ಸಮ್ಮತಿ ಇಲ್ಲದೆ ಫೋನ್ ರೆಕಾರ್ಡ್ ಮಾಡುವುದು ಖಾಸಗಿ ಹಕ್ಕಿನ ಉಲ್ಲಂಘನೆ; ಛತ್ತೀಸ್‌ಗಡ ಹೈಕೋರ್ಟ್

Date:

ಸಮ್ಮತಿಯಿಲ್ಲದೆ ಮೊಬೈಲ್ ಫೋನ್ ಸಂಭಾಷಣೆಯನ್ನು ರೆಕಾರ್ಡ್ ಮಾಡಿದ್ದರೆ, ಅದನ್ನು ಸಾಕ್ಷ್ಯವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಛತ್ತೀಸ್‌ಗಢ ಹೈಕೋರ್ಟ್ ತೀರ್ಪು ನೀಡಿದೆ.

ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 125ರ ಅಡಿಯಲ್ಲಿ ದಾಖಲಾಗಿದ್ದ ಜೀವನಾಂಶ ಪ್ರಕರಣದ ಮೇಲ್ಮನವಿಗೆ ಸಂಬಂಧಿಸಿದಂತೆ ನ್ಯಾಯಾಲಯವು ತೀರ್ಪು ಪ್ರಕಟಿಸಿದೆ.

ಸಂವಿಧಾನದ 21ನೇ ಪರಿಚ್ಛೇದದ ಅಡಿಯಲ್ಲಿ ಖಾತರಿಪಡಿಸಲಾದ ಗೌಪ್ಯತೆಯ ಹಕ್ಕಿನ ಕುರಿತು ಈ ಹಿಂದೆ ನೀಡಲಾಗಿರುವ ಹಲವು ತೀರ್ಪುಗಳನ್ನು ಅವಲಂಬಿಸಿರುವ ಹೈಕೋರ್ಟ್, “ಒಪ್ಪಿಗೆಯಿಲ್ಲದೆ ಫೋನ್ ಸಂಭಾಷಣೆಗಳನ್ನು ರೆಕಾರ್ಡ್ ಮಾಡುವುದು ಗೌಪ್ಯತೆಯ ಮೇಲಿನ ಆಕ್ರಮಣಕ್ಕೆ ಸಮಾನವಾಗಿದೆ” ಎಂದು ಅಭಿಪ್ರಾಯಪಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ 38 ವರ್ಷದ ಮಹಿಳೆಯೊಬ್ಬರು 2021ರ ಅಕ್ಟೋಬರ್‌ನಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಸಮ್ಮತಿಯಿಲ್ಲದೆ ಮೊಬೈಲ್ ಫೋನ್ ಸಂಭಾಷಣೆಯನ್ನು ರೆಕಾರ್ಡ್ ಮಾಡುವುದನ್ನು ಸಾಕ್ಷ್ಯವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದಿದೆ.

ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿದ ಕೆಲವು ದೂರವಾಣಿ ಸಂಭಾಷಣೆಗಳ ಆಧಾರದಲ್ಲಿ 44 ವರ್ಷದ ಪತಿ (ಪೊಲೀಸ್ ಕಾನ್‌ಸ್ಟೆಬಲ್‌) ತನ್ನ ಪತ್ನಿಯನ್ನು ಮರು ಪರೀಕ್ಷಿಸಲು ಕೌಟುಂಬಿಕ ನ್ಯಾಯಾಲಯ ಅನುಮತಿ ನೀಡಿತ್ತು.

ಮಹಿಳೆಯ ಪರ ವಕೀಲ ವೈಭವ್ ಗೋವರ್ಧನ್ ಅವರು ಸುಪ್ರೀಂ ಕೋರ್ಟ್ ಮತ್ತು ಮಧ್ಯಪ್ರದೇಶದ ಹೈಕೋರ್ಟ್‌ನ ಹಿಂದಿನ ತೀರ್ಪುಗಳನ್ನು ಉಲ್ಲೇಖಿಸಿ ವಾದ ಮಂಡಿಸಿದ್ದರು. ಕೌಟುಂಬಿಕ ನ್ಯಾಯಾಲಯದ ಆದೇಶವು ತನ್ನ ಕಕ್ಷಿದಾರನ ಖಾಸಗಿತನದ ಹಕ್ಕನ್ನು ಉಲ್ಲಂಘಿಸಿದೆ ಎಂದಿದ್ದರು.

ಇದನ್ನೂ ಓದಿರಿ: ಕೆಪಿಸಿಸಿ ಅಂದರೆ ಕರ್ನಾಟಕ ಪ್ರದೇಶ ಕಮಿಷನ್ ಕಮಿಟಿ: ಸಿ ಟಿ ರವಿ ವ್ಯಂಗ್ಯ

ಎರಡೂ ಕಡೆಯ ವಾದವನ್ನು ಆಲಿಸಿದ ಹೈಕೋರ್ಟ್ ನ್ಯಾಯಾಧೀಶ ರಾಕೇಶ್ ಮೋಹನ್ ಪಾಂಡೆ ಅವರು, “ಪ್ರತಿವಾದಿಯು ಅರ್ಜಿದಾರರ ಸಂಭಾಷಣೆಯನ್ನು ಆಕೆಗೆ ತಿಳಿಯದಂತೆ ದಾಖಲಿಸಿದ್ದಾರೆ ಎಂದು ತೋರುತ್ತಿದೆ. ಇದು ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸುತ್ತದೆ” ಎಂದು ತಿಳಿಸಿದ್ದಾರೆ.

“ಇದಲ್ಲದೆ, ಖಾಸಗಿತನದ ಹಕ್ಕು ಸಂವಿಧಾನದ 21 ನೇ ವಿಧಿಯಿಂದ ಕಲ್ಪಿಸಲ್ಪಟ್ಟಿರುವ ಜೀವನದ ಹಕ್ಕಿನ ಅತ್ಯಗತ್ಯ ಅಂಶವಾಗಿದೆ. ಆದ್ದರಿಂದ ಕೌಟುಂಬಿಕ ನ್ಯಾಯಾಲಯವು ಸಿಆರ್‌ಪಿಸಿಯ ಸೆಕ್ಷನ್ 311ರ ಅಡಿಯಲ್ಲಿ ಅರ್ಜಿ ಅನುಮತಿಸಿ ಲೋಪವೆಸಗಿದೆ. ಭಾರತೀಯ ಸಾಕ್ಷ್ಯ ಕಾಯಿದೆಯ ಸೆಕ್ಷನ್ 65ರ ಅಡಿಯಲ್ಲಿ ಪ್ರಮಾಣ ಪತ್ರವನ್ನು ನೀಡಿರುವುದು ತಪ್ಪು” ಎಂದಿದೆ. ಜೊತೆಗೆ ಕೌಟುಂಬಿಕ ನ್ಯಾಯಾಲಯವು ನೀಡಿದ ಆದೇಶವನ್ನು ಈ ಮೂಲಕ ರದ್ದುಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...