ರಾಜಸ್ಥಾನ | ಬಿಸಿಯೂಟದಲ್ಲಿ 2,000 ಕೋಟಿ ರೂ. ಹಗರಣ ಬಹಿರಂಗ; 21 ಮಂದಿ ವಿರುದ್ಧ ACB ಎಫ್‌ಐಆರ್‌

Date:

ಕೊರೊನಾ ಆಕ್ರಮಣವಿದ್ದ ಸಮಯದಲ್ಲಿ ರಾಜಸ್ಥಾನದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯಗಳ ಪೂರೈಕೆಯಲ್ಲಿ ನಡೆದಿದೆ ಎನ್ನಲಾದ 2,000 ಕೋಟಿ ರೂ. ಹಗರಣ ಸಂಬಂಧ ‘ಭ್ರಷ್ಟಾಚಾರ ನಿಗ್ರಹ ದಳ’ (ಎಸಿಬಿ) ಎಫ್‌ಐಆರ್ ದಾಖಲಿಸಿದೆ. ಪ್ರಕರಣದಲ್ಲಿ 21 ಮಂದಿಯನ್ನು ಆರೋಪಿಗಳನ್ನಾಗಿ ಹೆಸರಿಸಲಾಗಿದೆ.

ಸರ್ಕಾರಿ ಶಾಲೆಗಳನ್ನು ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿಯೂ ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಆಹಾರ ಧಾನ್ಯಗಳನ್ನು ಒದಗಿಸಲು ಸರ್ಕಾರ ನಿರ್ಧರಿಸಿತ್ತು. ಈ ಯೋಜನೆಯಡಿ, ದ್ವಿದಳ ಧಾನ್ಯಗಳು, ಎಣ್ಣೆ, ಮಸಾಲೆ ಪದಾರ್ಥಗಳು ಸೇರಿದಂತೆ ನಾನಾ ಸಾಮಗ್ರಿಗಳುಳ್ಳ ಕಾಂಬೊ ಪ್ಯಾಕ್‌ಗಳನ್ನು ‘ರಾಜಸ್ಥಾನ ರಾಜ್ಯ ಸಹಕಾರಿ ಗ್ರಾಹಕರ ಒಕ್ಕೂಟ ನಿಮಗ'(CONFED) ಮೂಲಕ ಸರಬರಾಜು ಮಾಡಲಾಗಿತ್ತು. ಇವುಗಳನ್ನು FSSAI ಮತ್ತು Agmark ಮಾನದಂಡಗಳಿಗೆ ಅನುಗುಣವಾಗಿವೆ ಪ್ಯಾಕ್‌ ಮಾಡಿ, ವಿದ್ಯಾರ್ಥಿಗಳ ಮನೆ ಬಾಗಿಲಿಗೆ ತಲುಪಿಸಬೇಕಾಗಿತ್ತು.

ಆದಾಗ್ಯೂ, ಈ ಯೋಜನೆಯ ಅನುಷ್ಠಾನದಲ್ಲಿ ಭಾರಿ ಅಕ್ರಮಗಳು ಮತ್ತು ಭ್ರಷ್ಟಾಚಾರದ ದೂರುಗಳು ಕೇಳಿಬಂದಿದ್ದವು. ಆರೋಪಗಳಿಗೆ ಅನುಗುಣವಾಗಿ ಎಸಿಬಿ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಆರಂಭಿಸಿತ್ತು. “ಪ್ರಾಥಮಿಕ ತನಿಖೆಯಲ್ಲಿ, ಮಧ್ಯಾಹ್ನ ಊಟ ಯೋಜನೆ ಮತ್ತು CONFEDಗೆ ಸಂಬಂಧಿಸಿದ ಅಧಿಕಾರಿಗಳು ನಿಯಮಗಳನ್ನು ತಿರುಚಿ, ಅಕ್ರಮಕ್ಕೆ ಸಹಕರಿಸಿದ್ದಾರೆ ಎಂಬುದು ಕಂಡುಬಂದಿದೆ” ಎಂದು ಎಸಿಬಿ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಿಯಮಗಳ ತಿರುಚುವಿಕೆಯಿಂದ ಅರ್ಹ ಸಂಸ್ಥೆಗಳನ್ನು ಟೆಂಡರ್ ಪ್ರಕ್ರಿಯೆಯಿಂದ ಹೊರಗಿಡಲಾಗಿದೆ. ಅನುಕೂಲಕರ ಸಂಸ್ಥೆಗಳಿಗೆ ಟೆಂಡರ್‌ಗಳನ್ನು ನೀಡಲಾಗಿದೆ. ನಂತರ, ಈ ಸಂಸ್ಥೆಗಳು ಕಾನೂನುಬಾಹಿರವಾಗಿ ಇತರ ಸಂಸ್ಥೆಗಳಿಗೆ ಉಪಒಪ್ಪಂದಗಳನ್ನು ನೀಡಿವೆ. ಇದರ ಮೂಲಕ ನಕಲಿ ಪೂರೈಕೆದಾರರು ಮತ್ತು ಸಾಗಣೆದಾರರ ಸಂಘಟಿತ ಜಾಲವನ್ನು ಸ್ಥಾಪಿಸಲಾಗಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅನೇಕ ಸಂದರ್ಭಗಳಲ್ಲಿ, ಸರಕುಗಳನ್ನು ಖರೀದಿಸದೆ ಅಥವಾ ಸರಬರಾಜು ಮಾಡದೆ ಹೆಚ್ಚಿನ ದರಗಳನ್ನು ತೋರಿಸಿ ನಕಲಿ ಇನ್‌ವಾಯ್ಸ್‌ಗಳನ್ನು ಸಲ್ಲಿಸಲಾಗಿದೆ. ಅವುಗಳ ಆಧಾರದ ಮೇಲೆ ಸರ್ಕಾರದಿಂದ ಹಣ ಪಾವತಿಗಳನ್ನು ಪಡೆಯಲಾಗಿದೆ. ಈ ವ್ಯವಸ್ಥಿತ ವಂಚನೆ ಮತ್ತು ಪಿತೂರಿಯು ರಾಜ್ಯ ಖಜಾನೆಗೆ ಗಂಭೀರ ಆರ್ಥಿಕ ನಷ್ಟವನ್ನುಂಟುಮಾಡಿದೆ. ನಷ್ಟದ ಅಂದಾಜು ಮೊತ್ತವು 2,000 ಕೋಟಿ ರೂ.ಗಳಾಗಿವೆ” ಎಂದು ಎಸಿಬಿ ಹೇಳಿದೆ.

