ಸಂಸತ್ತಿನಲ್ಲಿ ನೀಟ್ ಚರ್ಚೆಗೆ ಆಗ್ರಹಿಸಿ ಪ್ರಧಾನಿಗೆ ಪತ್ರ ಬರೆದ ರಾಹುಲ್ ಗಾಂಧಿ

Date:

ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌-ಯುಜಿ ವಿವಾದದ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ.

“ನೀಟ್‌ ವಿಷಯದ ಬಗ್ಗೆ ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಿ ಈ ಪತ್ರ ಬರೆಯುತ್ತಿದ್ದೇನೆ. ನಿಮಗೆ ತಿಳಿದಿರುವಂತೆ ನೀಟ್‌ ವಿಷಯದ ಬಗ್ಗೆ ವಿಪಕ್ಷಗಳ ಮನವಿಯನ್ನು ಜೂನ್‌ 28ರಂದು ಸಂಸತ್ತಿನ ಎರಡೂ ಸದನಗಳಲ್ಲಿ ನಿರಾಕರಿಸಲಾಯಿತು. ನಿನ್ನೆ ಇದೇ ವಿಷಯವಾಗಿ ಚರ್ಚಿಸಲು ವಿಪಕ್ಷ ಮನವಿ ಮಾಡಿತ್ತು. ಲೋಕಸಭೆಯ ಗೌರನಾನ್ವಿತ ಸ್ಪೀಕರ್‌ ಅವರು ಸರ್ಕಾರದೊಂದಿಗೆ ಚರ್ಚಿಸುವುದಾಗಿ ವಿಪಕ್ಷಕ್ಕೆ ಮಾತು ಕೊಟ್ಟಿದ್ದರು” ಎಂದು ರಾಹುಲ್ ವಿವರಿಸಿದ್ದಾರೆ.

“ನಮ್ಮ ಉದ್ದೇಶ ರಚನಾತ್ಮಕವಾಗಿ ಮುಂದಿನ ದಾರಿಯನ್ನು ಕಂಡುಕೊಳ್ಳುವುದಾಗಿದೆ. ಈ ಸಂದರ್ಭದಲ್ಲಿ ನಮ್ಮ ಒಂದೇ ಕಾಳಜಿ ಭಾರತದಾದ್ಯಂತ ಸುಮಾರು 24 ಲಕ್ಷ ನೀಟ್‌ ಆಕಾಂಕ್ಷಿಗಳ ಅಬ್ಯುದಯವಾಗಿದೆ. ಲಕ್ಷಾಂತರ ಕುಟುಂಬಗಳು ತಮ್ಮ ಮಕ್ಕಳಿಗಾಗಿ ವೈಯುಕ್ತಿಕವಾಗಿ ಅದ್ಭುತ ತ್ಯಾಗ ಮಾಡಿದ್ದಾರೆ. ಇವರಲ್ಲಿ ಬಹುತೇಕರಿಗೆ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಜೀವಮಾನದ ಕನಸಿಗೆ ದ್ರೋಹವಾಗಿದೆ” ಎಂದು ರಾಹುಲ್‌ ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೊದಲ ಭಾಷಣದಲ್ಲೇ ಬಿಜೆಪಿಗರ ಬೆವರಿಳಿಸಿದ ರಾಹುಲ್ ಮತ್ತು ಮಹುವಾ

“ಇಂದು ಈ ವಿದ್ಯಾರ್ಥಿಗಳು ಹಾಗೂ ಅವರ ಕುಟುಂಬಗಳು ನಮ್ಮ ಕಡೆ ಮುಖ ಮಾಡಿದ್ದಾರೆ.ಅವರ ಸಾರ್ವಜನಿಕ ಪ್ರತಿನಿಧಿಗಳಾಗಿ ಸಮಸ್ಯೆಯನ್ನು ಪರಿಹರಿಸಲು ದಿಟ್ಟ ಹಾಗೂ ನಿರ್ಣಾಯಕ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಿದೆ. ನೀಟ್‌ ಪರೀಕ್ಷೆ ಅಕ್ರಮಗಳಿಂದಾಗಿ ನಮ್ಮ ಶಿಕ್ಷಣ ವ್ಯವಸ್ಥೆಯಲ್ಲಿ ಹೊಲಸುಗೊಂಡಿರುವುದರಿಂದ ತಕ್ಷಣ ಗಮನಹರಿಸಬೇಕಿದೆ. ಕಳೆದ 7 ವರ್ಷಗಳಲ್ಲಿ 70 ಪ್ರಶ್ನೆ ಪರೀಕ್ಷೆ ಸೋರಿಕೆಗಳನ್ನು ನೋಡಿದ್ದೇವೆ” ಎಂದು ರಾಹುಲ್ ತಿಳಿಸಿದ್ದಾರೆ.

“ಸರ್ಕಾರವು ಪರೀಕ್ಷೆಗಳನ್ನು ಮುಂದೂಡಿದ್ದು, ಶಿಕ್ಷಣ ವ್ಯವಸ್ಥೆಯ ಅತ್ಯಂತ ಆಳವಾಗಿರುವ ಅಸಮರ್ಪಕ ವ್ಯವಸ್ಥೆಯನ್ನು ಮರೆಮಾಚಲು ಎನ್‌ಟಿಎದ ಮುಖ್ಯಸ್ಥರನ್ನು ಬದಲಿಸಿದೆ. ನಮ್ಮ ವಿದ್ಯಾರ್ಥಿಗಳು ಉತ್ತರಗಳಿಗೆ ಅರ್ಹರಾಗಿದ್ದರು. ಸಂಸತ್ತಿನ ಚರ್ಚೆಯು ವಿದ್ಯಾರ್ಥಿಗಳಲ್ಲಿ ತಮ್ಮ ಗುರಿಯನ್ನು ಮರಳಿ ಪಡೆಯುವುದರತ್ತ ದಾರಿ ಮಾಡಿಕೊಡಬಹುದು.ಈ ವಿಷಯವನ್ನು ತುರ್ತಾಗಿ ಪರಿಗಣಿಸಬೇಕಾಗಿದೆ. ಹಾಗಾಗಿ ನಾನು ಸರ್ಕಾರವು ಸಂಸತ್ತಿನಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ. ನೀವು ಈ ಚರ್ಚೆಯನ್ನು ಮುನ್ನೆಡೆಸಿದರೆ ಸೂಕ್ತವಾಗಿರುತ್ತದೆ ಎಂದು ನಾನು ನಂಬಿದ್ದೇನೆ” ಎಂದು ರಾಹುಲ್‌ ಗಾಂಧಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...