ಒಡಿಶಾ ರೈಲು ದುರಂತ | ಹಳಿ ಬದಲಿಸುವ ವ್ಯವಸ್ಥೆಯ ದೋಷ ಕಾರಣ; ಸಚಿವ ಅಶ್ವಿನಿ ವೈಷ್ಣವ್

Date:

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭವಿಸಿದ  ಭೀಕರ ರೈಲು ಅಪಘಾತಕ್ಕೆ ಹಳಿ ಬದಲಿಸುವ ವ್ಯವಸ್ಥೆಯಲ್ಲಿನ (ಎಲೆಕ್ಟ್ರಾನಿಕ್​ ಇಂಟರ್​ಲಾಕಿಂಗ್​ ಸಿಸ್ಟಮ್​) ದೋಷವೇ ಕಾರಣ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

288 ಜನರನ್ನು ಬಲಿ ಪಡೆದ ತ್ರಿವಳಿ ರೈಲು ಅಪಘಾತದ ಘಟನಾ ಸ್ಥಳದಲ್ಲಿ ಭಾನುವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವರು,  `ರೈಲು ಅಪಘಾತ ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದ್ದು, ಅಪಘಾತದ ಮೂಲ ಕಾರಣ ಮತ್ತು ಅದಕ್ಕೆ ಕಾರಣವಾದ ಅಪರಾಧಿಗಳನ್ನು ಗುರುತಿಸಲಾಗಿದೆ’ ಎಂದು ಹೇಳಿದ್ದಾರೆ.

ಹಾನಿಗೀಡಾಗಿರುವ ರೈಲು ಹಳಿಗಳ ದುರಸ್ತಿ ಕಾರ್ಯ ಭರದಿಂದ ಸಾಗಿದ್ದು, ರೈಲ್ವೆ ಅಧಿಕಾರಿಗಳ ಜೊತೆ ಘಟನಾ ಸ್ಥಳದಲ್ಲಿ ಮೊಕ್ಕಾಂ ಹೂಡಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಕ್ಷಣಾ ಕಾರ್ಯಗಳ ಮೇಲ್ವಿಚಾರಣೆ ವಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಬಿಐ ತನಿಖೆ

ತ್ರಿವಳಿ ರೈಲು ಅಪಘಾತದ ಕುರಿತಾದ ಆಡಳಿತಾತ್ಮಕ ಮಾಹಿತಿಯನ್ನು ಪರಿಗಣನೆಗೆ ಇಟ್ಟುಕೊಂಡು ರೈಲ್ವೆ ಮಂಡಳಿಯು, ಸಂಪೂರ್ಣ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಶಿಫಾರಸು ಮಾಡಿದೆʼ ಎಂದು ರೈಲ್ವೆ ಸಚಿವರು ಹೇಳಿದ್ದಾರೆ.

ಶುಕ್ರವಾರ ಸಂಜೆ ಸುಮಾರು 6.50 ಮತ್ತು 7.10 ರ ನಡುವೆ, ಶಾಲಿಮಾರ್-ಚೆನ್ನೈ ನಡುವಿನ ಕೊರಮಂಡಲ್ ಎಕ್ಸ್‌ಪ್ರೆಸ್ ರೈಲು, ಬೆಂಗಳೂರಿನ ಯಶವಂತಪುರ-ಹೌರ ಸೂಪರ್‌ಫಾಸ್ಟ್‌ ರೈಲು ಹಾಗೂ ಗೂಡ್ಸ್ ರೈಲಿನ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಬಹನಾಗಾ ರೈಲು ನಿಲ್ದಾಣದಲ್ಲಿ ನಿಂತಿದ್ದ ಗೂಡ್ಸ್‌ ರೈಲಿಗೆ ವೇಗವಾಗಿ ಬಂದ ಕೊರಮಂಡಲ್ ಎಕ್ಸ್‌ಪ್ರೆಸ್  ರೈಲು ಡಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ರೈಲಿನ ಬೋಗಿಗಳು ಪಕ್ಕದ ಹಳಿಯ ಮೇಲೆ ಬಿದ್ದಿತ್ತು. ಈ ವೇಳೆ ಅದೇ ಮಾರ್ಗದಲ್ಲಿ ಬಂದ ಯಶವಂತಪುರ-ಹೌರ ಸೂಪರ್‌ಫಾಸ್ಟ್‌ ರೈಲು ಹಳಿತಪ್ಪಿ ಬಿದ್ದಿದ್ದ ರೈಲಿನ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆ ನಡೆದ ಸ್ಥಳದಿಂದ 5 ಕಿಲೋ ಮೀಟರ್‌ ದೂರದವರೆಗೂ ಅಪಘಾತದ ಶಬ್ಧ ಕೇಳಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...