ಗುಪ್ತ ಶುಲ್ಕಗಳಿಗೆ ಕೇಂದ್ರದ ತಡೆ: ವಿಮಾನದಲ್ಲಿ ಶೇ.60ರಷ್ಟು ಸೀಟುಗಳ ಆಯ್ಕೆ ಸಂಪೂರ್ಣ ಉಚಿತ

Date:

ಭಾರತದಲ್ಲಿ ವಿಮಾನ ಪ್ರಯಾಣಿಕರಿಗೆ ಹೆಚ್ಚುವರಿ ಶುಲ್ಕಗಳ ಹೊರೆಯಿಂದ ಶೀಘ್ರದಲ್ಲೇ ದೊಡ್ಡ ರಿಲೀಫ್ ಸಿಗುವ ನಿರೀಕ್ಷೆಯಿದೆ. ಟಿಕೆಟ್ ಬುಕಿಂಗ್ ಅಥವಾ ವೆಬ್ ಚೆಕ್-ಇನ್ ಸಮಯದಲ್ಲಿ ಸೀಟು ಆಯ್ಕೆಯ ಮೇಲೆ ವಿಮಾನಯಾನ ಸಂಸ್ಥೆಗಳು ವಿಧಿಸುತ್ತಿದ್ದ ಗುಪ್ತ ಶುಲ್ಕಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ಪ್ರಯಾಣಿಕರ ಹಕ್ಕುಗಳನ್ನು ಬಲಪಡಿಸುವ ಮತ್ತು ವಿಮಾನಯಾನವನ್ನು ಹೆಚ್ಚು ಪಾರದರ್ಶಕವಾಗಿಸುವ ನಿಟ್ಟಿನಲ್ಲಿ ಕನಿಷ್ಠ ಶೇ. 60ರಷ್ಟು ಸೀಟುಗಳನ್ನು ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ, ಸಂಪೂರ್ಣ ಉಚಿತವಾಗಿ ಆಯ್ಕೆ ಮಾಡಲು ಅವಕಾಶ ನೀಡಬೇಕು ಎಂದು ನಾಗರಿಕ ವಿಮಾನಯಾನ ಸಚಿವಾಲಯವು ಮಹತ್ವದ ನಿರ್ದೇಶನ ನೀಡಿದೆ.

ನಾಗರಿಕ ವಿಮಾನಯಾನ ನಿರ್ದೇಶನಾಲಯದ ಮೂಲಕ ಹೊರಡಿಸಲಾಗಿರುವ ಈ ಹೊಸ ಆದೇಶವು, ಪ್ರಯಾಣಿಕರಿಗೆ ನ್ಯಾಯಯುತ ಪ್ರವೇಶವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಇದಲ್ಲದೆ, ಒಂದೇ ಪಿಎನ್‌ಆರ್ ಅಡಿಯಲ್ಲಿ ಟಿಕೆಟ್ ಕಾಯ್ದಿರಿಸಿದ ಕುಟುಂಬಸ್ಥರು ಅಥವಾ ಗುಂಪಾಗಿ ಪ್ರಯಾಣಿಸುವ ಪ್ರಯಾಣಿಕರಿಗೆ ಒಟ್ಟಿಗೆ, ಅಕ್ಕಪಕ್ಕದ ಸೀಟುಗಳನ್ನು ಒದಗಿಸುವುದನ್ನು ಸಂಸ್ಥೆಗಳು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿದೆ. ಇದರಿಂದಾಗಿ, ತಮ್ಮವರ ಜೊತೆ ಕುಳಿತುಕೊಳ್ಳಲು ಹೆಚ್ಚುವರಿ ಹಣ ಪಾವತಿಸುತ್ತಿದ್ದ ಪ್ರಯಾಣಿಕರಿಗೆ ದೊಡ್ಡ ನೆಮ್ಮದಿ ಸಿಕ್ಕಂತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

