ಪ್ರಧಾನಿ ಹುದ್ದೆಗೆ ರಾಜನಾಥ್‌ ಸಿಂಗ್‌ ಗಂಭೀರ ಅಭ್ಯರ್ಥಿ : ಸತ್ಯಪಾಲ್‌ ಮಲಿಕ್

Date:

  • ರಾಜಸ್ಥಾನದಲ್ಲಿ ಪುಲ್ವಾಮಾ ದಾಳಿ ಕುರಿತ ಪ್ರಶ್ನೆಗಳಿಗೆ ಮಲಿಕ್‌ ಉತ್ತರ
  • ಖಾಸಗಿ ವಾಹಿನಿ ಕಾರ್ಯಕ್ರಮದಲ್ಲಿ ಮಲಿಕ್‌ ಟೀಕಿಸಿದ್ದ ಅಮಿತ್‌ ಶಾ

ಪ್ರಧಾನಮಂತ್ರಿ ಹುದ್ದೆಗೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಗಂಭೀರ ಅಭ್ಯರ್ಥಿಯಾಗಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್‌ ಮಲಿಕ್‌ ಹೇಳಿದ್ದಾರೆ.

ರಾಜಸ್ಥಾನದ ಸಿಕಾರ್‌ನಲ್ಲಿ ಕಾರ್ಯಕ್ರಮವೊಂದರ ನಂತರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆಗೆ ಸಂಬಂಧಿಸಿ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.

ಅಮಿತ್‌ ಶಾ ಅವರು ಪುಲ್ವಾಮಾ ದಾಳಿಗೆ ಸಂಬಂಧಿಸಿ ಮಾಡಿರುವ ಆರೋಪಕ್ಕೆ ಸತ್ಯಪಾಲ್‌ ಮಲಿಕ್‌ ಅವರು ಪ್ರತಿಕ್ರಿಯಿಸಿ, “ಪ್ರಧಾನಿ ಹುದ್ದೆಗೆ ರಾಜನಾಥ್‌ ಸಿಂಗ್‌ ಗಂಭೀರ ಅಭ್ಯರ್ಥಿಯಾಗಿದ್ದಾರೆ. ಅವರ ಹಣೆಬರಹದಲ್ಲಿ ಇದ್ದರೆ ಅವರು ಒಂದು ದಿನ ಪ್ರಧಾನಿ ಆಗಿಯೇ ಆಗುತ್ತಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪುಲ್ವಾಮಾ ದಾಳಿ ಬಗ್ಗೆ ಅಮಿತ್‌ ಶಾ ಹೇಳಿಕೆಗೆ ಪ್ರತಿಕ್ರಿಯಿಸಿ, “ರಾಜ್ಯಪಾಲ ಹುದ್ದೆ ತೊರೆದ ಬಳಿಕ ನಾನು ಪುಲ್ವಾಮಾ ದಾಳಿ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ಹೇಳುವುದು ತಪ್ಪು. ಆ ದಿನವೇ ನಾನು ದಾಳಿ ಬಗ್ಗೆ ಹೇಳಿದ್ದೇನೆ” ಎಂದು ಅಮಿತ್ ಶಾಗೆ ಮಲಿಕ್‌ ತಿರುಗೇಟು ನೀಡಿದ್ದಾರೆ.

“2019ರಲ್ಲಿ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ 40 ಮಂದಿ ಯೋಧರು ಹುತಾತ್ಮರಾಗಿದ್ದರು. ಗುಪ್ತಚರ ವೈಫಲ್ಯ ಹಾಗೂ ಯೋಧರ ಸಂಚಾರಕ್ಕೆ ಹೆಲಿಕಾಪ್ಟರ್‌ ಒದಗಿಸಲು ಕೇಂದ್ರ ಸರ್ಕಾರ ನಿರಾಕರಿಸಿತ್ತು. ಈ ಬಗ್ಗೆ ಮಾತನಾಡಬಾರದು ಎಂದು ನನಗೆ ಪ್ರಧಾನಿ ಮೋದಿ ಹಾಗೂ ಭದ್ರತಾ ಸಲಹೆಗಾರ ಅಜಿತ್‌ ಧೋಬಾಲ್‌ ನಿರ್ದೇಶಿಸಿದ್ದರು” ಎಂದು ಮಲಿಕ್‌ ದೂರಿದ್ದರು.

