ಖ್ಯಾತ ಉದ್ಯಮಿ ರತನ್‌ ಟಾಟಾ ನಿಧನ: ಗಣ್ಯರು, ಅಭಿಮಾನಿಗಳಿಂದ ಕಂಬನಿ

Date:

ದೇಶದ ಕೈಗಾರಿಕಾ ಉದ್ಯಮಕ್ಕೆ ಹೊಸ ಅಲೆಯನ್ನು ಸೃಷ್ಟಿಸಿದ್ದ ಹೆಸರಾಂತ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ಬುಧವಾರ ರಾತ್ರಿ ಇಲ್ಲಿ ನಿಧನರಾದರು. ಅವರಿಗೆ 86 ವರ್ಷ ವಯಸ್ಸಾಗಿತ್ತು.

ಟಾಟಾ ಸಮೂಹ ಸಂಸ್ಥೆಗಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಅವರು ಕೆಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ತಮ್ಮ ಆರೋಗ್ಯ ಸ್ಥಿತಿ ಕುರಿತಂತೆ ಎರಡು ದಿನದ ಹಿಂದಷ್ಟೇ ವದಂತಿ ಹಬ್ಬಿದಾಗ ‘ನಾನು ಆರೋಗ್ಯ ವಾಗಿದ್ದೇನೆ’ ಎಂದು ಸ್ವತಃ ಸ್ಪಷ್ಟನೆ ನೀಡಿದ್ದರು.

ಬುಧವಾರ ಬೆಳಿಗ್ಗೆ ಅವರ ಆರೋಗ್ಯಸ್ಥಿತಿಯಲ್ಲಿ ಮತ್ತೆ ಏರುಪೇರು ಕಾಣಿಸಿಕೊಂಡ ಕಾರಣ ಅವರನ್ನು ಮುಂಬೈನ ಬ್ರೀಚ್‌ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ ಸುಮಾರು 11.30 ಗಂಟೆಗೆ ಅವರು ಮೃತಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ರತನ್‌ ಟಾಟಾ ಅವರು ಇನ್ನಿಲ್ಲ’ ಎಂದು ಟಾಟಾ ಸನ್ಸ್ ಸಂಸ್ಥೆಯ ಅಧ್ಯಕ್ಷ ಎನ್‌.ಚಂದ್ರಶೇಖರನ್ ರಾತ್ರಿ ಹೇಳಿಕೆ ಬಿಡುಗಡೆ ಮಾಡಿದ್ದು, ‘ರತನ್ ಟಾಟಾ ಅವರು ನನಗೆ ಸ್ನೇಹಿತ, ಗುರು ಮತ್ತು ಮಾರ್ಗದರ್ಶಿ’ ಎಂದೂ ಸ್ಮರಿಸಿದ್ದಾರೆ.

‘ರತನ್‌ ನೇವಲ್‌ ಟಾಟಾ ಅವರು ನಿಧನರಾಗಿದ್ದಾರೆ. ಅವರು ನೀಡಿದ ಅಪಾರ ಕೊಡುಗೆಗಳು ಟಾಟಾ ಸಮೂಹ ವನ್ನಷ್ಟೇ ಅಲ್ಲದೆ ರಾಷ್ಟ್ರವನ್ನು ರೂಪಿಸಿವೆ’ ಎಂದ ಟಾಟಾ ಸನ್ಸ್‌ ಅಧ್ಯಕ್ಷ ಎನ್‌.ಚಂದ್ರಶೇಖರನ್‌ ಹೇಳಿದ್ದಾರೆ. ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಉದ್ಯಮಿ ಹರೀಶ್‌ ಗೋಯೆಂಕಾ, ರತನ್ ಟಾಟಾ ಅವರನ್ನು ದಿಗ್ಗಜ ಎಂದು ಬಣ್ಣಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜಮ್ಮು- ಕಾಶ್ಮೀರ ; ಚುನಾಯಿತ ಸರ್ಕಾರ ಬಂದರೂ ಉಪರಾಜ್ಯಪಾಲರೇ ಸರ್ವಾಧಿಕಾರಿ!

