ಪ್ರಪಂಚದಲ್ಲಿನ ಸಂಘರ್ಷಗಳಿಗೆ ಧರ್ಮವೇ ಕಾರಣ: ಆರ್‌ಎಸ್‌ಎಸ್‌ ಮುಖ್ಯಸ್ಥ ಭಾಗವತ್

Date:

“ಅನೇಕರು ತಮ್ಮ ಧರ್ಮ ಮತ್ತು ನಂಬಿಕೆಗಳೇ ಸರ್ವೋಚ್ಚ ಎಂದು ಭಾವಿಸುವುದರಿಂದ, ಪ್ರಪಂಚದಾದ್ಯಂತ ಸಂಘರ್ಷಗಳಿಗೆ ಧರ್ಮವೇ ಕಾರಣ. ಏಕತೆಗೆ ಕರೆ ನೀಡುವ ಸನಾತನ ಧರ್ಮವನ್ನು ಅನುಸರಿಸುವುದರಿಂದ ಹಿಂದು ಧರ್ಮವು ವಿಭಿನ್ನವಾಗಿ ಕಾಣುತ್ತದೆ” ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದಾರೆ.

ಕೇರಳದ ಪತ್ತನಂತಿಟ್ಟ ಜಿಲ್ಲೆಯ ಪಂಪಾ ನದಿಯ ದಡದಲ್ಲಿ ನಡೆದ ‘ಹಿಂದು ಏಕತಾ ಸಮ್ಮೇಳನ’ದಲ್ಲಿ ಮಾತನಾಡಿದ ಭಾಗವತ್, “ಧರ್ಮವನ್ನು ನಿಯಮಗಳಿಗೆ ಬದ್ಧವಾಗಿ ಆಚರಿಸಬೇಕು. ಯಾವುದೇ ಆಚರಣೆಗಳು ನಿಯಮಗಳ ವ್ಯಾಪ್ತಿಯಿಂದ ಹೊರಗಿದ್ದರೆ, ಅವುಗಳನ್ನು ರದ್ದುಗೊಳಿಸಬೇಕು. ನಾರಾಯಣ ಗುರು ಹೇಳುವಂತೆ, ಜಾತಿವಾದ ಮತ್ತು ಅಸ್ಪೃಶ್ಯತೆಯು ಧರ್ಮವಲ್ಲ. ಅವುಗಳನ್ನು ರದ್ದುಗೊಳಿಸಬೇಕು” ಎಂದು ಭಾಗವತ್ ಹೇಳಿದ್ದಾರೆ.

“ಹಿಂದುಗಳು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವಾಗ ಸಾಂಪ್ರದಾಯಿಕ ಉಡುಗೆ ತೊಡಬೇಕು. ಯಾವಾಗಲೂ ಸ್ಥಳೀಯ ಆಹಾರಗಳನ್ನೇ ತಿನ್ನಬೇಕು. ಇಂಗ್ಲಿಷ್ ಭಾಷೆಯಲ್ಲಿ ಮಾತನಾಡಬಾರದು” ಎಂದು ಭಾಗವತ್ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ಹಿಂದು ಧರ್ಮದ ಆತ್ಮವೇ ‘ಧರ್ಮ’. ಪ್ರತಿಯೊಬ್ಬರೂ ಧರ್ಮವನ್ನು ಪಾಲಿಸಬೇಕು. ತಮ್ಮ ಜೀವನಶೈಲಿ ಹಿಂದು ಸಂಪ್ರದಾಯಕ್ಕೆ ಅನುಗುಣವಾಗಿ ಇದೆಯೇ ಎಂಬುದನ್ನು ಪ್ರತಿ ಕುಟುಂಬವೂ ನೋಡಬೇಕು. ಪ್ರಾರ್ಥಿಸಲು ಅಥವಾ ಚರ್ಚಿಸಲು ವಾರಕ್ಕೊಮ್ಮೆಯಾದರೂ ಎಲ್ಲರೂ ಒಟ್ಟುಗೂಡಬೇಕು” ಎಂದು ಹೇಳಿದ್ದಾರೆ.

ಈ ವರದಿ ಓದಿದ್ದೀರಾ?; ಬಜೆಟ್‌ ವಿಶ್ಲೇಷಣೆ | ಬೇಟಿ ಬಚಾವೊ-ಬೇಟಿ ಪಢಾವೊ; ಹೇಳಿದ್ದೊಂದು ಮಾಡಿದ್ದೊಂದು

”ನಾವು ಮಾತನಾಡುವ ಭಾಷೆ, ನಾವು ಪ್ರಯಾಣಿಸುವ ಸ್ಥಳಗಳು ಮತ್ತು ನಮ್ಮ ಬಟ್ಟೆಗಳು ಸಂಪ್ರದಾಯಕ್ಕೆ ಹೊಂದಿಕೆಯಾಗುತ್ತವೆಯೇ ಎಂದು ನಾವು ಯೋಚಿಸಬೇಕು. ಸಹಾಯದ ಅಗತ್ಯವಿರುವ ನಮ್ಮ ಸ್ವಂತ ಸಹೋದರರನ್ನು ಭೇಟಿ ಮಾಡಬೇಕು. ನಾವು ಇಂಗ್ಲಿಷ್ ಮಾತನಾಡಬಾರದು ಮತ್ತು ನಮ್ಮ ಸ್ಥಳೀಯ ಆಹಾರ ಪದ್ದತಿಯನ್ನು ಅನುಸರಿಸಬೇಕು” ಎಂದಿದ್ದಾರೆ.

“ಹಿಂದು ಸಮಾಜವು ತನ್ನ ಉಳಿವಿಗಾಗಿ ಒಂದಾಗಬೇಕು. ಸಮುದಾಯವಾಗಿ ತನ್ನನ್ನು ತಾನು ಬಲಪಡಿಸಿಕೊಳ್ಳಬೇಕು. ಆದರೆ, ಬಲಪಡಿಸುವಿಕೆಯು ತನ್ನದೇ ಆದ ಭಯವನ್ನು ಹೊಂದಿದೆ. ಶಕ್ತಿಯನ್ನು ಹೇಗೆ ಬಳಸಬೇಕು ಎಂಬುದು ಮುಖ್ಯ. ಶಕ್ತಿಯ ಬಳಕೆಯು ಬೇರೆಯವರಿಗೆ ಹಾನಿ ಮಾಡಬಾರದು” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...