RCBಯದ್ದು ಕಳ್ಳ ಒಪ್ಪಂದ; ಆರ್‌ ಅಶ್ವಿನ್ ಬಹಿರಂಗ ಟೀಕೆ

Date:

2025ರ ಐಪಿಎಲ್‌ ಟೂರ್ನಿಗಾಗಿ ನಡೆದ ಮೆಗಾ ಹರಾಜಿನ ಸಮಯದಲ್ಲಿ ಆಸ್ಟ್ರೇಲಿಯಾದ ಬ್ಯಾಟ್ಸ್‌ಮನ್ ಟಿಮ್ ಡೇವಿಡ್‌ ಅವರನ್ನು ಬಿಡ್‌ ಮಾಡುವಂತೆ ಐಪಿಎಲ್‌ ತಂಡಗಳಿಗೆ ಸಲಹೆ ನೀಡಿದ್ದೆ. ಆದರೆ, ನನ್ನ ಸಲಹೆಯನ್ನು ಎಲ್ಲ ತಂಡಗಳು ನಿರ್ಲಕ್ಷಿಸಿದವು. ಟಿಮ್ ಡೇವಿಡ್ ಅವರನ್ನು ಆರ್‌ಸಿಬಿ ಕೇವಲ3 ಕೋಟಿ ರೂ.ಗೆ ಖರೀದಿಸಿತು. ಇದು ಆರ್‌ಸಿಬಿಯ ಕಳ್ಳ ಒಪ್ಪಂದ ಎಂದು ಭಾರತ ಕ್ರಿಕೆಟ್‌ ತಂಡ ಮಾಜಿ ಆಲ್‌ರೌಂಡರ್‌ ಆರ್‌ ಅಶ್ಚಿನ್ ಆರೋಪಿಸಿದ್ದಾರೆ.

2024ರಲ್ಲಿ ಮುಂಬೈ ಇಂಡಿಯನ್ಸ್ ತಂಡದಲ್ಲಿ ಆಡಿದ್ದ ಟಿಮ್‌ ಡೇವಿಡ್ ಅವರನ್ನು 2025ರ ಟೂರ್ನಿಯಲ್ಲಿ ತಂಡ ಕೈಬಿಟ್ಟಿತ್ತು. ಬ್ಯಾಟಿಂಗ್‌ನಲ್ಲಿ ಪ್ರಬಲ ಹೊಡೆತಗಳ ಪ್ರದರ್ಶನ ನೀಡುವ ಟಿಮ್ ಡೇವಿಡ್‌ಅನ್ನು ಮೆಗಾ ಹರಾಜಿನಲ್ಲಿ ಖರೀದಿಸಲು ಯಾವುದೇ ತಂಡವು ಬಿಡ್‌ ಮಾಡಲು ಮುಂದೆ ಬರಲಿಲ್ಲ. ಅವರನ್ನುಆರ್‌ಸಿಬಿ ಪ್ರಾಂಚೈಸಿ ಕೇವಲ 3 ಕೋಟಿ ರೂ.ಗೆ ಖರೀದಿಸಿ, ತಂಡಕ್ಕೆ ಸೇರಿಸಿಕೊಂಡಿತು.

