ಬಡ್ಡಿದರ ಯಥಾಸ್ಥಿತಿ ಕಾಯ್ದುಕೊಂಡ ಆರ್‌ಬಿಐ: ಶೇ.6.5 ಮುಂದುವರಿಕೆ

Date:

ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಇಂದು ರೆಪೋ ದರವನ್ನು(ಬಡ್ಡಿದರ) ಶೇ. 6.5ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಬುಧವಾರದಿಂದ (ಜೂನ್ 5) ನಡೆದ ಹಣಕಾಸು ನೀತಿ ಸಮಿತಿ(ಎಂಪಿಸಿ) ಸಭೆಯಲ್ಲಿ ತೆಗೆದುಕೊಂಡ ನಿರ್ಧಾರವನ್ನು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಇಂದು ಪ್ರಕಟಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಕ್ತಿಕಾಂತ ದಾಸ್, ಹಣದುಬ್ಬರ ಇನ್ನೂ ಗುರಿಗಿಂತ ಮೇಲೆಯೇ ಇರುವುದರಿಂದ ಇನ್ನಷ್ಟು ಕಾಲ ಬಡ್ಡಿದರ ಮುಂದುವರಿಸುವುದು ಸೂಕ್ತ ಎನ್ನುವ ನಿಲುವು ತಳೆದಿದ್ದಾರೆ. ಕಳೆದ 15-16 ತಿಂಗಳಿಂದ ಆರ್‌ಬಿಐ ತನ್ನ ರೆಪೋ ಅಥವಾ ಬಡ್ಡಿದರದಲ್ಲಿ ಬದಲಾವಣೆ ಮಾಡಿಲ್ಲ. 2023ರ ಫೆಬ್ರುವರಿ 8ರಂದು ರೆಪೋ ದರವನ್ನು ಶೇ. 6.25ರಿಂದ ಶೇ. 6.50ಕ್ಕೆ ಹೆಚ್ಚಿಸಲಾಗಿತ್ತು. ಅಲ್ಲಿಂದ ಇಲ್ಲಿಯವರೆಗೂ ರೆಪೋ ದರದಲ್ಲಿ ಬದಲಾವಣೆ ಮಾಡಲಾಗಿಲ್ಲ. ಇನ್ನಷ್ಟು ತಿಂಗಳು ಇದೇ ದರ ಮುಂದುವರಿಯುವ ಸಾಧ್ಯತೆ ಇದೆ.

ಈ ಬಾರಿ ಆರ್‌ಬಿಐನಿಂದ ಬಡ್ಡಿದರದಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇಲ್ಲ ಎಂದೇ ಬಹಳಷ್ಟು ಆರ್ಥಿಕ ತಜ್ಞರು ಅಂದಾಜಿಸಿದ್ದರು. ನಿರೀಕ್ಷೆಯಂತೆಯೆ ಬದಲಾವಣೆಯಾಗಿಲ್ಲ. ಹಣದುಬ್ಬರ ಇನ್ನಷ್ಟು ಕಾಲ ತುಸು ಮೇಲ್ಮಟ್ಟದಲ್ಲೇ ಇರುವುದರಿಂದ, ಮತ್ತು ಹಣದುಬ್ಬರ ಹೆಚ್ಚಿದ್ದರೂ ಜಿಡಿಪಿ ನಿರೀಕ್ಷೆ ಮೀರಿ ಬೆಳೆಯುತ್ತಿರುವುದರಿಂದ ರೆಪೋ ದರದಲ್ಲಿ ಬದಲಾವಣೆ ಮಾಡುವ ಅವಶ್ಯಕತೆ ಆರ್‌ಬಿಐಗೆ ಬಂದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಜನರೊಂದಿಗೆ ನೊಂದು ಬೆಂದು ಬಂಗಾರವಾದ ರಾಹುಲ್ ಗಾಂಧಿ

ರೆಪೋದರ, ರಿವರ್ಸ್ ರೆಪೋ, ವಿತ್ಡ್ರಾಯಲ್ ಆಫ್ ಅಕಾಮೊಡೇಶನ್, ಎಸ್ಎಲ್ಆರ್ ಹೀಗೆ ವಿವಿಧ ದರಗಳ ಯಥಾಸ್ಥಿತಿ ಮುಂದುವರಿಯಲಿದೆ. ರೆಪೋ ದರದ ಬಗ್ಗೆ ನಿರ್ಧಾರ ತೆಗೆದುಕೊಳ್ಳುವ ವಿಚಾರದಲ್ಲಿ ಈ ಬಾರಿಯ ಎಂಪಿಸಿ ಸಭೆಯ ವಿಶೇಷತೆ ಎಂದರೆ ಯಥಾಸ್ಥಿತಿ ಮುಂದುವರಿಸುವ ನಿರ್ಧಾರದ ಪರವಾಗಿ 4:2ರ ಬಹುಮತ ವ್ಯಕ್ತವಾಗಿದೆ. ಆರು ಸದಸ್ಯರಿರುವ ಎಂಪಿಸಿ ಸಭೆಯಲ್ಲಿ ಇಬ್ಬರು ಇದಕ್ಕೆ ವಿರೋಧ ವ್ಯಕ್ತಪಡಿಸಿರುವುದು ಗಮನಾರ್ಹ. ಹಿಂದಿನ ಕೆಲ ಎಂಪಿಸಿ ಸಭೆಗಳಲ್ಲಿ 5:1ರ ಬಹುಮತದಿಂದ ನಿರ್ಧಾರ ಪ್ರಕಟವಾಗುತ್ತಿತ್ತು.

ವಾಣಿಜ್ಯ ಬ್ಯಾಂಕುಗಳು ಆರ್‌ಬಿಐನಿಂದ ಪಡೆಯುವ ಸಾಲಕ್ಕೆ ತೆರಬೇಕಿರುವ ಬಡ್ಡಿದರವನ್ನು ರೆಪೋ ದರ ಎನ್ನಲಾಗುತ್ತದೆ. ಇದಕ್ಕೆ ಅನುಗುಣವಾಗಿ ಬ್ಯಾಂಕುಗಳು ತಮ್ಮ ಗ್ರಾಹಕರಿಗೆ ಬಡ್ಡಿ ನಿಗದಿ ಮಾಡಬಹುದು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...