ಕೇಂಬ್ರಿಡ್ಜ್ ವಿವಿಯಲ್ಲಿ ರಾಹುಲ್ ಉಪನ್ಯಾಸ: ನ್ಯಾಯ ಯಾತ್ರೆಗೆ 5 ದಿನ ಬಿಡುವು

Date:

ಇಂಗ್ಲೆಂಡ್‌ನ ಕೇಂಬ್ರಿಡ್ಜ್‌ ವಿವಿಯಲ್ಲಿ ಎರಡು ವಿಶೇಷ ಉಪನ್ಯಾಸ ಹಾಗೂ ನವದೆಹಲಿಯ ಮುಖ್ಯ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಫೆ.26ರಿಂದ ಮಾರ್ಚ್‌ 1ರವರೆಗೂ ಭಾರತ್ ಜೋಡೋ ನ್ಯಾಯ ಯಾತ್ರೆಯಲ್ಲಿ ಬಿಡುವು ತೆಗೆದುಕೊಳ್ಳಲಿದ್ದಾರೆ.

ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. “ರಾಹುಲ್ ಗಾಂಧಿ ಅವರು ತಮ್ಮ ದೀರ್ಘಕಾಲದ ಬದ್ಧತೆಗಳನ್ನು ಪರಿಪೂರ್ಣಗೊಳಿಸುವ ಫೆ.27 ಹಾಗೂ ಫೆ.28ರಂದು ಇಂಗ್ಲೆಂಡ್‌ನ ಕೇಂಬ್ರಿಡ್ಜ್‌ ವಿವಿಯಲ್ಲಿ ಉಪನ್ಯಾಸ ನೀಡುವುದು ಹಾಗೂ ನವದೆಹಲಿಯಲ್ಲಿ ಇತರ ಪ್ರಮುಖ ಸಭೆಗಳಲ್ಲಿ ಪಾಲ್ಗೊಳ್ಳುವುದರಿಂದ ಫೆ.26ರಿಂದ ಮಾ.01ರ ವರೆಗೂ ಭಾರತ್ ಜೋಡೋ ನ್ಯಾಯಯಾತ್ರೆಯಲ್ಲಿ ಬಿಡುವು ತೆಗೆದುಕೊಳ್ಳಲಿದ್ದಾರೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರಕ್ಷಕ ಇಲಾಖೆ ಯಾತಕ್ಕಾಗಿ, ಪೊಲೀಸರು ಇರುವುದು ಯಾರ ರಕ್ಷಣೆಗಾಗಿ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಫೆ.24ರಂದು ಉತ್ತರ ಪ್ರದೇಶದ ಮೊರಾದಾಬಾದ್, ಸಂಬಾಲ್, ಅಲಿಘಡ, ಹತ್ರಾಸ್, ಆಗ್ರಾ ಜಿಲ್ಲೆಗಳು ಹಾಗೂ ರಾಜಸ್ಥಾನದ ಧೋಲ್‌ಪುರ್‌ವರೆಗೂ ನ್ಯಾಯ ಯಾತ್ರೆ ಸಾಗಲಿದೆ. ನಂತರ ಮಾ.2ರಂದು ರಾಜಸ್ಥಾನದ ಧೋಲ್‌ಪುರದ ಮೂಲಕ ಜೋಡೋ ಯಾತ್ರೆ ಆರಂಭವಾಗಲಿದೆ.

ಮಾ.2ರಂದು ಮಧ್ಯಪ್ರದೇಶದ ಮೊರೆನಾ, ಗ್ವಾಲಿಯರ್, ಶಿವಪುರಿ,ಗುಣ,ಶಾಜಾಪುರ್ ಹಾಗೂ ಉಜ್ಜೈನ್ನತ್ತ ಯಾತ್ರೆ ಸಾಗಲಿದೆ.ರಾಹುಲ್ ಅವರು ಮಾ.5 ರಂದು ಉಜ್ಜೈನ್‌ನ ಮಹಾಕಾಳೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಇದೇ ದೇಗುಲಕ್ಕೆ ರಾಹುಲ್ ಗಾಂಧಿ 2022ರ ನ.29ರಂದು ಭೇಟಿ ನೀಡಿದ್ದರು.

ಪೂರ್ವದಿಂದ ಪಶ್ಚಿಮಕ್ಕೆ ಸಾಗುವ ಭಾರತ್ ಜೋಡೋ ನ್ಯಾಯ ಯಾತ್ರೆಯು 15 ರಾಜ್ಯಗಳ ಮೂಲಕ 6,700 ಕಿ.ಮೀ ವರೆಗೂ ತೆರಳಲಿದೆ. ಸಾಮಾನ್ಯ ಜನತೆಗೆ ನ್ಯಾಯ ದೊರಕಿಸುವ ಸಂದೇಶ ಸಾರುವುದು ಈ ಯಾತ್ರೆಯ ಪ್ರಮುಖ ಉದ್ದೇಶವಾಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...