ಈ ಲೇಖನ ಓದಿದ್ದೀರಾ?: ತುರ್ಕಮಾನ್ ಗೇಟ್ | ಅಂದು ಸಂಜಯ್ ಗಾಂಧಿ, ಇಂದು…? ಬದಲಾಗದ ಬುಲ್ಡೋಜರ್ ದರ್ಬಾರ್

“ಸಹಾಯಕ ಲೆಕ್ಕಪತ್ರ ಅಧಿಕಾರಿ ಸನ್ವತ್ರಂ; ವ್ಯವಸ್ಥಾಪಕ (ನಾಗರಿಕ ಸರಬರಾಜು ಇಲಾಖೆ) ರಾಜೇಂದ್ರ, ನಾಗರಿಕ ಸರಬರಾಜು ಇಲಾಖೆಯ ವ್ಯವಸ್ಥಾಪಕ ಲೋಕೇಶ್ ಕುಮಾರ್ ಬಾಪ್ನಾ, ಸಹಾಯಕ ವ್ಯವಸ್ಥಾಪಕಿ ಪ್ರತಿಭಾ ಸೈನಿ, ಯೋಜನಾ ವ್ಯವಸ್ಥಾಪಕ ಯೋಗೇಂದ್ರ ಶರ್ಮಾ, ವ್ಯವಸ್ಥಾಪಕ ರಾಜೇಂದ್ರ ಸಿಂಗ್ ಶೇಖಾವತ್, ಮಾರ್ಕೆಟಿಂಗ್‌ ವಿಭಾಗದ ಗೋಡೌನ್ ಕೀಪರ್ ರಾಮಧನ್ ಬೈರ್ವಾ ಮತ್ತು ಮೇಲ್ವಿಚಾರಕ ದಿನೇಶ್ ಕುಮಾರ್ ಶರ್ಮಾ, ಕನ್‌ಫೆಡ್‌ನ ಸೆಂಟ್ರಲ್ ಸ್ಟೋರ್‌ ಪ್ರದೇಶಿಕ ವ್ಯವಸ್ಥಾಪಕ ಶೈಲೇಶ್ ಸಕ್ಸೇನಾ, ಉಪ ವ್ಯವಸ್ಥಾಪಕ ಬಿ.ಸಿ. ಜೋಶಿ ಹಾಗೂ ಸಹಾಯಕ ವ್ಯವಸ್ಥಾಪಕ ಚಂದನ್ ಸಿಂಗ್ ಸೇರಿದಂತೆ ಹಲವರು ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿದೆ” ಎಂದು ಎಸಿಬಿ ತಿಳಿಸಿದೆ.

ಹೆಚ್ಚುವರಿಯಾಗಿ, ಮೆಸರ್ಸ್ ತಿರುಪತಿ ಸಪ್ಲೈಯರ್ಸ್, ಮೆಸರ್ಸ್ ಜಾಗೃತ್ ಎಂಟರ್‌ಪ್ರೈಸಸ್, ಮೆಸರ್ಸ್ ಸಾಯಿ ಟ್ರೇಡಿಂಗ್‌ನ ಮಾಲೀಕ ಮೆಸರ್ಸ್ ಎಂಟಿ ಎಂಟರ್‌ಪ್ರೈಸಸ್ ಮತ್ತು ಖಾಸಗಿ ವ್ಯಕ್ತಿಗಳಾದ ಕನ್ವಲ್ಜಿತ್ ಸಿಂಗ್ ರಣಾವತ್, ಮಧುರ್ ಯಾದವ್, ತ್ರಿಭುವನ್ ಯಾದವ್, ಸತೀಶ್ ಮುಲ್‌ಚಂದ್ ವ್ಯಾಸ್, ದೀಪಕ್ ವ್ಯಾಸ್ ಹಾಗೂ ರಿತೇಶ್ ಯಾದವ್ ಸೇರಿದಂತೆ ಇತರರನ್ನು ಎಸಿಬಿ ಎಫ್‌ಐಆರ್‌ನಲ್ಲಿ ಹೆಸರಿಸಲಾಗಿದೆ.

ಹಣಕಾಸಿನ ವಹಿವಾಟುಗಳು, ನಕಲಿ ದಾಖಲೆಗಳ ಸೃಷ್ಟಿ ಹಾಗೂ ಸರ್ಕಾರಿ ನಿಧಿಯ ದುರುಪಯೋಗ ಸೇರಿದಂತೆ ಪ್ರಕರಣದಲ್ಲಿ ಆರೋಪಿಗಳ ಪಾತ್ರದ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ. ಸಾಕ್ಷ್ಯ ಸಂಗ್ರಹ, ದಾಖಲೆಗಳ ಪರಿಶೀಲನೆ ಹಾಗೂ ಇತರ ಅಗತ್ಯ ತನಿಖಾ ಕಾರ್ಯವಿಧಾನಗಳು ನಡೆಯುತ್ತಿವೆ. ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...