2019ರ ಚುನಾವಣೆಗಾಗಿ ಕೇಂದ್ರಕ್ಕೆ 3 ಲಕ್ಷ ಕೋಟಿ ರೂ.ಹಣ ವರ್ಗಾವಣೆಗೆ ನಿರಾಕರಿಸಿದ್ದ ಆರ್‌ಬಿಐ

Date:

2019ರ ಲೋಕಸಭೆ ಚುನಾವಣೆಗೆ ಕೇವಲ ಒಂದು ವರ್ಷದ ಮೊದಲು 2018 ರಲ್ಲಿ ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನಡುವೆ ಹಣಕಾಸಿನ ವರ್ಗಾವಣೆಗೆ ಸಂಬಂಧಿಸಿದಂತೆ ಘರ್ಷಣೆ ಉಂಟಾಗಿದ್ದ ಘಟನೆ ಈಗ ಬೆಳಕಿಗೆ ಬಂದಿದೆ.

ಆರ್‌ಬಿಐ ಮಾಜಿ ಡೆಪ್ಯುಟಿ ಗವರ್ನರ್ ವೈರಲ್ ಆಚಾರ್ಯ ಅವರು ತಮ್ಮ ಪುಸ್ತಕದ (2020 ರಲ್ಲಿ ಪೆಂಗ್ವಿನ್‌ ರಾಂಡಮ್‌ ಹೌಸ್‌ ಇಂಡಿಯಾದಿಂದ ಪ್ರಕಟವಾದ) ಕ್ವೆಸ್ಟ್ ಫಾರ್ ರಿಸ್ಟೋರಿಂಗ್ ಫೈನಾನ್ಷಿಯಲ್ ಸ್ಟೆಬಿಲಿಟಿಗೆ ನೀಡಿದ ಹೇಳಿಕೆಯಲ್ಲಿ, ಚುನಾವಣಾ ಪೂರ್ವ ವೆಚ್ಚಕ್ಕಾಗಿ 2018 ರಲ್ಲಿ ತನ್ನ ಬ್ಯಾಲೆನ್ಸ್ ಶೀಟ್‌ನಿಂದ 2-3 ಲಕ್ಷ ಕೋಟಿ ರೂಪಾಯಿಗಳನ್ನು ಹೊರತೆಗೆಯುವ ಸರ್ಕಾರದ ಪ್ರಸ್ತಾಪವನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನಿರಾಕರಿಸಿತ್ತು ಎಂದು ಹೇಳಿರುವುದನ್ನು ಮಾಧ್ಯಮವೊಂದು ವರದಿ ಮಾಡಿದೆ.

ಈ ಸುದ್ದಿ ಓದಿದ್ದೀರಾ? ತಮಿಳುನಾಡು | ದಲಿತ ಮಹಿಳೆ ತಯಾರಿಸಿದ ಅಡುಗೆ ಸೇವಿಸಲು ನಿರಾಕರಿಸಿದ ವಿದ್ಯಾರ್ಥಿಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಚಾರ್ಯ ಅವರು ತಮ್ಮ ಪುಸ್ತಕದ ಮುನ್ನುಡಿಯಲ್ಲಿ, ಹಣಕಾಸಿನ ಸ್ಥಿರತೆಯ ಮೇಲೆ ಸಂಭಾವ್ಯ ಪ್ರಭಾವದ ಬಗ್ಗೆ ಕಳವಳ ವ್ಯಕ್ತಪಡಿಸಿ ಸರ್ಕಾರದ ಕೋರಿಕೆಯನ್ನು ನಿರಾಕರಿಸುವ ಆರ್‌ಬಿಐ ನಿರ್ಧಾರಕ್ಕೆ ಕಾರಣವಾದ ವಿಚಾರವನ್ನು ವಿವರಿಸಿದ್ದಾರೆ. ಆಚಾರ್ಯ ಅವರ ಪ್ರಕಾರ, ಸರ್ಕಾರದ ಉದ್ದೇಶವು ಚುನಾವಣೆ ಪೂರ್ವದ ವೆಚ್ಚದ ಪ್ರಯತ್ನಗಳನ್ನು ಬಲಪಡಿಸುವುದಾಗಿತ್ತು. ಇದು ಆರ್‌ಬಿಐನ ಬ್ಯಾಲೆನ್ಸ್ ಶೀಟ್ ಅನ್ನು ಗಮನಾರ್ಹವಾಗಿ ಕಡಿಮೆ ಮಾಡುತ್ತದೆ ಎಂದಿದ್ದರು.

ಹಿಂದಿನ ಸರ್ಕಾರಗಳ ಅವಧಿಯಲ್ಲಿ ಆರ್‌ಬಿಐ ಸಂಗ್ರಹಿಸಿದ ಗಣನೀಯ ಮೊತ್ತವನ್ನು ಪ್ರಸ್ತುತ ಸರ್ಕಾರದ ಖಾತೆಗೆ ವರ್ಗಾಯಿಸಲು “ಅಧಿಕಾರಶಾಹಿ ಮತ್ತು ಸರ್ಕಾರ”ದಲ್ಲಿನ ಮನಸ್ಸುಗಳು ಯೋಜನೆಯನ್ನು ರೂಪಿಸಿವೆ ಎಂದು ಆಚಾರ್ಯ ಅವರು ಪೂರ್ವಭಾವಿಯಾಗಿ ಹೇಳಿದ್ದಾರೆ. ಪ್ರತಿ ವರ್ಷ ಕೇಂದ್ರೀಯ ಬ್ಯಾಂಕ್ ತನ್ನ ಗಳಿಕೆಯ ಒಂದು ಭಾಗವನ್ನು ಸಂಪೂರ್ಣವಾಗಿ ಸರ್ಕಾರಕ್ಕೆ ವಿತರಿಸುವ ಬದಲು ಮೀಸಲಿಡುತ್ತದೆ. ನೋಟು ಅಮಾನ್ಯೀಕರಣದ ಹಿಂದಿನ ಮೂರು ವರ್ಷಗಳಲ್ಲಿ, ಕೇಂದ್ರ ಬ್ಯಾಂಕ್ ಸರ್ಕಾರಕ್ಕೆ ದಾಖಲೆಯ ಲಾಭವನ್ನು ವರ್ಗಾವಣೆ ಮಾಡಿದೆ ಎಂದು ಆಚಾರ್ಯ ಹೇಳಿದ್ದಾರೆ.

ಆಚಾರ್ಯ ಅವರು 2019 ರಲ್ಲಿ ತಮ್ಮ ಅವಧಿ ಮುಗಿಯುವ ಆರು ತಿಂಗಳ ಮೊದಲು, ಒಂದು ವರ್ಷದ ನಂತರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ನಂತರ ಆರ್‌ಬಿಐ ಗವರ್ನರ್ ಹುದ್ದೆಗೆ ಊರ್ಜಿತ್ ಪಟೇಲ್ ರಾಜೀನಾಮೆ ನೀಡಿದ್ದರು.

ಆಚಾರ್ಯ ಅವರು ಈ ವಿಚಾರ ಬಹಿರಂಗ ಪಡಿಸಿದ ನಂತರ ಕೇಂದ್ರ ಸರ್ಕಾರ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...