ಗಣರಾಜ್ಯೋತ್ಸವ | ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕದ ಹರಿದ ಹಾಳೆಗಳಲ್ಲಿ ಊಟ

Date:

ಗಣರಾಜ್ಯೋತ್ಸವವು ಮಕ್ಕಳಿಗೆ ಘನತೆ, ಸಮಾನತೆ ಹಾಗೂ ಸಂವಿಧಾನದ ಬಗ್ಗೆ ಹಿರಿಮೆಯನ್ನು ಕಲಿಸುತ್ತದೆ. ಆದರೆ, ಮಧ್ಯಪ್ರದೇಶದ ಮೈಹಾರ್ ಜಿಲ್ಲೆಯಲ್ಲಿ, ಗಣರಾಜ್ಯೋತ್ಸವದ ಪಾಠವನ್ನು ಹರಿದ ನೋಟ್‌ಬುಕ್ ಪುಟಗಳಲ್ಲಿ ನೀಡಲಾಗಿದೆ. ಭಟ್ಗವಾನ್ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಗಣರಾಜ್ಯೋತ್ಸವದ ವಿಶೇಷ ಊಟವನ್ನು ತಟ್ಟೆಗಳ ಬದಲಾಗಿ, ಹಳೆಯ ನೋಟ್‌ಬುಕ್‌ಗಳು ಮತ್ತು ಪುಸ್ತಕಗಳಿಂದ ಹರಿದ ಕಾಗದದ ಹಾಳೆಗಳಲ್ಲಿ ಬಡಿಸಲಾಗಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿದೆ.

ಜನವರಿ 26ರಂದು ಮಧ್ಯಪ್ರದೇಶ ಸರ್ಕಾರದ ಸೂಚನೆಯಂತೆ ಶಾಲೆಯಲ್ಲಿ, ಪೂರಿ ಮತ್ತು ಹಲ್ವಾ ಅಡುಗೆ ಮಾಡಲಾಗಿತ್ತು. ಮಕ್ಕಳನ್ನು ನೆಲದ ಮೇಲೆ ಕೂರಿಸಿ, ತಟ್ಟೆ ಅಥವಾ ಎಲೆಗಳ ಬದಲಿಗೆ ಹಳೆಯ ಪುಸ್ತಕಗಳ ಹಾಳೆಗಳನ್ನು ವಿದ್ಯಾರ್ಥಿಗಳಿಗೆ ನೀಡಲಾಗಿದೆ. ಅದರ ಮೇಲೆ ಆಹಾರವನ್ನು ಬಡಿಸಲಾಗಿದೆ. ಊಟ ಬಡಿಸಿದ ಆ ಹಾಳೆಗಳಲ್ಲಿ ಶಾಯಿ (ಇಂಕ್), ಧೂಳು ಹಾಗೂ ಕೊಳಕು ತುಂಬಿತ್ತೆಂದು ಆರೋಪಿಸಲಾಗಿದೆ.

ಗಂಭೀರ ಅಂಶವೆಂದರೆ, ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಬಳಸಿ-ಬಿಸಾಡಬಹುದಾದ ತಟ್ಟೆಗಳನ್ನು ಖರೀದಿಸಲು ಈಗಾಗಲೇ ಸರ್ಕಾರವು ಹಣವನ್ನು ಬಿಡುಗಡೆ ಮಾಡಲಾಗಿದೆ. ಆದರೂ, ಗಣರಾಜ್ಯೋತ್ಸವದಂದು, ಆ ಶಾಲೆಯಲ್ಲಿ ಒಂದೇ ಒಂದು ತಟ್ಟೆಯೂ ಕಾಣಿಸಲಿಲ್ಲ ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುದ್ರಿತ ಅಥವಾ ಬರೆಯಲ್ಪಟ್ಟ ಕಾಗದದ ಮೇಲೆ ಆಹಾರವನ್ನು ಬಡಿಸುವುದು ಆರೋಗ್ಯಕ್ಕೆ ಅಪಾಯಕಾರಿ ಎಂದು ತಜ್ಞರು ಎಚ್ಚರಿಸಿದ್ದಾರೆ. ಮುದ್ರಣ ಶಾಯಿಯಲ್ಲಿ ಸೀಸ ಮತ್ತು ಇತರ ಹಾನಿಕಾರಕ ರಾಸಾಯನಿಕಗಳು ಇರುತ್ತವೆ. ಇದು ಬಿಸಿ ಆಹಾರಕ್ಕೆ ಸೇರಿ, ಮಕ್ಕಳಲ್ಲಿ ಗಂಭೀರ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಹೇಳಿದ್ದಾರೆ.

ವಿಡಿಯೋಗಳು ವೈರಲ್ ಆದ ಬಳಿಕ, ಪೋಷಕರು ಮತ್ತು ಗ್ರಾಮಸ್ಥರು ಶಾಲಾ ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಹಿರಿಯ ಅಧಿಕಾರಿ ವಿಷ್ಣು ತ್ರಿಪಾಠಿ, “ವಿಡಿಯೋವನ್ನು ಗಮನಿಸಿದ್ದೇವೆ. ಶಾಲೆಗೆ ಭೇಟಿ ನೀಡಿ ತನಿಖೆ ನಡೆಸುವಂತೆ ಬ್ಲಾಕ್ ಸಂಪನ್ಮೂಲ ಸಂಯೋಜಕರಿಗೆ (ಬಿಆರ್‌ಸಿ) ನಿರ್ದೇಶಿಸಿದ್ದೇನೆ. ತನಿಖಾ ವರದಿಯ ಆಧಾರದ ಮೇಲೆ ಜವಾಬ್ದಾರಿಯುತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

ಮಧ್ಯಪ್ರದೇಶದ ಆಡಳಿತಾರೂಢ ಬಿಜೆಪಿ ತನ್ನ 2023ರ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ಮಧ್ಯಾಹ್ನದ ಊಟದ ಗುಣಮಟ್ಟವನ್ನು ಸುಧಾರಿಸುವ ಭರವಸೆ ನೀಡಿತ್ತು. ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಶಾಲಾ ಶಿಕ್ಷಣದಂತಹ ಇಲಾಖೆಗಳೊಂದಿಗೆ ಮಧ್ಯಾಹ್ನದ ಊಟದ ಜೊತೆಗೆ ಸಮತೋಲಿತ ಪೋಷಣೆ ಮತ್ತು ಟೆಟ್ರಾ-ಪ್ಯಾಕ್ಡ್ ಹಾಲನ್ನು ಒದಗಿಸುವ ಪ್ರಸ್ತಾಪಗಳನ್ನೂ ಚರ್ಚಿಸಲಾಗಿತ್ತು. ಆದರೆ, ಮೈಹಾರ್‌ ಜಿಲ್ಲೆಯ ಈ ವಿಡಿಯೋಗಳು ಬಿಜೆಪಿ ಭರವಸೆಗಳಿಗೆ ತೀವ್ರವಾಗಿ ವ್ಯತಿರಿಕ್ತವಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...