ದಾರಿತಪ್ಪಿಸುವ ಜಾಹೀರಾತು; ಬೌರ್ನ್‌ವಿಟಾ ಸಂಸ್ಥೆಗೆ ಮಕ್ಕಳ ಆಯೋಗ ನೋಟಿಸ್

Date:

  • ಬೌರ್ನ್ವಿಟಾದಲ್ಲಿ ಹಾನಿಕಾರಕ ಹೆಚ್ಚಿನ ಸಕ್ಕರೆ ಅಂಶವಿದೆ ಎಂದು ನೋಟಿಸ್
  • ಈ ಆರೋಗ್ಯ ಪಾನೀಯ ಕುಡಿದರೆ ಕ್ಯಾನ್ಸರ್‌ ಬರುತ್ತದೆ ಎಂದಿದ್ದ ರೇವಂತ್ ಹಿಮತ್ಸಿಂಕಾ

ದಾರಿತಪ್ಪಿಸುವ ಜಾಹೀರಾತುಗಳು, ಪ್ಯಾಕೇಜಿಂಗ್ ಮತ್ತು ಲೇಬಲ್‌ಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಆರೋಗ್ಯ ಪಾನೀಯ ಬೌರ್ನ್‌ವಿಟಾ ತಯಾರಿಸುವ ಮೊಂಡೆಲೆಜ್ ಇಂಟರ್‌ನ್ಯಾಶನಲ್ ಇಂಡಿಯಾ ಸಂಸ್ಥೆಗೆ ಮಕ್ಕಳ ಹಕ್ಕುಗಳ ರಕ್ಷಣಾ ರಾಷ್ಟ್ರೀಯ ಆಯೋಗ ನೋಟಿಸ್ ನೀಡಿದೆ.

“ಈ ಆರೋಗ್ಯ ಪಾನೀಯದಲ್ಲಿ ಹೆಚ್ಚಿನ ಸಕ್ಕರೆ ಅಂಶವಿದೆ. ಅಲ್ಲದೆ ನಿಮ್ಮ ಕಂಪನಿಯು ತಯಾರಿಸಿದ ಉತ್ಪನ್ನವು ಪ್ಯಾಕೇಜಿಂಗ್ ಮತ್ತು ಜಾಹೀರಾತುಗಳ ಮೂಲಕ ಗ್ರಾಹಕರನ್ನು ದಾರಿತಪ್ಪಿಸುತ್ತಿದೆ ಎಂಬುದನ್ನು ಆಯೋಗ ಗಮನಿಸುತ್ತಿದೆ” ಎಂದು ಮಕ್ಕಳ ಹಕ್ಕುಗಳ ಸಂಸ್ಥೆಯು ಏಪ್ರಿಲ್ 21ರಂದು ನೀಡಿರುವ ನೋಟಿಸ್‌ನಲ್ಲಿ ತಿಳಿಸಿದೆ.

ಮಕ್ಕಳ ಬೆಳವಣಿಗೆಯನ್ನು ಹೆಚ್ಚಿಸುವ ಆರೋಗ್ಯ ಪಾನೀಯವಾಗಿ ಬೌರ್ನ್‌ವಿಟಾವನ್ನು ಮೊಂಡೆಲೆಜ್ ಇಂಟರ್‌ನ್ಯಾಶನಲ್ ಇಂಡಿಯಾ ಕಂಪನಿ ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿ ದೂರು ಸ್ವೀಕರಿಸಲಾಗಿದೆ ಎಂದಿರುವ ಆಯೋಗ, “ಇದು ಹೆಚ್ಚಿನ ಶೇಕಡಾವಾರು ಸಕ್ಕರೆ ಮತ್ತು ಇತರ ಪದಾರ್ಥಗಳನ್ನು ಹೊಂದಿದ್ದು, ಇದರಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ” ಎಂಬ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೋದಿ ಉಪನಾಮ ಪ್ರಕರಣ: ಅರ್ಜಿ ವಿಚಾರಣೆಯಿಂದ ಹಿಂದೆ ಸರಿದ ಹೈಕೋರ್ಟ್‌ ನ್ಯಾಯಮೂರ್ತಿ

ಇತ್ತೀಚಿಗೆ ಸಾಮಾಜಿಕ ಮಾಧ್ಯಮದಲ್ಲಿ ಜನಪ್ರಿಯರಾಗಿರುವ ರೇವಂತ್ ಹಿಮತ್ಸಿಂಕಾ ಎಂಬವರು ವಿಡಿಯೋವೊಂದನ್ನು ಹಂಚಿಕೊಂಡಿದ್ದು, “ಮಕ್ಕಳ ಪಾನೀಯವೆಂದೇ ಜನಪ್ರಿಯವಾಗಿರುವ ಬೌರ್ನ್‌ವಿಟಾದಲ್ಲಿ ಹೆಚ್ಚಿನ ಸಕ್ಕರೆ ಅಂಶವಿದೆ. ಇದನ್ನು ಸೇವಿಸುವುದರಿಂದ ಮಧುಮೇಹ ಮತ್ತು ಕ್ಯಾನ್ಸರ್‌ ಬರಬಹುದು” ಎಂದು ಆರೋಪಿಸಿದ್ದರು.

ಈ ವಿಡಿಯೋ ಹಂಚಿಕೊಂಡ ನಂತರ ವಿವಾದ ಉಂಟಾಗಿದೆ. ಅಲ್ಲದೆ ಈ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ 1 ಕೋಟಿಗೂ ಹೆಚ್ಚು ಜನರು ವೀಕ್ಷಿಸಿದ್ದಾರೆ.

ಆದರೆ ಏಪ್ರಿಲ್ 13 ರಂದು ಮೊಂಡೆಲೆಜ್ ಇಂಡಿಯಾವು ಕಾನೂನು ಕ್ರಮ ಕೈಗೊಳ್ಳುವುದಾಗಿ ಸೂಚನೆಯನ್ನು ನೀಡಿದ ನಂತರ ಹಿಮತ್ಸಿಂಕಾ ಅವರು ವಿಡಿಯೋವನ್ನು ಡಿಲೀಟ್ ಮಾಡಿದ್ದಾರೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ. ರೇವಂತ್ ಹಿಮತ್ಸಿಂಕಾ ಅವರ ಟ್ವಿಟರ್ ಹ್ಯಾಂಡಲ್ ಅನ್ನೂ ಅಮಾನತುಗೊಳಿಸಲಾಗಿದೆ.

ವಿಡಿಯೊದಲ್ಲಿ ಮಾಡಿರುವ ಆರೋಪಗಳನ್ನು ಬೌರ್ನ್‌ವಿಟಾ ಸಂಸ್ಥೆ ನಿರಾಕರಿಸಿದ್ದು, ಬಳಕೆಗೆ ಅನುಮೋದಿಸಲಾದ ಪದಾರ್ಥಗಳನ್ನು ಉಪಯೋಗಿಸಿ, ವೈಜ್ಞಾನಿಕವಾಗಿ ವಿನ್ಯಾಸಗೊಳಿಸಿದ ಸೂತ್ರವನ್ನು ಆಧರಿಸಿ ಉತ್ಪನ್ನವನ್ನು ತಯಾರಿಸಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...