ಪುಲ್ವಾಮಾ ಘಟನೆ ನಡೆದ ಸಂದರ್ಭದಲ್ಲಿ ಮಲಿಕ್‌ ಅವರು ಜಮ್ಮು-ಕಾಶ್ಮೀರದ ರಾಜ್ಯಪಾಲರಾಗಿದ್ದರು.

ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಭವಿಷ್ಯವೇನು? ಎಂಬ ಪ್ರಶ್ನೆಗೆ, ”ನಾನು ಅವರಿಗೆ ಶುಭ ಹಾರೈಸುತ್ತೇನೆ. ಆದರೆ ರಾಜಕೀಯ ಮತ್ತು ಚುನಾವಣೆಯಲ್ಲಿ ಏನಾಗುತ್ತದೆ ಎಂದು ಯಾರಿಗೂ ತಿಳಿದಿಲ್ಲ. ಪ್ರಸ್ತುತ ಪರಿಸ್ಥಿತಿ ಅವರಿಗೆ ಕಷ್ಟಕರವಾಗಿದೆ. ಅವರು ಬೇರೆ ಏನಾದರೂ ಪ್ರಯತ್ನಗಳನ್ನು ಮಾಡಬಹುದು” ಎಂದು ಮಲಿಕ್ ಹೇಳಿದರು.

ಗೌತಮ್‌ ಅದಾನಿ ಪ್ರಕರಣದಲ್ಲಿ ಪ್ರಧಾನಿ ಮೋದಿಯವರ ಮೌನ ಅವರಿಗೆ ಹಾನಿಯುಂಟು ಮಾಡಲಿದೆ. ಇದರ ಜತೆಗೆ ಪುಲ್ವಾಮಾ ದಾಳಿಯ ಬಗ್ಗೆಯೂ ಪ್ರಧಾನಿ ಮೋದಿ ಮಾತನಾಡಬೇಕು ಎಂದು ಮಲಿಕ್‌ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಪ್ರಜಾಪ್ರಭುತ್ವ, ಸಂವಿಧಾನದ ಉಳಿವಿಗೆ ವಿಪಕ್ಷಗಳ ಮೈತ್ರಿಗೆ ಬೆಂಬಲ; ಅಖಿಲೇಶ್ ಯಾದವ್

ಈ ವರ್ಷಾಂತ್ಯದಲ್ಲಿ ರಾಜಸ್ಥಾನದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಲಿರುವ ಹಿನ್ನೆಲೆಯಲ್ಲಿ, ಬಿಜೆಪಿಯು ವಸುಂಧರಾ ರಾಜೇ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸಿದರೆ, ಬಿಜೆಪಿಯ ಗೆಲುವಿನ ಸಾಧ್ಯತೆಗಳು ಹೆಚ್ಚಾಗುತ್ತವೆ ಎಂದು ಮಲಿಕ್ ಹೇಳಿದ್ದಾರೆ.

“ಮುಚ್ಚಿ ಹಾಕುವಂತಹದ್ದು ಬಿಜೆಪಿ ಏನೂ ಮಾಡಿಲ್ಲ. ಯಾರಾದರೂ ನಮ್ಮ ಜತೆ ಸಂಬಂಧ ಕಡಿದುಕೊಂಡ ಬಳಿಕ ಆರೋಪ ಮಾಡುತ್ತಿದ್ದರೆ, ಜನ ಹಾಗೂ ಮಾಧ್ಯಮ ಅದರ ಬಗ್ಗೆ ಯೋಚಿಸಬೇಕು” ಎಂದು ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಅಮಿತ್‌ ಶಾ ಹೇಳಿದ್ದರು.

ಪುಲ್ವಾಮ ದಾಳಿ ನಡೆದಾಗ ಮತ್ತು 370ನೇ ವಿಧಿಯನ್ನು ತೆರವುಗೊಳಿಸಿದ ಸಂದರ್ಭದಲ್ಲಿ ಮಲಿಕ್ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದರು. ನಂತರ ಗೋವಾದ ರಾಜ್ಯಪಾಲರಾಗಿದ್ದ ಅವರು, ಆನಂತರ 2022ರವರೆಗೆ ಮೇಘಾಲಯದ ರಾಜ್ಯಪಾಲರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...