ರಕ್ಷಾ ಬಂಧನ | ಇಲ್ಲಿ ಗಂಡನಿಗೆ ರಾಖಿ ಕಟ್ಟುತ್ತಾರೆ ಮಹಿಳೆಯರು!

Date:

ಭಾರತದಲ್ಲಿ ಆಚರಿಸುವ ಸಾಂಪ್ರದಾಯಿಕ ಹಬ್ಬಗಳಲ್ಲಿ ರಕ್ಷಾ ಬಂಧನ ಕೂಡ ಒಂದು. ಅದರಲ್ಲೂ, ಶ್ರಾವಣ ಮಾಸದ ಹುಣ್ಣಿಯ ದಿನದಂದು ರಕ್ಷಾ ಬಂಧನ ಆಚರಣೆ ನಡೆಯುತ್ತದೆ. ಹೆಣ್ಣುಮಕ್ಕಳು ಮತ್ತು ಮಹಿಳೆಯರು ತಮ್ಮ ಸಹೋದರರಿಗೆ ರಾಖಿ ಕಟ್ಟುವ ಮೂಲಕ ಈ ಹಬ್ಬವನ್ನು ಆಚರಿಸುತ್ತಾರೆ. ತಮ್ಮ ಸಹೋದರ ತಮಗೆ ರಕ್ಷಕನಾಗಿ ಜೊತೆಗಿರುತ್ತಾನೆ ಎಂಬ ನಂಬಿಕೆಯೊಂದಿಗೆ ರಕ್ಷಾ ಬಂಧನ ಆಚರಿಸಲಾಗುತ್ತದೆ. ಆದರೆ, ಮಧ್ಯಪ್ರದೇಶದ ಬುಡಕಟ್ಟು ಸಮುದಾಯವೊಂದರಲ್ಲಿ ಸಹೋದರರ ಬದಲಾಗಿ ಗಂಡನಿಗೆ ರಾಖಿ ಕಟ್ಟುವ ಮೂಲಕ ಹಬ್ಬ ಆಚರಿಸುವ ಪ್ರತೀತಿ ಇದೆ.

ಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯ ಹಲವೆಡೆ ನೆಲೆಸಿರುವ ಗೊಂಡ ಬುಡಕಟ್ಟು ಸಮುದಾಯದಲ್ಲಿ ಮಹಿಳೆಯರು ಗಂಡನಿಗೆ ರಾಖಿ ಕಟ್ಟುವ ಸಂಪ್ರದಾಯವಿದೆ. ಈ ಸಮುದಾಯದ ಮಹಿಳೆಯರು ರಕ್ಷಾ ಬಂಧನದ ದಿನ ತಮ್ಮ ಸಹೋದರರಿಗೆ ರಾಖಿ ಕಟ್ಟುವುದಿಲ್ಲ. ಬದಲಾಗಿ, ತಮ್ಮ ಗಂಡನಿಗೆ ರಾಖಿ ಕಟ್ಟುತ್ತಾರೆ. ಈ ಸಂಪ್ರದಾಯ ಹಲವಾರು ದಶಕಗಳಿಂದ ನಡೆದುಬಂದಿದೆ.

ಗೊಂಡ ಸಮುದಾಯದ ಮಹಿಳೆಯರು ತಮ್ಮ ಗಂಡನೇ ತಮಗೆ ರಕ್ಷಕನೆಂದು ಭಾವಿಸುತ್ತಾರೆ. ತಮ್ಮ ಜೀವಿತಾವಧಿಯ ಕೊನೆಯವರೆಗೂ ತಮಗಾಗಿ ದುಡಿಯುವವರು, ತಮ್ಮ ರಕ್ಷಣೆಯ ಹೊಣೆ ಹೊರುವವರು ತಮ್ಮ ಗಂಡನೇ ಎಂಬುದು ಈ ಸಮುದಾಯದ ಮಹಿಳೆಯರ ನಂಬಿಕೆ. ಹೀಗಾಗಿ, ಅವರು ತಮ್ಮ ಗಂಡನಿಗೆ ರಾಖಿ ಕಟ್ಟುವ ಮೂಲಕ ರಕ್ಷಾ ಬಂಧನ ಆಚರಿಸುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?; ಯುವತಿಯ ಅಪಹರಣ- ಪ್ರತ್ಯಕ್ಷ ಸಾಕ್ಷಿಯಿಂದ ಎಸ್‌ಐಟಿಗೆ ದೂರು; ಅಲ್ಲಿದ್ದ ಆ ವ್ಯಕ್ತಿ ಯಾರು ಗೊತ್ತೇ?

“ನಮ್ಮ ಸಮುದಾಯದಲ್ಲಿ ಮಹಿಳೆಯರು ತಮ್ಮ ಸಹೋದರರಿಗೆ ರಾಖಿ ಕಟ್ಟುವುದಿಲ್ಲ. ಏಕೆಂದರೆ, ಅವರು ಪತಿಯನ್ನು ತಮ್ಮ ಜೀವನದ ನಿಜವಾದ ರಕ್ಷಕನೆಂದು ಹೆಣ್ಣುಮಕ್ಕಳು ಭಾವಿಸುತ್ತಾರೆ. ಈ ಸಂಪ್ರದಾಯ ಹಿಂದಿನಿಂದಲೂ ನಡೆದುಬಂದಿದೆ. ಇತ್ತೀಚೆಗೆ, ಈ ಅಚರಣೆ ಬದಲಾಗುತ್ತಿದ್ದು, ಮಹಿಳೆಯರು ತಮ್ಮ ಸಹೋದರರಿಗೂ ರಾಖಿ ಕಟ್ಟಲು ಆರಂಭಿಸಿದ್ದಾರೆ” ಎಂದು ಗೊಂಡ ಸಮುದಾಯದ ಮುಖಂಡ ಅಂಜೆಲಾಲ್ ಗೌರ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...