ಜಮೀನು ವಿವಾದ: ಟ್ರ್ಯಾಕ್ಟರ್‌ ಹರಿಸಿ ಸಹೋದರನನ್ನೇ ಕೊಂದ ಹಂತಕ

Date:

ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ವಿಕೃತ ಮನಸ್ಸಿನ ಹಂತಕನೊಬ್ಬ ತನ್ನ ಸಹೋದರನ ಮೇಲೆ ಟ್ರ್ಯಾಕ್ಟರ್‌ ಹರಿಸಿ ಬರ್ಬರವಾಗಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ರಾಜಸ್ಥಾನದಲ್ಲಿ ನಡದಿದೆ. ಘಟನೆಯ ವೇಳೆ ಸ್ಥಳೀಯರು ಮಧ್ಯಪ್ರವೇಶಿಸಿ ಕೃತ್ಯವನ್ನು ತಡೆಯದೇ, ಚಿತ್ರೀಕರಿಸುತ್ತಾ ನಿಂತಿದ್ದು ಅಮಾನವೀಯತೆ ಮರೆದಿದ್ದಾರೆ.

ರಾಜಸ್ಥಾನದ ಭರತ್‌ಪುರ ಜಿಲ್ಲೆಯ ಅಡ್ಡಾ ಗ್ರಾಮದಲ್ಲಿ ಕೃತ್ಯ ನಡೆದಿದ್ದು, ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ದರ್ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು 30 ವರ್ಷದ ನಿರ್ಪತ್‌ ಗುರ್ಜರ್‌ ಎಂದು ಗುರುತಿಸಲಾಗಿದೆ. ಆತನ ಸಹೋದರ ದಾಮೋದರ್ ಗುರ್ಜರ್‌ ಹತ್ಯೆಗೈದ ಆರೋಪಿಯೆಂದು ಹೇಳಲಾಗಿದೆ ಎಂದು ಭರತ್‌ಪುರದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಓಂಪ್ರಕಾಶ್ ಕಿಲಾನಿಯಾ ತಿಳಿಸಿದ್ದಾರೆ.

“ನರ್ಪತ್ ಸಿಂಗ್ ಅವರ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಕೊಂದಿರುವ ಆರೋಪಿ ಮೃತನ ಸಹೋದರ ದಾಮೋದರ್ ಗುರ್ಜರ್ ಎಂದು ವಿಡಿಯೋದಲ್ಲಿ ಕಂಡುಬಂದಿದೆ. ಇಬ್ಬರ ನಡುವೆ ಮೂರು ದಿನಗಳ ಹಿಂದೆಯೂ ಜಗಳವಾಗಿತ್ತು. ಇಂದು (ಬುಧವಾರ) ಮತ್ತೆ ಅವರಿಬ್ಬರ ನಡುವೆ ಜಗಳವಾಗಿದೆ. ದಾಮೋದರ್‌ ಎಂಬಾತ ತನ್ನ ಸಹೋದರ ನಿರ್ಪತ್‌ನನ್ನು ಟ್ರ್ಯಾಕ್ಟರ್‌ ಹತ್ತಿಸಿ ಕೊಂದಿದ್ದಾನೆ” ಎಂದು ಕಿಲಾನಿಯಾ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಡಿಗೆಯ ಹಾದಿ (ರಸ್ತೆ) ವಿಚಾರಕ್ಕೆ ಇಬ್ಬರ ನಡುವೆ ಜಗಳವಾಗಿದೆ. ಇಬ್ಬರೂ ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಘರ್ಷಣೆಯು ಉಲ್ಬಣಗೊಂಡು, ನಿರ್ಪತ್‌ಗೆ ದಾಮೋದರ್ ಟ್ರ್ಯಾಕ್ಟರ್‌ನಿಂದ ಗುದ್ದಿದ್ದಾನೆ. ನಿರ್ಪತ್‌ ಕೆಳಗೆ ಬಿದ್ದ ಬಳಿಕ, ಮತ್ತೊಮ್ಮೆ ಆತನ ಮೇಲೆ ಟ್ರ್ಯಾಕ್ಟರ್‌ ಹತ್ತಿಸಿದ್ದಾನೆ. ನಿರ್ಪತ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಇನ್ನು ಕೆಲವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಪ್ರಕರಣದಲ್ಲಿ ಈವರೆಗೆ ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಉಳಿದವರನ್ನು ಹಿಡಿಯಲು ಶೋಧ ನಡೆಸುತ್ತಿದ್ದಾರೆ.

ಈ ಘಟನೆಯು ರಾಜಸ್ಥಾನದಲ್ಲಿ ಆಕ್ರೋಶ ಗುರಿಯಾಗಿದೆ. ಸರ್ಕಾರದ ವಿರುದ್ಧ ಜನರು ಮತ್ತು ಪ್ರತಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ರಾಜಸ್ಥಾನದ ಬಿಜೆಪಿ ನಾಯಕ ಗಜೇಂದ್ರ ಸಿಂಗ್ ಶೇಖಾವತ್ ಅವರು ಘಟನೆಯನ್ನು ‘ಹೃದಯ ವಿದ್ರಾವಕ’ ಎಂದಿದ್ದಾರೆ. “ಕೃತ್ಯವು ಅತ್ಯಂತ ಖಂಡನೀಯ. ಇದು ಗೆಹ್ಲೋಟ್ ಸರ್ಕಾರದ ಅವಧಿಯಲ್ಲಿ ಉದ್ಭವಿಸಿದ ಅಪರಾಧ-ಅರಾಜಕತಾವಾದಿ ಮನಸ್ಥಿತಿಯ ಪರಿಣಾಮವಾಗಿದೆ,” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...