ರಾಮ ನವಮಿ ಹಿಂಸಾಚಾರ | ಬಿಹಾರದಲ್ಲಿ ಬಾಲಕ ಸಾವು, ಪಶ್ಚಿಮ ಬಂಗಾಳದಲ್ಲಿ ಕಟ್ಟೆಚ್ಚರ

Date:

  • ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ರಾಮ ನವಮಿ ಸಂಬಂಧ ಘರ್ಷಣೆ, ಕಟ್ಟೆಚ್ಚರ
  • ಬಿಹಾರದ ಪಹಾರೌರಾ ಪ್ರದೇಶದಲ್ಲಿ ಎರಡು ಗುಂಪುಗಳ ನಡುವೆ ಪರಸ್ಪರ ಗುಂಡು

ದೇಶದಲ್ಲಿ ರಾಮ ನವಮಿ ಆಚರಣೆ ಬಿಹಾರ ಹಾಗೂ ಪಶ್ಚಿಮ ಬಂಗಾಳದಲ್ಲಿ ಕೋಮು ಹಿಂಸಾಚಾರಕ್ಕೆ ಕಾರಣವಾಗಿದೆ. ಕೋಮು ಹಿಂಸಾಚಾರದಲ್ಲಿ ಬಿಹಾರದಲ್ಲಿ ಒಬ್ಬ ಬಾಲಕ ಮೃತಪಟ್ಟಿದ್ದಾನೆ. ಪಶ್ಚಿಮ ಬಂಗಾಳದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ನಳಂದ ಜಿಲ್ಲೆಯ ಬಿಹಾರ್ ಶರೀಫ್ ನಗರದಲ್ಲಿ ಮಾರ್ಚ್ 31 ರಂದು ರಾಮನ ಉತ್ಸವದಲ್ಲಿ ನಡೆದ ಘರ್ಷಣೆಗಳಿಂದ ಶನಿವಾರ (ಏಪ್ರಿಲ್ 1) ತಡರಾತ್ರಿ ಎರಡು ಗುಂಪುಗಳ ನಡುವೆ ಕೋಮು ಹಿಂಸಾಚಾರ ನಡೆದಿದೆ.

ಹಿಂಸಾಚಾರದಲ್ಲಿ ಹಚ್ಚಿದ ಬೆಂಕಿಯಿಂದ 16 ವರ್ಷದ ಒಬ್ಬ ಬಾಲಕ ಮೃತಪಟ್ಟಿದ್ದು, ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡರು. ತರಕಾರಿ ಖರೀದಿಸಲು ತೆರಳುತ್ತಿದ್ದ ಬಾಲಕ ಹಿಂಸಾಚಾರಕ್ಕೆ ಬಲಿಯಾಗಿದ್ದಾನೆ. ಮೃತ ಬಾಲಕನನ್ನು ಗುಲ್ಶನ್ ಕುಮಾರ್‌ ಎಂದು ಗುರುತಿಸಲಾಗಿದೆ. ಈತ ಸ್ಥಳೀಯ ದಿನಗೂಲಿ ಕಾರ್ಮಿಕರೊಬ್ಬರ ಮಗ ಎಂದು ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಹಾರ್‌ ಶರೀಫ್‌ನ ಪಹಾರೌರಾ ಪ್ರದೇಶದಲ್ಲಿ ಎರಡು ಗುಂಪುಗಳು ಪರಸ್ಪರ ಗುಂಡು ಹಾರಿಸಿಕೊಂಡಿವೆ. ಈ ವೇಳೆ ಬಾಲಕನ ತಲೆ ಭಾಗಕ್ಕೆ ಗುಂಡು ತಾಗಿದೆ. ತಕ್ಷಣ ಆತನನ್ನು ಪಾಟ್ನಾ ವೈದ್ಯಕೀಯ ಆಸ್ಪತ್ರೆ ಕರೆದೊಯ್ಯಲಾಗಿದೆ. ಆದರೆ ಬಾಲಕ ಮೃತಪಟ್ಟ ಎಂದು ಪೊಲೀಸರು ಹೇಳಿದರು. ಮೃತ ಬಾಲಕನ ಕುಟುಂಬಕ್ಕೆ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ₹5 ಲಕ್ಷ ಪರಿಹಾರ ಘೋಷಿಸಿದರು.

