ದೇಶದ ಮೊದಲ ‘ಬೌದ್ಧ ಅಂಬೇಡ್ಕರ್‌ವಾದಿ ಸಿಜೆಐ; ಜಸ್ಟೀಸ್‌ ಗವಾಯಿಗೆ ರಾಜ್‌ದೀಪ್ ಸರ್ದೇಸಾಯಿ ಅಭಿನಂದನೆ

Date:

ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಇಂದು (ಮೇ 14) ದೇಶದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜಸ್ಟೀಸ್ ಗವಾಯಿ ಅವರನ್ನು ಅಭಿನಂದಿಸಿರುವ ಹಿರಿಯ ಪತ್ರಕರ್ತ ರಾಜ್‌ದೀಪ್ ಸರ್ದೇಸಾಯಿ ಅವರು, “ಗವಾಯಿಯವರು ದೇಶದ ಮೊದಲ ಬೌದ್ಧ ಅಂಬೇಡ್ಕರ್‌ವಾದಿ ಸಿಜೆಐ” ಎಂದಿದ್ದಾರೆ.

ಈ ಬಗ್ಗೆ ತನ್ನ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “ದೇಶಕ್ಕೆ ಸಂವಿಧಾನ ದೊರೆತ 75 ವರ್ಷಗಳ ನಂತರ ಗವಾಯಿಯವರು ದೇಶದ ಮುಖ್ಯ ನ್ಯಾಯಮೂರ್ತಿ ಹುದ್ದೆಯನ್ನು ಅಲಂಕರಿಸಿದ ಮೊದಲ ಬೌದ್ಧ ಅಂಬೇಡ್ಕರ್‌ವಾದಿಯಾಗಿದ್ದಾರೆ. ಬಾಬಾಸಾಹೇಬರಿಗೆ ಮತ್ತು ಹೆಚ್ಚು ಸಮಾನತೆಯ ಗಣರಾಜ್ಯದ ಕನಸಿಗೆ ಸೂಕ್ತವಾದ ಗೌರವ ಇದಾಗಿದೆ. ಜೈ ಭೀಮ್, ಜೈ ಹಿಂದ್” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಸಂವಿಧಾನ ‘ಭೀಮಸ್ಮೃತಿ’ ಎನ್ನುವ ಸಿಜೆಐ- ತಳಸ್ತರದ ಅಸಹಾಯಕರ ನ್ಯಾಯ ಪ್ರತಿಪಾದಕ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನ್ಯಾಯಮೂರ್ತಿ ಗವಾಯಿ ಅವರು ಹಲವು ರಾಜ್ಯಗಳ ರಾಜ್ಯಪಾಲರಾಗಿದ್ದ ಪ್ರಸಿದ್ಧ ರಾಜಕಾರಣಿ ಆರ್ ಎಸ್ ಗವಾಯಿ ಅವರ ಪುತ್ರ. ಬಿ ಆರ್ ಅಂಬೇಡ್ಕರ್ ಅವರ ಆದರ್ಶಗಳನ್ನು ಆಳಕ್ಕೆ ಅಳವಡಿಸಿಕೊಂಡ ಕುಟುಂಬಕ್ಕೆ ಸೇರಿದವರು. ಅವರ ತಂದೆ ಅಂಬೇಡ್ಕರ್‌ವಾದಿ ಮತ್ತು ಮಾಜಿ ಸಂಸತ್ ಸದಸ್ಯರು. ನ್ಯಾಯಮೂರ್ತಿ ಗವಾಯಿ ಅವರೂ ಬೌದ್ಧ- ಅಂಬೇಡ್ಕರ್‌ವಾದಿಯಾಗಿದ್ದಾರೆ.

ಗವಾಯಿ ಸಂವಿಧಾನವನ್ನು ‘ಭೀಮಸ್ಮೃತಿ’ ಎಂದು ಕರೆಯುತ್ತಾರೆ. ‘ಅಂಬೇಡ್ಕರ್‌ ಕನಸುಗಳಿಗೆ ರೆಕ್ಕೆ ನೀಡುವ ಮಾರ್ಗ ಸಂವಿಧಾನ’ ಎಂಬ ತನ್ನ ತಂದೆಯ ಮಾತು ಗವಾಯಿ ಅವರಿಗೆ ದಾರಿದೀಪ ಎನ್ನಬಹುದು.

ಇದನ್ನು ಓದಿದ್ದೀರಾ? 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಬಿ. ಆರ್. ಗವಾಯಿ ಪ್ರಮಾಣ ವಚನ ಸ್ವೀಕಾರ

ಅವರ ನೇಮಕಾತಿಯನ್ನು ಸುಪ್ರೀಂ ಕೋರ್ಟ್ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು ಎಂದೇ ಪರಿಗಣಿಸಬಹುದು. ನಿವೃತ್ತ ಸಿಜೆಐ ಕೆ ಜಿ ಬಾಲಕೃಷ್ಣನ್ ನಂತರ ಸುಪ್ರೀಂ ಕೋರ್ಟ್‌ನ ಉನ್ನತ ಸ್ಥಾನವನ್ನು ತಲುಪಿದ ಪರಿಶಿಷ್ಟ ಜಾತಿ ಸಮುದಾಯದ ಎರಡನೇ ವ್ಯಕ್ತಿ ನ್ಯಾಯಮೂರ್ತಿ ಗವಾಯಿ. ಅಂಬೇಡ್ಕರ್‌ವಾದಿ ಸಿಜೆಐ ಆಗಿರುವುದು ಭರವಸೆ ಹೆಚ್ಚಿಸಿದೆ. ಆದರೆ ಅವರ ಅಧಿಕಾರಾವಧಿ ಕೇವಲ ಆರು ತಿಂಗಳು. 2025ರ ನವೆಂಬರ್ 23ರಂದು ನಿವೃತ್ತರಾಗಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...