ಗಾಲ್ವಾನ್ ಸಂಘರ್ಷದಲ್ಲಿ ಹುತಾತ್ಮ ಯೋಧನ ಪತ್ನಿ ರೇಖಾ ಸಿಂಗ್ ಭಾರತೀಯ ಸೇನೆಗೆ ನಿಯೋಜನೆ

Date:

  • ಲೆಫ್ಟಿನೆಂಟ್ ಆಗಿ ಭಾರತೀಯ ಸೇನೆಯಲ್ಲಿ ನಿಯೋಜನೆಗೊಂಡ ರೇಖಾ ಸಿಂಗ್
  • 2020ರ ಪೂರ್ವ ಲಡಾಖ್‌ನ ಗಾಲ್ವಾನ್ ಸಂಘರ್ಷದಲ್ಲಿ ಯೋಧನ ಸಾವು

ಗಾಲ್ವಾನ್ ಕಣಿವೆ ಸಂಘರ್ಷದಲ್ಲಿ ಮಡಿದ ವೀರ ಯೋಧನ ಪತ್ನಿ ರೇಖಾ ಸಿಂಗ್ ಅವರನ್ನು ಇದೀಗ ಭಾರತೀಯ ಸೇನೆಯಲ್ಲಿ ಸೇರ್ಪಡೆಗೊಳಿಸಲಾಗಿದೆ.

ಪತಿಯನ್ನು ಕಳೆದುಕೊಂಡ ಮೂರು ವರ್ಷಗಳ ನಂತರ ರೇಖಾ ಅವರಿಗೆ ಶನಿವಾರ (ಏಪ್ರಿಲ್ 29) ಭಾರತೀಯ ಸೇನೆಯಲ್ಲಿ ಸ್ಥಾನ ನೀಡಲಾಗಿದೆ. ಅವರು ಭಾರತೀಯ ಸೇನೆಗೆ ಲೆಫ್ಟಿನೆಂಟ್ ಆಗಿ ನೇಮಕಗೊಂಡಿದ್ದಾರೆ.

ಕಳೆದ ಮೂರು ವರ್ಷಗಳಿಂದ ಸಂಘರ್ಷದ ತಾಣವಾಗಿರುವ ಪೂರ್ವ ಲಡಾಖ್‌ಗೆ ರೇಖಾ ಅವರನ್ನು ನಿಯೋಜಿಸಲು ಸೇನೆ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗಾಲ್ವಾನ್ ಕಣಿವೆ ಸಂಘರ್ಷದಲ್ಲಿ ರೇಖಾ ಅವರ ಪತಿ ಯೋಧ ನಾಯಕ್ ದೀಪಕ್‌ ಸಿಂಗ್ ಹುತಾತ್ಮರಾಗಿದ್ದರು.

“ಮರಣೋತ್ತರ ವೀರಚಕ್ರ ಪಡೆದ ನಾಯಕ್ ದೀಪಕ್ ಸಿಂಗ್ ಅವರ ಪತ್ನಿಯಾಗಿರುವ ಮಹಿಳಾ ಕೆಡೆಟ್ ರೇಖಾ ಅವರು ಚೆನ್ನೈನಲ್ಲಿ ತರಬೇತಿ ಪೂರ್ಣಗೊಳಿಸಿದ ನಂತರ ಭಾರತೀಯ ಸೇನೆಗೆ ನೇಮಕಗೊಂಡಿದ್ದಾರೆ. ದೀಪಕ್ ಅವರು ಗಾಲ್ವಾನ್ ಘರ್ಷಣೆಯ ಸಮಯದಲ್ಲಿ ಹುತಾತ್ಮರಾಗಿದ್ದರು” ಎಂದು ಭಾರತೀಯ ಸೇನೆ ಟ್ವೀಟ್ ಮಾಡಿದೆ.

ದೀಪಕ್‌ ಸಿಂಗ್‌ ಅವರು ಬಿಹಾರ ರೆಜಿಮೆಂಟ್‌ನ 16ನೇ ಬೆಟಾಲಿಯನ್‌ ಯೋಧ. ದೀಪಕ್ ಅವರಿಗೆ 2021ರ ನವೆಂಬರ್‌ನಲ್ಲಿ ಮರಣೋತ್ತರವಾಗಿ ವೀರ ಚಕ್ರ ನೀಡಲಾಗಿದೆ. ಪರಮ ವೀರ ಚಕ್ರ ಮತ್ತು ಮಹಾ ವೀರ ಚಕ್ರದ ನಂತರ ಭಾರತದ ಮೂರನೇ ಅತ್ಯುನ್ನತ ಮಿಲಿಟರಿ ಗೌರವ ಇದಾಗಿದೆ.

ರೇಖಾ ಸಿಂಗ್‌ ಸೇರಿದಂತೆ ಚೆನ್ನೈ ಮೂಲದ ಆಫೀಸರ್ಸ್ ಟ್ರೇನಿಂಗ್ ಅಕಾಡೆಮಿಯಿಂದ ಉತ್ತೀರ್ಣರಾದ ಐವರು ಮಹಿಳೆಯರನ್ನು ಮೊದಲ ಬಾರಿಗೆ ಫಿರಂಗಿದಳದ ರೆಜಿಮೆಂಟ್‌ಗೆ ಸೇರಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಸಕ್ಕರೆ ಉತ್ಪಾದನೆಯಲ್ಲಿ ಕುಸಿತ; ರಫ್ತು ನಿಷೇಧಿಸಲಿರುವ ಕೇಂದ್ರ

ಐವರಲ್ಲಿ ಮೂವರನ್ನು ಚೀನಾ ಗಡಿ ಕಾಯುವ ಘಟಕಗಳಿಗೆ ನಿಯೋಜನೆಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

2020ರ ಜೂನ್ 15ರಂದು ಪೂರ್ವ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಚೀನಿ ಪೀಪಲ್ಸ್ ಲಿಬರೇಷನ್ ಆರ್ಮಿ (ಪಿಎಲ್ಎ) ಮತ್ತು ಭಾರತೀಯ ಯೋಧರ ನಡುವೆ ಸಂಘರ್ಷ ನಡೆಯಿತು. ಇದರಲ್ಲಿ ಭಾರತೀಯ ಸೇನೆಯ 20 ಯೋಧರು ಹುತಾತ್ಮರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...