ದೆಹಲಿ ಸ್ಫೋಟ ದುರಂತ: ಮುಗಿಲು ಮುಟ್ಟಿದ ಮೃತರ ಕುಟುಂಬಗಳ ರೋದನ

Date:

ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ಸಂಜೆ ಸಂಭವಿಸಿದ ಭಾರಿ ಸ್ಫೋಟದಲ್ಲಿ ಮೃತಪಟ್ಟವರು ತಮ್ಮ ಕುಟುಂಬಗಳಿಗೆ ಆಧಾರಸ್ತಂಭರಾಗಿದ್ದರು. ಈ ದುರ್ಘಟನೆಯಿಂದ ಹಲವಾರು ಮನೆಗಳಲ್ಲಿ ದುಃಖ ಮಡುಗಟ್ಟಿದೆ. ಮೃತರ ಪೈಕಿ ಯುವಕರು, ಟ್ಯಾಕ್ಸಿ ಚಾಲಕರು, ಕಂಡಕ್ಟರ್‌ ಸೇರಿದ್ದಾರೆ.

ಮೃತರ ಪೈಕಿ ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಜಿಂಝಾನಾ ಪಟ್ಟಣದ 18 ವರ್ಷದ ನೌಮನ್‌ ಅನ್ಸಾರಿ ಎಂಬ ಯುವಕರೊಬ್ಬರು ಸೇರಿದ್ದಾರೆ. ಅನ್ಸಾರಿ ಕುಟುಂಬದ ಆಧಾರ ಸ್ತಂಭವಾಗಿದ್ದ. ತನ್ನ ಅಂಗಡಿಗೆ ಸೌಂದರ್ಯವರ್ಧಕ ಸಾಮಗ್ರಿಗಳನ್ನು ಖರೀದಿಸಲು ತಮ್ಮ ಸೋದರ ಸಂಬಂಧಿ ಅಮನ್‌ ಜೊತೆ ದೆಹಲಿಗೆ ಆಗಮಿಸಿದ್ದರು. ಸ್ಫೋಟದ ಸ್ಥಳದಲ್ಲೇ ಮೃತಪಟ್ಟರು. ಅಮನ್‌ ಗಂಭೀರವಾಗಿ ಗಾಯಗೊಂಡಿದ್ದು, ಲೋಕನಾಯಕ್‌ ಜೈ ಪ್ರಕಾಶ್‌ ನಾರಾಯಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮತ್ತೊಬ್ಬ ಸಂತ್ರಸ್ತ ಪಂಕಜ್ ಸಾಹ್ನಿ (22), ಮೂರು ವರ್ಷಗಳಿಂದ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಸ್ಫೋಟದ ತೀವ್ರತೆಗೆ ಅವರ ತಲೆಯ ಹಿಂಭಾಗಕ್ಕೆ ಗಂಭೀರ ಗಾಯವಾಗಿ, ಅವರು ಓಡಿಸುತ್ತಿದ್ದ ವ್ಯಾಗನಾರ್ ಕಾರು ಸಂಪೂರ್ಣ ಹಾನಿಗೊಳಗಾಗಿದೆ ಎಂದು ಸಂಬಂಧಿಕ ರಾಮದೇವ್ ಕಣ್ಣೀರಿನೊಂದಿಗೆ ವಿವರಿಸಿದರು. ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಡಿಟಿಸಿ ಕಂಡಕ್ಟರ್ ಅಶೋಕ್ ಕುಮಾರ್ (34) ಕೂಡ ಈ ಘಟನೆಯಲ್ಲಿ ಮೃತಪಟ್ಟಿದ್ದಾರೆ. ಶವಾಗಾರದ ಬಳಿ ಕಾಯುತ್ತಿರುವ ಸಂಬಂಧಿಕರ ದೃಶ್ಯಗಳು ಹೃದಯ ವಿದ್ರಾವಕವಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸುಧಾರಣೆಯಾಗಬೇಕಾದದ್ದು ಜೈಲುಗಳೋ, ರಾಜ್ಯ ಸರ್ಕಾರವೋ?

