ಗರ್ಭಿಣಿ ಮೇಲೆ ಅತ್ಯಾಚಾರ – ಹತ್ಯೆ; ಉದ್ವಿಗ್ನಗೊಂಡ ಗ್ರಾಮ ತೊರೆದ ಪುರುಷರು

Date:

ಗರ್ಭಿಣಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿ, ಹತ್ಯೆ ಮಾಡಿರುವ ಅಮಾನುಷ ಘಟನೆ ನಡೆದಿದೆ. ಕಾಮಕನ್ನು ಪೊಲೀಸರು ಬಂಧಿಸಿದ್ದು, ಆತನ ಮನೆಯನ್ನು ಕೆಲ ಗ್ರಾಮಸ್ಥರು ಸುಟ್ಟು ಹಾಕಿದ್ದಾರೆ. ಆರೋಪಿ ಮನೆಯನ್ನು ನಾಶ ಮಾಡಿದ ಬಳಿಕ, ತಮ್ಮನ್ನು ಪೊಲೀಸರು ಬಂಧಿಸುತ್ತಾರೆಂದು ಹೆದರಿ ಗ್ರಾಮದ ಸುಮಾರು 20% ಪುರುಷರು ಮೇ 3ರಂಉ ಗ್ರಾಮವನ್ನೇ ತೊರೆದಿದ್ದಾರೆ.

ರಾಜಸ್ಥಾನ ದೌಸಾ ಜಿಲ್ಲೆಯ ಗ್ರಾಮವೊಂದರಲ್ಲಿ ಏಪ್ರಿಲ್ 29ರಂದು 26 ವರ್ಷದ ಗರ್ಭಿಣಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದಾನೆ. ಅದೇ ದಿನ, ಜಗ್ರಾಮ್ ಮೀನಾ ಎಂಬ ಅರೋಪಿಯನ್ನು ಬಂಧಿಸಿದ್ದಾರೆ. ಘಟನೆಯಿಂದಾಗಿ ಒಂದು ವಾರದಿಂದ ಗ್ರಾಮವು ಉದ್ವಿಘ್ನಗೊಂಡಿದೆ.

ಆರೋಪಿಯನ್ನು ಬಂಧಿಸಿದ ಬಳಿಕ, ಮೇ 2ರಂದು ಆತನ ಮನೆ ಬಳಿ ಗ್ರಾಮಸ್ಥರ ಗುಂಪೊಂದು ಜಮಾಯಿಸಿತ್ತು. ಆ ವೇಳೆಗಾಗಲೇ ಆರೋಪಿಯ ಸಂಬಂಧಿಗಳು ಮನೆ ತೊರೆದು ಹೊರಟು ಹೋಗಿದ್ದರು. ಮನೆಯಲ್ಲಿ ಯಾರು ಇಲ್ಲದ್ದನ್ನು ಕಂಡ ಗುಂಪು, ಆರೋಪಿಯ ಮನೆ ಮತ್ತು ಆತನ ಕುಟುಂಬಕ್ಕೆ ಸಂಬಂಧಿಸಿದ್ದ ಅಕ್ಕ-ಪಕ್ಕದ ಎರಡು ಮನೆಗಳನ್ನು ಸುಟ್ಟು ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಕಿ ಹಚ್ಚಿದ ಘಟನೆಯಲ್ಲಿ ಸುಮಾರು 7 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಳಿಕ, ಬಂಧನ ಭೀತಿಯಲ್ಲಿ ಹಲವಾರು ಮಂದಿ ಊರು ತೊರೆದಿದ್ದಾರೆ.

ಗ್ರಾಮಸ್ಥರು ಊರು ತೊರೆದ ಮೂರು ದಿನಗಳ ಬಳಿಕ, ರಾಜಸ್ಥಾನದ ಸಚಿವ ಕಿರೋಡಿ ಲಾಲ್ ಮೀನಾ ಅವರು “ಗ್ರಾಮವನ್ನು ತೊರೆದಿರುವ ಯಾವುದೇ ಅಮಾಯಕರನ್ನು ಬಂಧಿಸುವುದಿಲ್ಲ. ತಪ್ಪಿತಸ್ಥರಿಗೆ ಮಾತ್ರವೇ ಶಿಕ್ಷೆಯಾಗಬೇಕು. ಅಮಾಕರಿಗೆ ತೊಂದರೆ ನೀಡುವುದಿಲ್ಲ” ಎಂದು ಭರವಸೆ ನೀಡಿದ್ದು, ಇದೀಗ, ಹಲವಾರು ಮಂದಿ ಪುರುಷರು ಗ್ರಾಮಕ್ಕೆ ಮರಳುತ್ತಿದ್ದಾರೆ.

“ಆರೋಪಿಯನ್ನು ಬಂಧಿಸಲಾಗಿತ್ತು. ಆದರೆ, ಗ್ರಾಮದ ಗುಂಪೊಂದು ಕಾನೂನನ್ನು ತನ್ನ ಕೈಗೆ ತೆಗೆದುಕೊಂಡಿದ್ದು, ಮನೆಗಳನ್ನು ಸುಟ್ಟುಹಾಕಿತು. ಗುಂಪಿನಲ್ಲಿದ್ದ ಸುಮಾರು ಏಳು ಮಂದಿ ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಅವರು ಆಸ್ಪತ್ರೆಯಲ್ಲಿದ್ದಾರೆ” ಎಂದು ದೌಸಾ ಸಹಾಯಕ ಪೊಲೀಸ್ ಅಧೀಕ್ಷಕ ದಿನೇಶ್ ಅಗರ್ವಾಲ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...