ಟಿಮ್‌ ಡೇವಿಡ್‌ ಆಯ್ಕೆಯು ಆರ್‌ಸಿಬಿಗೆ ಗೆಮ್‌ ಚೇಂಜರ್‌ ಆಗಿ ಪರಿಣಮಿಸಿತು. ಆರ್‌ಸಿಬಿಯ ಚೊಚ್ಚಲ ಕಪ್ ಗೆಲ್ಲುವಲ್ಲಿ ಡೇವಿಡ್ ನಿರ್ಣಾಯಕ ಪಾತ್ರ ವಹಿಸಿದರು. ಐಪಿಎಲ್-2025ರ ಸೀಸನ್‌ನಲ್ಲಿ ಡೇವಿಡ್‌ 12 ಪಂದ್ಯಗಳನ್ನು ಆಡಿ, 185.15ರ ಅದ್ಭುತ ಸ್ಟ್ರೈಕ್ ರೇಟ್‌ನೊಂದಿಗೆ 187 ರನ್ ಗಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡೇವಿಡ್‌ ಖರೀದಿಯ ಬಗ್ಗೆ 2025ರ ಐಪಿಎಲ್ ಟೂರ್ನಿಯಲ್ಲಿ ಸಿಎಸ್‌ಕೆ ಪರವಾಗಿ ಆಡಿದ್ದ ಆರ್‌ ಅಶ್ವಿನ್ ಮಾತನಾಡಿದ್ದಾರೆ. ಹರಾಜಿನ ಸಮಯದಲ್ಲಿ ಡೇವಿಡ್ ಅವರನ್ನು ಬಿಡ್ ಮಾಡಲು ಎಲ್ಲ ತಂಡಗಳಿಗೆ ಸಲಹೆ ನೀಡಿದದ್ದೆ. ಆದರೆ, ಯಾರೂ ಅವರನ್ನು ಖರೀದಿಸಲಿಲ್ಲ ಎಂದು ಹೇಳಿದ್ದಾರೆ. ಆರ್‌ಸಿಬಿಯ ನಡೆಯನ್ನು ‘ಕಳ್ಳ ಒಪ್ಪಂದ’ ಎಂದು ಬಣ್ಣಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಕ್ಯೂಬಾ ಕ್ರಾಂತಿಯ ಕಿಡಿ, ಬಂಡವಾಳಿಗರ ದುಸ್ವಪ್ನ ಫಿಡೆಲ್ ಕ್ಯಾಸ್ಟ್ರೋ

“ನಾನು ಇದನ್ನು ಹೇಳಬಾರದು. ಆದರೆ, ಕೆಲವು ಐಪಿಎಲ್ ತಂಡಗಳಲ್ಲಿ ನಿರ್ಧಾರ ತೆಗೆದುಕೊಳ್ಳುವವರಿಗೆ ಡೇವಿಡ್‌ ಅವರನ್ನು ಆಯ್ಕೆ ಮಾಡಲು ಸಲಹೆ ನೀಡಿದ್ದೆ. ಆದರೆ, ಅವರೆಲ್ಲರೂ ‘ಇಲ್ಲ, ಅವರ ಆಟ ತೀವ್ರವಾಗಿ ಕುಸಿದಿದೆ’ ಎಂಬುದಾಗಿ ಹೇಳಿದರು. ಬಿಡ್‌ನಿಂದ ಹಿಂದೆ ಸರಿದರು” ಎಂದು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಅಶ್ವಿನ್ ಹೇಳಿದ್ದಾರೆ.

“ಟಿ20 ಕ್ರಿಕೆಟ್‌ನ ಭವಿಷ್ಯವು ಬಲವಾದ ಮೈಕಟ್ಟು ಹೊಂದಿರುವ ಎತ್ತರದ ಬ್ಯಾಟ್ಸ್‌ಮನ್‌ಗಳ ಮೇಲೆ ಅವಲಂಬಿತವಾಗುತ್ತಿದೆ. ವೈಡ್ ಲೈನ್‌ನಲ್ಲಿ ಯಾವುದೇ ಬದಲಾವಣೆಗಳನ್ನು ತರದಿದ್ದರೆ, ಟಿ20 ಕ್ರಿಕೆಟ್‌ನಲ್ಲಿ ಅವರು ಮೇಲುಗೈ ಸಾಧಿಸಲಿದ್ದಾರೆ. ಮೂಲ ಬೆಲೆಗೆ (3 ಕೋಟಿ ರೂ.) ಖರೀದಿಯಾದ ಡೇವಿಡ್‌ ಅವರು ಆರ್‌ಸಿಬಿಯ ಆಟವನ್ನು ನಿರ್ಣಾಯಕ ಹಂತಕ್ಕೆ ಕೊಂಡೊಯ್ದಿದ್ದಾರೆ. ಆರ್‌ಸಿಬಿಯ ನಡೆ ನಿಜವಾಗಿಯೂ ಕಳ್ಳತನ” ಎಂದು ಅವರು ಹೇಳಿದ್ದಾರೆ.

ಜೂನ್ 3ರಂದು ಅಹಮದಾಬಾದ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ಅನ್ನು ಸೋಲಿಸಿ, ಆರ್‌ಸಿಬಿ ತಂಡವು ಐಪಿಎಲ್ ಟ್ರೋಫಿಯನ್ನು ಗೆದ್ದಿತು. 191 ರನ್‌ಗಳ ಬೆನ್ನಟ್ಟಿದ ಪಂಜಾಬ್ ತಂಡವು ಕೇವಲ ಆರು ರನ್‌ಗಳಿಂದ ಸೋಲುಂಡಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...