ಸ್ಫೋಟದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಮ್ ಪ್ರತಾಪ್, ಬಿಹಾರ ಮೂಲದವರು ಮತ್ತು ರಸ್ತೆಬದಿ ತಿನಿಸು ಅಂಗಡಿಯ ಮಾಲೀಕರು. ಅವರು ಘಟನೆಯನ್ನು ನೆನಪಿಸಿಕೊಳ್ಳುತ್ತಾ, “ರಸ್ತೆಯುದ್ದಕ್ಕೂ ರಕ್ತದ ಕಲೆಗಳು, ಮೃತದೇಹಗಳು, ಸುರಿಯುತ್ತಿದ್ದ ರಕ್ತ… ನಾವು ಸಾವನ್ನು ಅತಿ ಹತ್ತಿರದಿಂದ ಅನುಭವಿಸಿದ್ದೇವೆ” ಎಂದು ನಡುಗುತ್ತಾ ಹೇಳಿದರು. ಅವರ ಬಲಗೈಗೆ ಗಂಭೀರ ಗಾಯವಾಗಿದ್ದು, ಸ್ಫೋಟದ ನಂತರ ಹೊಗೆ ಮತ್ತು ಕಿರುಚಾಟಗಳ ನಡುವೆ ಏನೂ ಕೇಳಿಸದ ಸ್ಥಿತಿಯಲ್ಲಿದ್ದೆವು ಎಂದರು.

ಅದೇ ರೀತಿ, ಟ್ಯಾಂಕರ್ ಮಾಲೀಕ ವಿಜೇಂದರ್ ಯಾದವ್ ಕೂಡ ಭಯಾನಕ ದೃಶ್ಯಗಳನ್ನು ವಿವರಿಸಿದರು. “ಸ್ಫೋಟದ ಆಘಾತಕ್ಕೆ ನೆಲಕ್ಕೆ ಬಿದ್ದೆ, ಮೇಲೆದ್ದಾಗ ಬಟ್ಟೆಗಳು ರಕ್ತಮಯವಾಗಿದ್ದವು. ರಸ್ತೆಯಲ್ಲಿ ಗಾಜಿನ ಚೂರುಗಳು ಮತ್ತು ಮೃತದೇಹದ ತುಂಡುಗಳು ಚೆಲ್ಲಾಪಿಲ್ಲಿಯಾಗಿದ್ದವು. ನಾನು ಬದುಕುಳಿದದ್ದೇ ಪವಾಡ” ಎಂದು ಹೇಳಿದರು. ಬಿಹಾರದವರಾದ ಅವರು ಎರಡು ದಶಕಗಳಿಂದ ನೀರು ಸರಬರಾಜು ವ್ಯವಹಾರದಲ್ಲಿದ್ದು, ಪತ್ನಿ ಮತ್ತು ನಾಲ್ವರು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದಾರೆ.

ಕಾರು ರಾಜಧಾನಿ ಪ್ರವೇಶಿಸಿದ್ದು ಹೇಗೆ? ಮತ್ತೊಮ್ಮೆ ಬಯಲಾದ ಕೇಂದ್ರದ ಭದ್ರತಾ ವೈಫಲ್ಯ

ಈ ಸ್ಫೋಟದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಭದ್ರತಾ ಮತ್ತು ಗುಪ್ತಚರ ವ್ಯವಸ್ಥೆಯ ಗಂಭೀರ ವೈಫಲ್ಯಗಳು ಬೆಳಕಿಗೆ ಬಂದಿವೆ. ಫರೀದಾಬಾದ್‌ನಲ್ಲಿ ಸ್ಫೋಟಕಗಳನ್ನು ವಶಪಡಿಸಿಕೊಂಡ ನಂತರವೂ, ಶಂಕಿತನು 2,900 ಕೆ.ಜಿ ಸ್ಫೋಟಕಗಳೊಂದಿಗೆ ಕಾರನ್ನು ದೆಹಲಿಯ ಮಧ್ಯಭಾಗಕ್ಕೆ ತಂದು ಮೂರು ಗಂಟೆಗಳ ಕಾಲ ಪಾರ್ಕ್ ಮಾಡಿಟ್ಟಿದ್ದು ಹೇಗೆ? ಇದು ‘ವೈಟ್ ಕಾಲರ್ ಭಯೋತ್ಪಾದಕ ಜಾಲ’ದ ಚಟುವಟಿಕೆಗಳನ್ನು ತಡೆಯಲು ಸರ್ಕಾರದ ಗುಪ್ತಚರ ವಿಭಾಗದ ನಿರ್ಲಕ್ಷ್ಯವನ್ನು ಸೂಚಿಸುತ್ತದೆ. ರಾಜಧಾನಿಯ ಭದ್ರತಾ ಕ್ರಮಗಳು ದುರ್ಬಲವಾಗಿದ್ದು, ಸಾರ್ವಜನಿಕರ ಜೀವಗಳನ್ನು ಅಪಾಯಕ್ಕೆ ತಳ್ಳಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಸರ್ಕಾರ ಈ ವೈಫಲ್ಯಕ್ಕೆ ಉತ್ತರ ನೀಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...