ಕೇವಲ ಸೀಟುಗಳ ಆಯ್ಕೆ ಮಾತ್ರವಲ್ಲದೆ, ಪ್ರಯಾಣಿಕರ ಒಟ್ಟಾರೆ ಅನುಭವವನ್ನು ಸುಧಾರಿಸಲು ಡಿಜಿಸಿಎಗೆ ಹೆಚ್ಚಿನ ಸೂಚನೆಗಳನ್ನು ನೀಡಲಾಗಿದೆ. ಕ್ರೀಡಾ ಉಪಕರಣಗಳು ಮತ್ತು ಸಂಗೀತ ವಾದ್ಯಗಳನ್ನು ಒಯ್ಯಲು ಸುರಕ್ಷತಾ ನಿಯಮಗಳಿಗೆ ಒಳಪಟ್ಟು ಪಾರದರ್ಶಕ- ಸ್ನೇಹಿ ರೀತಿಯಲ್ಲಿ ಅನುಕೂಲ ಮಾಡಿಕೊಡಬೇಕಾಗುತ್ತದೆ. ಜೊತೆಗೆ, ಸಾಕುಪ್ರಾಣಿಗಳನ್ನು ವಿಮಾನದಲ್ಲಿ ಕೊಂಡೊಯ್ಯುವ ಕುರಿತು ಆಗಾಗ್ಗೆ ಏರ್ಪಡುತ್ತಿದ್ದ ಗೊಂದಲಗಳನ್ನು ನಿವಾರಿಸಲು ಸ್ಪಷ್ಟ ನೀತಿಗಳನ್ನು ಪ್ರಕಟಿಸುವಂತೆಯೂ ವಿಮಾನಯಾನ ಸಂಸ್ಥೆಗಳಿಗೆ ಕಟ್ಟುನಿಟ್ಟಾಗಿ ತಿಳಿಸಲಾಗಿದೆ.

ವಿಮಾನ ವಿಳಂಬ, ರದ್ದತಿ ಮತ್ತು ಬೋರ್ಡಿಂಗ್ ನಿರಾಕರಣೆಯಂತಹ ಸಂದರ್ಭಗಳಲ್ಲಿ ಪ್ರಯಾಣಿಕರ ಹಕ್ಕುಗಳ ರಕ್ಷಣೆಗೆ ಸರ್ಕಾರವು ಹೆಚ್ಚಿನ ಒತ್ತು ನೀಡಿದೆ. ವಿಮಾನಯಾನ ಸಂಸ್ಥೆಗಳು ತಮ್ಮ ವೆಬ್‌ಸೈಟ್‌ಗಳು, ಮೊಬೈಲ್ ಅಪ್ಲಿಕೇಷನ್‌ಗಳು, ಬಿಕಿಂಗ್‌ ಪ್ಲಾಟ್‌ಫಾರ್ಮ್‌ಗಳು ಮತ್ತು ವಿಮಾನ ನಿಲ್ದಾಣದ ಕೌಂಟರ್‌ಗಳಲ್ಲಿ ಈ ಹಕ್ಕುಗಳನ್ನು ಎದ್ದು ಕಾಣುವಂತೆ ಪ್ರದರ್ಶಿಸುವುದು ಕಡ್ಡಾಯವಾಗಿದೆ. ಜೊತೆಗೆ, ಹೆಚ್ಚಿನ ಜನರಿಗೆ ತಲುಪುವ ಉದ್ದೇಶದಿಂದ, ಪ್ರಯಾಣಿಕರಿಗೆ ಅವರ ಹಕ್ಕುಗಳ ಬಗ್ಗೆ ಪ್ರಾದೇಶಿಕ ಭಾಷೆಗಳಲ್ಲೂ ಮಾಹಿತಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಸರ್ಕಾರ ತಾಕೀತು ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಎಐಎಡಿಎಂಕೆ 178, ಬಿಜೆಪಿ 27 ಕ್ಷೇತ್ರಗಳಲ್ಲಿ ಸ್ಪರ್ಧೆ

ಈ ಬಾರಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೇರಲೇ ಬೇಕೆಂದು ಪಣ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...