ಸದ್ಗುರು ಜಗ್ಗಿ ವಾಸುದೇವ್‌ ಆಶ್ರಮದಲ್ಲಿ ಮಹಿಳೆಯರ ಅಕ್ರಮ ಬಂಧನ; ಪ್ರಕರಣ ವಜಾಗೊಳಿಸಿದ ಸುಪ್ರೀಂ

Date:

ತಮಿಳುನಾಡಿನ ಕೊಯಂಬತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಇಶಾ ಫೌಂಡೇಷನ್‌ ಆಶ್ರಮದಲ್ಲಿ ಮಹಿಳೆಯರನ್ನು ಅಕ್ರಮವಾಗಿ ಹಿಡಿದಿಟ್ಟುಕೊಳ್ಳಲಾಗಿದೆ ಎಂಬ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಮಹಿಳೆಯರ ಪೋಷಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಮಹಿಳೆಯರು ಸ್ವಯಂಪ್ರೇರಿತವಾಗಿ ಆಶ್ರಮದಲ್ಲಿದ್ದು, ಯಾವುದೇ ಬಲವಂತ ಕಂಡುಬಂದಿಲ್ಲ ಎಂದು ತೀರ್ಪಿನಲ್ಲಿ ತಿಳಿಸಿದೆ.

ಮಹಿಳೆಯರನ್ನು ಅಕ್ರಮವಾಗಿ ಬಂಧನದಲ್ಲಿ ಇಟ್ಟುಕೊಂಡಿದ್ದಾರೆ ಎಂದು ತಮಿಳುನಾಡು ಪೊಲೀಸರು ಆರೋಪಿಸಿದ ಮದ್ರಾಸ್‌ ಹೈಕೋರ್ಟ್‌ನಲ್ಲಿ ವಿಚಾರಣೆಗೊಳಪಟ್ಟಿತ್ತು. ತಾವು ಸ್ವಯಂಪ್ರೇರಿತವಾಗಿ ಇರುವುದಾಗಿ ಮಹಿಳೆಯರು ಪೊಲೀಸರಿಗೆ ಹೇಳಿಕೆ ನೀಡಿದ ನಂತರ ಪ್ರಕರಣವನ್ನು ಕೈಬಿಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಮಹಾ’ ಚುನಾವಣೆಗಾಗಿ ಒಂದಾದ ಮನುವಾದಿಗಳು, ಒಂದಾಗದ ಜಾತ್ಯತೀತರು

ಇಶಾ ಫೌಂಡೇಷನ್‌ ಆಶ್ರಮವನ್ನು ಪ್ರತಿನಿಧಿಸಿದ್ದ ಹಿರಿಯ ನ್ಯಾಯವಾದಿ ಮುಕುಲ್ ರೊಹಟಗಿ, ಮಹಿಳೆಯರು ತಾವು 24 ಹಾಗೂ 27 ವರ್ಷವಿರುವಾಗಲೇ ಸ್ವಯಂಪ್ರೇರಿತವಾಗಿ ಆಶ್ರಮಕ್ಕೆ ಸೇರಿದ್ದಾರೆ. ಆಶ್ರಮದ ಎಲ್ಲ ಕಾರ್ಯಕ್ರಮಗಳಲ್ಲೂ ಪಾಲ್ಗೊಳ್ಳುತ್ತಿದ್ದಾರೆ. ತಮ್ಮ ಪೋಷಕರೊಂದಿಗೂ ನಿರಂತರವಾಗಿ ಸಂಪರ್ಕ ಹೊಂದಿದ್ದಾರೆ. ಹೀಗಾಗಿ ಅಕ್ರಮವಾಗಿ ಇರುವುದು ಕಂಡುಬಂದಿಲ್ಲ ಎಂದು ಮುಖ್ಯ ನ್ಯಾಯಮೂರ್ತಿ ಡಿ ವಿ ಚಂದ್ರಚೂಡ್‌ ಪೀಠಕ್ಕೆ ಮನವರಿಕೆ ಮಾಡಿದರು.

ಸೆಪ್ಟೆಂಬರ್‌ನಲ್ಲಿ, ಮದ್ರಾಸ್ ಹೈಕೋರ್ಟ್ ಸಂಸ್ಥೆಯ ವಿರುದ್ಧ ದಾಖಲಾಗಿರುವ ಎಲ್ಲ ಕ್ರಿಮಿನಲ್ ಪ್ರಕರಣಗಳ ಸ್ಥಿತಿಗತಿ ವರದಿಯನ್ನು ಕೇಳಿತ್ತು .

ಕೊಯಂಬತ್ತೂರಿನ ಎಸ್‌ಪಿ ಕೆ ಕಾರ್ತಿಕೇಯನ್‌ ಅವರು ಆಶ್ರಮದಲ್ಲಿ ಕಳೆದ 15 ವರ್ಷಗಳಿಂದ 6 ವ್ಯಕ್ತಿಗಳು ಕಾಣೆಯಾಗಿರುವ ಬಗ್ಗೆ ಅಲನ್‌ದೊರೈ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, 5 ಪ್ರಕರಣಗಳು ಇತ್ಯರ್ಥವಾಗಿದ್ದು, ಒಂದು ಪ್ರಕರಣ ತನಿಖಾ ಹಂತದಲ್ಲಿದೆ ಎಂದು ಕೋರ್ಟ್‌ಗೆ ಮಾಹಿತಿ ನೀಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...