ರಾಜೀವ್ ಗಾಂಧಿ ಹತ್ಯೆ ಪ್ರಕರಣ | ಮೂವರು ಆರೋಪಿಗಳು ಶ್ರೀಲಂಕಾಗೆ ಗಡಿಪಾರು

Date:

ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರು ಅಪರಾಧಿಗಳಾದ ಮುರುಗನ್ ಅಲಿಯಾಸ್ ಶ್ರೀಹರನ್, ಜಯಕುಮಾರ್ ಹಾಗೂ ರಾಬರ್ಟ್ ಪಯಸ್ ಅವರನ್ನು ಬುಧವಾರ (ಏಪ್ರಿಲ್‌ 03) ಚೆನ್ನೈ ವಿಮಾನ ನಿಲ್ದಾಣದಿಂದ ಶ್ರೀಲಂಕಾಕ್ಕೆ ಗಡಿಪಾರು ಮಾಡಲಾಯಿತು ಎಂದು ವರದಿ ತಿಳಿಸಿದೆ.

ಜೈಲಿನಲ್ಲಿ ಅಪರಾಧಿಗಳ ಉತ್ತಮ ನಡವಳಿಕೆಯನ್ನು ಪರಿಗಣಿಸಿ ಮೂವರನ್ನು ಬಿಡುಗಡೆಗೊಳಿಸಲು ತಮಿಳುನಾಡು ಸರ್ಕಾರ ಶಿಫಾರಸ್ಸು ಮಾಡಿತ್ತು. ಅದರಂತೆ, 2022 ನವೆಂಬರ್‌ನಲ್ಲಿ ಸುಪ್ರೀಂಕೋರ್ಟ್ರಾಜೀವ್ಗಾಂಧಿ ಹಂತಕರಾದ ಮುರುಗನ್‌, ರಾಬರ್ಟ್ಪಾಯಸ್‌, ಜಯಕುಮಾರ್ಸೇರಿದಂತೆ ಆರು ಮಂದಿಯನ್ನು ಬಿಡುಗಡೆಗೊಳಿಸಲು ಆದೇಶ ನೀಡಿತ್ತು.

ನವೆಂಬರ್ 2022ರಲ್ಲಿ ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿದ ಪ್ರಕರಣದ ಏಳು ಅಪರಾಧಿಗಳಲ್ಲಿ ಈ ಮೂವರೂ ಸೇರಿದ್ದಾರೆ. ಬಿಡುಗಡೆಯಾದ ನಂತರ, ಶ್ರೀಲಂಕಾ ಪ್ರಜೆಗಳಾದ ಮೂವರನ್ನು ತಿರುಚಿರಾಪಲ್ಲಿಯ ವಿಶೇಷ ಶಿಬಿರದಲ್ಲಿ ಬಿಗಿ ಬಂದೋಬಸ್ತ್‌ನಲ್ಲಿ ಇರಿಸಲಾಗಿತ್ತು. ಪೊಲೀಸ್ಅಧಿಕಾರಿಗಳ ತಂಡ ಮೂವರನ್ನ ಏಪ್ರಿಲ್ 2ರಂದು ರಾತ್ರಿ ಚೆನ್ನೈಗೆ ಕರೆತಂದು, ಏಪ್ರಿಲ್ 3ರಂದು ಕೊಲಂಬೊ (ಶ್ರೀಲಂಕಾ)ಗೆ ಗಡಿಪಾರು ಮಾಡಿದ್ದಾರೆ ಎಂದು ವರದಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್ಆರ್ಆರ್) ಗಡಿಪಾರು ಆದೇಶ ಹೊರಡಿಸಿದ ನಂತರ ಅವರು ಮನೆಗೆ ಹಿಂತಿರುಗಬಹುದು ಎಂದು ತಮಿಳುನಾಡು ಸರ್ಕಾರ ಮದ್ರಾಸ್ ಹೈಕೋರ್ಟ್ಗೆ ಹಿಂದೆ ತಿಳಿಸಿತ್ತು. ಇಲ್ಲಿನ ಶ್ರೀಲಂಕಾ ಹೈಕಮಿಷನ್ ಹಿಂದೆ ಅವರಿಗೆ ಸ್ವದೇಶಕ್ಕೆ ಮರಳಲು ಪ್ರಯಾಣ ದಾಖಲೆಗಳನ್ನು ನೀಡಿತ್ತು.