ಗಾಯಗೊಂಡವರನ್ನು ಮೊಹಮ್ಮದ್‌ ಶಕಿಲ್‌ (66) ಮತ್ತು ಮೊಹಮ್ಮದ್‌ ತಾಜ್‌ (32) ಎಂದು ಗುರುತಿಸಲಾಗಿದೆ. ಗುಂಡಿನ ದಾಳಿ ವೇಳೆ ಇಬ್ಬರಿಗೂ ಗುಂಡು ತಗುಲಿದೆ. ಇಬ್ಬರೂ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಾಮ ನವಮಿ ಉತ್ಸವದ ಮೆರವಣಿಗೆಗೆ ಸಂಬಂಧಿಸಿದ ಹಿಂಸಾಚಾರಕ್ಕೆ ಸಾಕ್ಷಿಯಾದ ನಳಂದ ಜಿಲ್ಲೆಯ ಬಿಹಾರ್ ಶರೀಫ್ ಮತ್ತು ರೋಹ್ತಾಸ್ ಜಿಲ್ಲೆಯ ಸಸಾರಾಮ್ ನಗರಗಳಲ್ಲಿ ಭಾನುವಾರವೂ (ಏಪ್ರಿಲ್ 2) ಉದ್ವಿಗ್ನ ವಾತಾವರಣ ಮುಂದುವರಿದಿತ್ತು.

“ಕೋಮು ಹಿಂಸಾಚಾರ ಘಟನೆಗಳ ಬಗ್ಗೆ ನಿಗಾ ವಹಿಸಿ, ಅಪರಾಧಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಿ” ಎಂದು ಪೊಲೀಸರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

ಪಶ್ಚಿಮ ಬಂಗಾಳದಲ್ಲೂ ಹಿಂಸಾಚಾರ

ಬಿಹಾರದ ನಂತರ ಪಶ್ಚಿಮ ಬಂಗಾಳದಲ್ಲೂ ರಾಮ ನವಮಿ ಉತ್ಸವದ ಹಿಂಸಾಚಾರ ಭುಗಿಲೆದ್ದಿದೆ. ಇಲ್ಲಿಯ ಹೂಗ್ಲಿ ನಗರದಲ್ಲಿ ಎರಡು ಗುಂಪುಗಳ ನಡುವೆ ಕೋಮು ಹಿಂಸಾಚಾರ ನಡೆದಿದೆ.

ರಾಮನ ಉತ್ಸವದ ವೇಳೆ ಬಿಜೆಪಿ ಕೈಗೊಂಡ ಶೋಭಾ ಯಾತ್ರೆಯಲ್ಲಿ ಕೋಮು ಹಿಂಸಾಚಾರ ನಡೆದಿದೆ. ಯಾತ್ರೆಯಲ್ಲಿ ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್‌ ಘೋಷ್‌ ಭಾಗವಹಿಸಿದ್ದರು. ಬಿಜೆಪಿ ವಿರುದ್ಧ ಘೋಷಣೆ ಕೂಗಿ ಕೆಲವು ದುಷ್ಕರ್ಮಿಗಳು ಯಾತ್ರೆ ಮೇಲೆ ಕಲ್ಲು ತೂರಾಟ ನಡೆಸಿದರು. ಇದು ಕೋಮು ಹಿಂಸಾಚಾರದ ಕಿಡಿ ಹೊತ್ತಿಸಿತು.

ಈ ಸುದ್ದಿ ಓದಿದ್ದೀರಾ? ರಾಹುಲ್‌ ಗಾಂಧಿ ಸರ್ವಾಧಿಕಾರ ವಿರುದ್ಧದ ಒಂದು ಕ್ರಾಂತಿ: ನವಜೋತ್‌ ಸಿಂಗ್‌ ಸಿಧು

ರಾಮ ನವಮಿ ಉತ್ಸವದ ಶೋಭಾ ಯಾತ್ರೆಯಲ್ಲಿ ಎರಡು ಗುಂಪುಗಳು ಪರಸ್ಪರ ಕೈ ಕೈ ಮಿಲಾಯಿಸಿ ಹಿಂಸಾಚಾರ ಇಳಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ. ಇದರಿಂದ ಯಾತ್ರೆಗೆ ತೊಡಕಾಗಿದೆ. ಹಿಂಸಾಚಾರಕ್ಕೆ ಸಂಬಂಧಿಸಿ 12ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ರಾಮ ನವಮಿ ಉತ್ಸವಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಹಿಂದೆ ಹೌರಾ ನಗರದಲ್ಲಿಯೂ ಹಿಂಸಾಚಾರ ನಡೆದಿತ್ತು.

3fc71c934f523957b32c0dd3d0e48cbcbd9cdd59923741ff837bb405a2b7ba0f?s=150&d=mp&r=g
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...