ಜಾರ್ಖಂಡ್ | ವಿಶ್ವಾಸ ಮತಯಾಚನೆಗೆ ವಿಧಾನಸಭೆಗೆ ಹೇಮಂತ್ ಸೊರೇನ್ ಆಗಮನ; ರಾಜಭವನದ ಮೇಲೆ ಆರೋಪ

Date:

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇ.ಡಿ ಅಧಿಕಾರಿಗಳಿಂದ ಬಂಧನವಾಗಿ ನ್ಯಾಯಾಂಗ ವಶದಲ್ಲಿರುವ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೇನ್ ವಿಶ್ವಾಸಮತ ಯಾಚನೆ ಸಲುವಾಗಿ ವಿಧಾನಸಭೆಗೆ ಆಗಮಿಸಿದ್ದಾರೆ.

ಮುಖ್ಯಮಂತ್ರಿಯಾಗಿ ನಿಯೋಜಿತಗೊಂಡಿರುವ ಚಂಪೈ ಸೊರೇನ್ ಅವರು ಬಹುಮತ ಸಾಬೀತುಪಡಿಸಲು ಇಂದು ವಿಶ್ವಾಸಮತ ಯಾಚಿಸುತ್ತಿರುವ ಕಾರಣ ಸೊರೇನ್‌ಗೆ ಜಾರ್ಖಂಡ್ ವಿಧಾನಸಭೆಗೆ ಹಾಜರಾಗಲು ಪಿಎಂಎಲ್‌ಎ ನ್ಯಾಯಾಲಯ ಅನುಮತಿ ನೀಡಿದೆ.

ಈ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಮಾತನಾಡಿದ ಹೇಮಂತ್ ಸೊರೇನ್, ತಮ್ಮ ಬಂಧನ ಭಾರತದ ಪ್ರಜಾಪ್ರಭುತ್ವದಲ್ಲಿ ಕರಾಳ ಅಧ್ಯಾಯ ಎಂದು ಹೇಳಿದ್ದಾರೆ. “ಭೂಹಗರಣದಲ್ಲಿ ಜನವರಿ 31ರಂದು ಇ.ಡಿ ತಮ್ಮನ್ನು ಬಂಧಿಸುವಲ್ಲಿ ರಾಜ್ಯಪಾಲರು ಕೂಡ ಭಾಗಿಯಾಗಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೂ. 8.5 ಕೋಟಿ ಭೂ ಹಗರಣದಲ್ಲಿ ಅವರು ನನ್ನನ್ನು ಬಂಧಿಸಿದ್ದಾರೆ. ಅವರಿಗೆ ಧೈರ್ಯವಿದ್ದರೆ ಭೂಹಗರಣದಲ್ಲಿ ನನ್ನ ಹೆಸರಿರುವುದನ್ನು ಸಾಬೀತುಪಡಿಸಲಿ. ಅವರು ಸಾಬೀತುಪಡಿಸಿದರೆ ನಾನು ರಾಜಕಾರಣವನ್ನು ತ್ಯಜಿಸುತ್ತೇನೆ” ಎಂದು ಸವಾಲು ಹಾಕಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇಂದ್ರದ ತಾರತಮ್ಯ ನೀತಿಯನ್ನು ಪ್ರಶ್ನಿಸುವುದು ತಪ್ಪೇ?

“ಭೂ ಹಗರಣದಲ್ಲಿ ಇ.ಡಿ ಬಂಧನವನ್ನು ನ್ಯಾಯಾಲಯಲ್ಲಿ ಪ್ರಶ್ನಿಸುತ್ತೇನೆ. ಕಾನೂನನ್ನು ದುರುಪಯೋಗಪಡಿಸಿಕೊಳ್ಳುವುದು ಹೇಗೆ ಎಂಬುದನ್ನು ಅವರಿಂದ ಕಲಿಯಬೇಕು. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಲ್ಲಿ ಬುಡಕಟ್ಟು ಹಾಗೂ ದಲಿತರ ಕಣ್ಣಿರಿಗೆ ಬೆಲೆಯಿಲ್ಲ” ಎಂದು ಸೊರೇನ್ ಆರೋಪಿಸಿದರು.

“ನಾನು ಸೋಲನ್ನು ಒಪ್ಪಿಕೊಳ್ಳುವುದಿಲ್ಲ. ಅವರು ನನ್ನನ್ನು ಜೈಲಿನಲ್ಲಿ ಇಡಬಹುದು ಎಂದು ಭಾವಿಸಿದರೆ ಜಾರ್ಖಂಡ್‌ನ ಮೂಲೆಮೂಲೆಯಲ್ಲಿರುವ ಬುಡಕಟ್ಟು, ದಲಿತ ಸಮುದಾಯದವರು ತಮ್ಮ ಪ್ರಾಣವನ್ನು ಅರ್ಪಿಸಲಿದ್ದಾರೆ. ಅವರು 2019ರ ನಂತರದ ಹಗರಣಗಳನ್ನು ಮಾತ್ರ ನೋಡುತ್ತಿದ್ದಾರೆ. 2000ದಿಂದ ರಾಜ್ಯದಲ್ಲಿ ನಡೆದ ಹಗರಣಗಳನ್ನು ನೋಡುತ್ತಿಲ್ಲ. ಅವರಿಗೆ ಬುಡಕಟ್ಟು ಸಮುದಾಯದವರು ಮುಖ್ಯಮಂತ್ರಿ, ಐಎಎಸ್, ಐಪಿಎಸ್ ಅಧಿಕಾರಿಗಳಾಗುವುದು ಇಷ್ಟವಿಲ್ಲ. ನನ್ನ ಬಗ್ಗೆ ಹಾಸ್ಯ ಮಾಡಿದರು. ನಾನು ಏರಿದ ವಿಮಾನ, ತಂಗಿದ ಹೊಟೇಲ್‌ಗಳವರೆಗೆ ಹಾಸ್ಯ ಮಾಡಿದರು. ಬುಡಕಟ್ಟು ಸಮುದಾಯದವರನ್ನು 5 ವರ್ಷ ಸಿಎಂ ಆಗಿ ಶಾಂತಿಯುತವಾಗಿ ಅಧಿಕಾರ ನಡೆಸಲು ಅವರು ಬಿಡುವುದಿಲ್ಲ. ಇದು ಮೊದಲೇ ರಚಿಸಿದ ನಾಟಕ. ನನಗೆ ಬಲೆ ಬೀಸಬಹುದು ಎನ್ನುವ ಅಂದಾಜು ನನಗೆ ಮೊದಲೇ ತಿಳಿದಿತ್ತು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...