ಎರಡು ದಿನದ ಹಿಂದೆಯಷ್ಟೇ ಅನಾರೋಗ್ಯ ಕುರಿತ ವದಂತಿಗಳ ನಡುವೆ, ಅವರು ಆರೋಗ್ಯವಾಗಿದ್ದಾರೆ ಎಂದು ತಿಳಿಸಲು ಟಾಟಾ ಅವರು ಸಹಿ ಮಾಡಿದ ಹೇಳಿಕೆಯನ್ನು ‘ಎಕ್ಸ್‌’ ಮತ್ತು ‘ಇನ್‌ಸ್ಟಾಗ್ರಾಮ್‌’ನಲ್ಲಿ ಬಿಡುಗಡೆ ಮಾಡಲಾಗಿತ್ತು. ರತನ್‌ ಟಾಟಾ ಅವರ ಅಗಲಿಗೆ ಹಲವು ಪ್ರಮುಖರು ಸಂತಾಪ ನುಡಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ ಹಾಗೂ ಹಲವು ಉದ್ಯಮ ಕ್ಷೇತ್ರದ ಹಲವು ಪ್ರಮುಖರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸುಮಾರು 20 ವರ್ಷ ಕಾಲ ಟಾಟಾ ಸನ್ಸ್ ಸಂಸ್ಥೆಯನ್ನು ಮುನ್ನಡೆಸಿದ್ದರು. ಅಲ್ಲದೆ, ದೇಶದ ಉದ್ಬಮದ ವಿವಿಧ ಕ್ಷೇತ್ರಗಳಲ್ಲಿ ಕಂಪನಿಯ ಬಾಹುವನಿನು ವಿಸ್ತರಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಸಂಖ್ಯ ಸಿಬ್ಬಂದಿಗೆ ಪ್ರೇರಕಶಕ್ತಿಯಾಗಿದ್ದರು. ದೇಶಿ ಉತ್ಪಾದನೆಗೆ ಮೆರಗು, ಖ್ಯಾತಿಯನ್ನು ನೀಡಿದ್ದರು.

ದೊಡ್ಡ ಸಂಸ್ಥೆಯ ಸ್ಥಾಪಕರಾಗಿ ನಮ್ರತೆ, ಸರಳತೆಯಿಂದಾಗಿಯೂ ಅವರು ಜನಮಾನಸದಲ್ಲಿ ವಿಶೇಷ ಸ್ಥಾನ ಪಡೆದಿದ್ದರು. ಟಾಟಾ ಸಂಸ್ಥೆ ಇಂದು ವಿಶ್ವದ ಅತಿದೊಡ್ಡ ಸಂಸ್ಥೆಗಳಲ್ಲಿ ಒಂದಾಗಿ ಖ್ಯಾತಿ ಪಡೆದಿದೆ. 2023–24ನೇ ಹಣಕಾಸು ವರ್ಷದಲ್ಲಿ ಸಮೂಹ ಸಂಸ್ಥೆಗಳ ಒಟ್ಟು ವರಮಾನ 165 ಬಿಲಿಯನ್ ಡಾಲರ್‌ಗಳು.

ಇಂದು ಅಪರಾಹ್ನದವರೆಗೆ ಮುಂಬೈಯಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ

ಟಾಟಾ ಗ್ರೂಪ್‌ ಅಧ್ಯಕ್ಷ ಮತ್ತು ಹಿರಿಯ ಕೈಗಾರಿಕೋದ್ಯಮಿ ರತನ್ ಟಾಟಾ ಅವರು ನಿನ್ನೆ ಬುಧವಾರ ತಡರಾತ್ರಿ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು ಅವರ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆ ಮಾಡಲಾಗಿದೆ.

ರತನ್ ಟಾಟಾ ನಿಧನಕ್ಕೆ ಮಹಾರಾಷ್ಟ್ರ ಸರ್ಕಾರ ಇಂದು ಒಂದು ದಿನದ ಶೋಕಾಚರಣೆ ಘೋಷಿಸಿದೆ ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ.ರತನ್ ಟಾಟಾ ಅವರ ಪಾರ್ಥಿವ ಶರೀರವನ್ನು ಇಂದು ಬೆಳಗ್ಗೆ 10 ಗಂಟೆಯಿಂದ ಅಪರಾಹ್ನ 3.30ರವರೆಗೆ ಮುಂಬೈಯ ನಾರಿಮನ್ ಪಾಯಿಂಟ್ ನಲ್ಲಿರುವ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (NCPA) ನಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಎಲ್ಲ ಪೊಲೀಸ್ ವ್ಯವಸ್ಥೆ ಮಾಡಲಾಗಿದೆ ಎಂದು ಮುಂಬೈ ದಕ್ಷಿಣ ವಲಯ ಹೆಚ್ಚುವರಿ ಆಯುಕ್ತ ಅಭಿನವ್ ದೇಶ್ ಮುಖ್ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...