದಿದ್ದರು. ಅವರು ನನ್ನೊಂದಿಗೆ ಕುಸ್ತಿ ಮತ್ತು ವ್ಯಾಯಾಮ ಮಾಡಿದರು’ ಎಂದು ತಿಳಿಸಿದ್ದಾರೆ.

ಕ್ರೀಡಾ ಸಚಿವಾಲಯವು ಸಂಜಯ್‌ ಸಿಂಗ್‌ ನೇತೃತ್ವದ ನೂತನ ಡಬ್ಲ್ಯುಎಫ್ಐ ಪದಾಧಿಕಾರಿಗಳ ಆಯ್ಕೆಯನ್ನು ಅಮಾನತುಗೊಳಿಸಿದೆ.

ಬಜರಂಗ್ ಪುನಿಯಾ ಸೇರಿದಂತೆ ಹಲವಾರು ಒಲಿಂಪಿಕ್ ಪದಕ ವಿಜೇತ ಕುಸ್ತಿಪಟುಗಳು ಬ್ರಿಜ್ ಭೂಷಣ್ ಅವರ ಸಹಾಯಕ ಸಂಜಯ್ ಸಿಂಗ್ ಆಯ್ಕೆಯನ್ನು ವಿರೋಧಿಸಿದ್ದಾರೆ.

ಸಂಜಯ್ ಸಿಂಗ್ ಅವರ ಆಯ್ಕೆಯನ್ನು ವಿರೋಧಿಸಿ ಭಜರಂಗ್ ಪುನಿಯಾ, ವೀರೇಂದ್ರ ಸಿಂಗ್ ಪದ್ಮಶ್ರೀ ಪ್ರಶಸ್ತಿ ಹಿಂತಿರುಗಿಸಿದರೆ, ವಿನೀಶ್ ಪೋಗಟ್ ಅರ್ಜುನ ಪ್ರಶಸ್ತಿ ಹಾಗೂ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ವಾಪಸ್ ಮಾಡಿದರು. ಮತ್ತೊಬ್ಬ ಒಲಿಂಪಿಕ್ ಪದಕ ವಿಜೇತೆ ಸಾಕ್ಷಿ ಮಲಿಕ್ ಕುಸ್ತಿ ತ್ಯಜಿಸುವುದಾಗಿ ಘೋಷಿಸಿದ್ದಾರೆ.

blank profile picture 973460 640
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...