ಪಶ್ಚಿಮ ಬಂಗಾಳ | ಪೊಲೀಸ್‌ ಭದ್ರತೆಯಲ್ಲಿ ಪಂಚಾಯತ್‌ ಚುನಾವಣೆಯ ಮರು ಮತದಾನ

Date:

  • ಪಶ್ಚಿಮ ಬಂಗಾಳ 19 ಜಿಲ್ಲೆಗಳ 696 ಮತಗಟ್ಟೆಗಳಲ್ಲಿ ಮರು ಮತದಾನ
  • ಡಾರ್ಜಿಲಿಂಗ್, ಜಾರ್ಗ್ರಾಮ್, ಕಾಲಿಂಪಾಂಗ್‌ನಲ್ಲಿ ಮರು ಮತದಾನ ಇಲ್ಲ

ಪಶ್ಚಿಮ ಬಂಗಾಳದಲ್ಲಿ ಮತಯಂತ್ರಗಳನ್ನು ವಿರೂಪಗೊಳಿಸಿ ಹಿಂಸಾಚಾರ ವರದಿಯಾದ ನಂತರ ಸೋಮವಾರ (ಜುಲೈ 10) ಪಂಚಾಯತ್‌ ಚುನಾವಣೆಯ ಮರು ಮತದಾನಕ್ಕೆ ರಾಜ್ಯ ಚುನಾವಣಾ ಆಯೋಗ ಮುಂದಾಗಿದೆ. ಈ ಹಿನ್ನೆಲೆ 19 ಜಿಲ್ಲೆಗಳ 696 ಮತಗಟ್ಟೆಗಳಲ್ಲಿ ಮರು ಮತದಾನ ಆರಂಭಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಚುನಾವಣೆ ವೇಳೆ ಮತಯಂತ್ರಗಳಿಗೆ ಬೆಂಕಿ ಹಾಕಿ, ಧ್ವಂಸಗೊಳಿಸಲಾಗಿತ್ತು. ಇದರಿಂದ ಮತದಾನ ಅಪೂರ್ಣವಾಗಿತ್ತು.

“ಇಂದು ಬೆಳಿಗ್ಗೆ 7 ಗಂಟೆಯಿಂದ ಮರು ಮತದಾನ ಆರಂಭಗೊಂಡಿದ್ದು, ಎಲ್ಲ ಮತಗಟ್ಟೆಗಳಲ್ಲಿ ಪಶ್ಚಿಮ ಬಂಗಾಳ ಪೊಲೀಸರ ಬಿಗಿ ಭದ್ರತೆ ಒದಗಿಸಲಾಗಿದ್ದು ಯಾವುದೇ ಅಹಿತಕರ ಘಟನೆಗಳು ವರದಿಯಾಗಿಲ್ಲ. ಸಂಜೆ ಐದು ಗಂಟೆಯವರೆಗೆ ಮರು ಮತದಾನ ನಡೆಯಲಿದೆ” ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮರು ಮತದಾನ ನಡೆಯುತ್ತಿರುವ 696 ಮತಗಟ್ಟೆಗಳಲ್ಲಿ ಮತಯಂತ್ರಗಳನ್ನು ವಿರೂಪಗೊಳಿಸಿದ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಪರಿಶೀಲನೆ ನಡೆಸಿದ ರಾಜ್ಯ ಚುನಾವಣಾ ಆಯೋಗ, ಸೋಮವಾರ ಮರು ಮತದಾನ ಮಾಡುವುದಾಗಿ ಪ್ರಕಟಣೆ ಹೊರಡಿಸಿತ್ತು” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

“ಪಶ್ಚಿಮ ಬಂಗಾಳದಲ್ಲಿ ಮರು ಮತದಾನ ನಡೆಯುತ್ತಿರುವ ಜಿಲ್ಲೆಗಳ ಪೈಕಿ ಹಿಂಸಾಚಾರ ಪೀಡಿತ ಮುರ್ಷಿದಾಬಾದ್‌ನಲ್ಲಿ ಅತಿ ಹೆಚ್ಚು ಅಂದರೆ 175 ಮತಗಟ್ಟೆಗಳಿವೆ. ಮಾಲ್ಟಾ ಜಿಲ್ಲೆ 109 ಮತಗಟ್ಟೆಗಳನ್ನು ಹೊಂದಿದೆ.


ಉಳಿದಂತೆ ನಾಡಿಯಾದಲ್ಲಿ 89 ಮತಗಟ್ಟೆಗಳು, ಕೂಚ್ ಬೆಹಾರ್ 53, ಉತ್ತರ 24 ಪರಗಣಗಳು 46, ಉತ್ತರ ದಿನಜ್ಪುರ 42, ದಕ್ಷಿಣ 24 ಪರಗಣಗಳು 36, ಪುರ್ಬಾ ಮೇದಿನಿಪುರ 31 ಮತ್ತು ಹೂಗ್ಲಿ 29 ಮತಗಟ್ಟೆಗಳನ್ನು ಹೊಂದಿವೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಶನಿವಾರ ರಾಜ್ಯದ 61 ಸಾವಿರ ಮತಗಟ್ಟೆಗಳಲ್ಲಿ ಪಂಚಾಯತ್‌ ಚುನಾವಣೆಯ ಮತದಾನ ನಡೆದಿತ್ತು. ಈ ವೇಳೆ ಹಲವು ಮತಗಟ್ಟೆಗಳಲ್ಲಿ ಹಿಂಸಾಚಾರ ನಡೆದಿದ್ದವು. ಇಲ್ಲಿಯವರೆಗೆ 15 ಜನರು ಮೃತಪಟ್ಟಿದ್ದಾರೆ. ಮತಯಂತ್ರಗಳನ್ನು ವಿರೂಪಗೊಳಿಸಿ, ಬೆಂಕಿ ಹಚ್ಚಿ ಕೆರೆಗಳಿಗೆ ಎಸೆದ ಪ್ರಕರಣಗಳು ವರದಿಯಾಗಿದ್ದವು.

ಈ ಸುದ್ದಿ ಓದಿದ್ದೀರಾ? ಭ್ರಷ್ಟಾಚಾರ ಎಸಗಿರುವ ಎನ್‌ಸಿಪಿ ನಾಯಕರನ್ನು ಪ್ರಧಾನಿ ಮೋದಿ ಶಿಕ್ಷಿಸಬೇಕು: ಶರದ್ ಪವಾರ್

ಪಶ್ಚಿಮ ಬಂಗಾಳದ ಡಾರ್ಜಿಲಿಂಗ್, ಜಾರ್ಗ್ರಾಮ್ ಮತ್ತು ಕಾಲಿಂಪಾಂಗ್ ಜಿಲ್ಲೆಗಳಲ್ಲಿ ಮರು ಮತದಾನಕ್ಕೆ ಆದೇಶ ನೀಡಲಾಗಿಲ್ಲ. ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ.

73,887 ಕ್ಷೇತ್ರಗಳಿಗೆ ಪಂಚಾಯತ್‌ ಚುನಾವಣೆ ನಡೆದಿದ್ದು 2.06 ಲಕ್ಷ ಅಭ್ಯರ್ಥಿಗಳು ಕಣದಲ್ಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...