ಪ್ರಕರಣದಲ್ಲಿ ಶಿಕ್ಷೆಗೊಳಗಾದ ಮತ್ತೊಬ್ಬ ಶ್ರೀಲಂಕಾ ಪ್ರಜೆ ಸಂತಾನ್ ಇತ್ತೀಚೆಗೆ ಮೃತಪಟ್ಟಿದ್ದರು. ಪ್ರಕರಣದಲ್ಲಿ ಅಪರಾಧಿಗಳೆಂದು ಘೋಷಿಸಲ್ಪಟ್ಟ ಮತ್ತು ಬಿಡುಗಡೆಗೊಂಡಿರುವ ಇತರರೆಂದರೆ ಪೆರಾರಿವಾಲನ್, ರವಿಚಂದ್ರನ್ ಮತ್ತು ನಳಿನಿ ಎಲ್ಲ ಭಾರತೀಯರು. ಈ ಎಲ್ಲ ಏಳು ಮಂದಿ 30 ವರ್ಷಗಳ ಕಾಲ ಜೈಲಿನಲ್ಲಿದ್ದರು.

 ಸುದ್ದಿ ಓದಿದ್ದೀರಾ? ಏಪ್ರಿಲ್ 3ರಂದೇ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಎಂಬುದು ಸುಳ್ಳು; ಮತ್ತೆ ಯಾವಾಗಾ? ಇಲ್ಲಿದೆ ಮಾಹಿತಿ

ಶ್ರೀಲಂಕಾ ಪ್ರಜೆಯಾದ ಆರೋಪಿ ಮುರುಗನ್‌, ಆರೋಪಿ ನಳಿನಿಯನ್ನು ವಿವಾಹವಾಗಿದ್ದನು. ಈ ಪ್ರಕರಣದಲ್ಲಿ ದಿ.ರಾಜೀವ್‌ ಗಾಂಧಿ ಪತ್ನಿ ಸೋನಿಯಾ ಗಾಂಧಿ ಮಧ್ಯಪ್ರವೇಶಿಸಿ, ಗರ್ಭಿಣಿಯಾಗಿದ್ದ ನಳಿನಿಯ ಗಲ್ಲುಶಿಕ್ಷೆಯನ್ನು ರದ್ದುಪಡಿಸಿ ಜೀವಾವಧಿ ಶಿಕ್ಷೆ ಕೊಡುವಂತೆ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅದರಂತೆ, ಜೀವದಾನ ಪಡೆದ ನಳಿನಿ, ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈಗ ನಳಿನಿ ಪುತ್ರಿ ಯುನೈಟೆಡ್ಕಿಂಗ್ಡಮ್‌ನಲ್ಲಿ ವೈದ್ಯೆಯಾಗಿದ್ದಾಳೆ.

1991ರ ಮೇ 21ರಂದು ತಮಿಳುನಾಡಿನ ಶ್ರೀಪೆರಂಬುದೂರ್‌ನಲ್ಲಿ ರಾಹುಲ್ ಗಾಂಧಿ ಅವರ ಹತ್ಯೆ ನಡೆದಿತ್ತು. ನೆರೆಯ ಶ್ರೀಲಂಕಾದಲ್ಲಿ ಸಕ್ರಿಯವಾಗಿದ್ದ ಲಿಬರೇಷನ್ ಟೈಗರ್ಸ್ ಆಫ್ ತಮಿಳ್ ಈಳಂ (ಎಲ್‌ಟಿಟಿಇ) ಗುಂಪಿನ ಮಹಿಳಾ ಆತ್ಮಾಹುತಿ ಬಾಂಬರ್ ಈ ಕೃತ್ಯ ಎಸಗಿದ್ದಳು. ಮಹಿಳಾ ಆತ್ಮಹತ್ಯಾ ಬಾಂಬರ್‌ ತನ್ನನ್ನು ತಾನು ಸ್ಫೋಟಿಸಿಕೊಳ್ಳುವ ಮೂಲಕ ರಾಜೀವ್‌ ಗಾಂಧಿಯನ್ನು ಹತ್ಯೆಗೈದಿದ್ದರು. ಹತ್ಯೆ ಪ್ರಕರಣದಲ್ಲಿ ಏಳು ಮಂದಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಬಳಿಕ ಅವರ ಶಿಕ್ಷೆಯನ್ನು ಜೀವಾವಧಿಗೆ ಇಳಿಕೆ ಮಾಡಿ ಸುಪ್ರೀಂಕೋರ್ಟ್ಆದೇಶ ನೀಡಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...