ಪಾಕಿಸ್ತಾನದ ಪರ ಗೂಢಚಾರಿಕೆಯ ದೇಶದ್ರೋಹ: ಅಸ್ಸಾಂನ ಕುಲೇಂದ್ರ ಶರ್ಮ ಬಂಧನ

Date:

ಪಾಕಿಸ್ತಾನದ ಪರ ಗೂಢಚಾರಿಕೆ ಮಾಡಿ ದೇಶದ್ರೋಹ ಎಸಗಿದ ಆರೋಪದಲ್ಲಿ ಐಎಎಫ್‌ನ ನಿವೃತ್ತ ಅಧಿಕಾರಿ ಕುಲೇಂದ್ರ ಶರ್ಮ ಎಂಬಾತನನ್ನು ಅಸ್ಸಾಂನ ತೇಜ್‌ಪುರದಲ್ಲಿ ಬಂಧಿಸಲಾಗಿದೆ. ಇನ್ನೂ ನಾಲ್ವರನ್ನು ಕಳೆದ ಕೆಲವು ದಿನಗಳಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ.

ದೇಶದ ವಿರುದ್ಧ ಯುದ್ಧಕ್ಕೆ ಬೆಂಬಲಿಸುವುದು, ಕ್ರಿಮಿನಲ್ ಪಿತೂರಿ, ದೇಶದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವುದು ಮತ್ತು ಸಾಕ್ಷ್ಯಗಳನ್ನು ನಾಶಪಡಿಸಿದ್ದಕ್ಕಾಗಿ ಅಸ್ಸಾಂನ ಕುಲೇಂದ್ರ ಶರ್ಮ ವಿರುದ್ಧ ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನು ಓದಿದ್ದೀರಾ? ಪಾಕಿಸ್ತಾನದ ಪರ ಬೇಹುಗಾರಿಕೆ; ಗುಜರಾತ್‌ನ ಸಹದೇವ್ ಗೋಹಿಲ್ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಹಿತಿ ನೀಡಿದ ಸೋನಿತ್‌ಪುರ ಜಿಲ್ಲಾ ಡಿಎಸ್‌ಪಿ (ಗಡಿ) ಹರಿಚರಣ್ ಭೂಮಿಜ್, “ಶರ್ಮ ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಶರ್ಮ ಪಾಕಿಸ್ತಾನಿ ಗುಪ್ತಚರ ಸಂಸ್ಥೆಯೊಂದಿಗೆ ಸೂಕ್ಷ್ಮ ರಕ್ಷಣಾ ಸಂಬಂಧಿತ ದಾಖಲೆಗಳು ಮತ್ತು ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಎಂಬುದು ಫೋನ್ ಮತ್ತು ಲ್ಯಾಪ್‌ಟಾಪ್‌ಗಳನ್ನು ಪರಿಶೀಲಿಸಿದಾಗ ತಿಳಿದುಬಂದಿದೆ. ಸದ್ಯ ಶರ್ಮ ಮಾಹಿತಿ ಹಂಚಿಕೊಂಡವರು ಯಾರು ಎಂಬ ಬಗ್ಗೆ ಗುರುತನ್ನು ಪರಿಶೀಲಿಸಲಾಗುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ.

ಕಳೆದ ಕೆಲವು ವಾರಗಳಲ್ಲಿ ಅರುಣಾಚಲ ಪ್ರದೇಶದಲ್ಲಿ ಗೂಢಚಾರಿಕೆಯ ಆರೋಪದಲ್ಲಿ ನಾಲ್ವರನ್ನು ಬಂಧಿಸಲಾಗಿದೆ. ಆ ಪೈಕಿ ಮೂವರು ಕಾಶ್ಮೀರದ ಕುಪ್ವಾರಾ ಜಿಲ್ಲೆಯವರಾಗಿದ್ದರೆ, ನಾಲ್ಕನೆ ಆರೋಪಿಯ ಗುರುತನ್ನು ಪೊಲೀಸರು ಇನ್ನೂ ಬಹಿರಂಗಪಡಿಸಿಲ್ಲ.

ಶರ್ಮಗೆ ವಾಟ್ಸಾಪ್‌ನಿಂದ ಯಾರೋ ಸೂಚನೆಗಳನ್ನು ಕಳುಹಿಸಿದ್ದು, ಆ ಸೂಚನೆಯಂತೆ ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ನಿರ್ಣಾಯಕ ಮಾಹಿತಿಯನ್ನು ಶರ್ಮ ತನ್ನ ಎಲೆಕ್ಟ್ರಾನಿಕ್ ಸಾಧನಗಳ ಮೂಲಕ ಹಂಚಿಕೊಂಡಿರುವುದು ಬಹಿರಂಗವಾಗಿದೆ. ವಶಪಡಿಸಿಕೊಂಡ ಮೊಬೈಲ್‌ಗಳು ಮತ್ತು ಲ್ಯಾಪ್‌ಟಾಪ್‌ಗಳನ್ನು ಹೆಚ್ಚಿನ ವಿಶ್ಲೇಷಣೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದೂ ಡಿಎಸ್‌ಪಿ ಭೂಮಿಜ್ ಹೇಳಿದರು.

2002ರಲ್ಲಿ ಐಎಎಫ್‌ನಿಂದ ನಿವೃತ್ತರಾದ ಶರ್ಮ, ತೇಜ್‌ಪುರ ವಿಶ್ವವಿದ್ಯಾಲಯದಲ್ಲಿ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ ವಿಭಾಗದಲ್ಲಿ ತಾಂತ್ರಿಕ ಸಹಾಯಕರಾಗಿ ಕೆಲಸ ಮಾಡಿದ್ದು, ಮೂರು ವರ್ಷಗಳ ಹಿಂದೆ ಕೆಲಸ ತೊರೆದಿದ್ದಾರೆ. ತೇಜ್‌ಪುರವು ಸೈನ್ಯದ IV ಕಾರ್ಪ್ಸ್‌ನ ಪ್ರಧಾನ ಕಚೇರಿಯಾಗಿದ್ದು, ತವಾಂಗ್ ಗಡಿ ಸೇರಿದಂತೆ ಅಸ್ಸಾಂ ಮತ್ತು ಅರುಣಾಚಲ ಪ್ರದೇಶದ ವಿಶಾಲ ಭಾಗಗಳಲ್ಲಿ ಕಾರ್ಯಾಚರಣೆಯ ವ್ಯಾಪ್ತಿಯಿದೆ. ತೇಜ್‌ಪುರದ ಹೊರವಲಯದಲ್ಲಿರುವ ಸಲೋನಿಬಾರಿಯಲ್ಲಿ, IAFನ ಸುಖೋಯ್ ನೆಲೆ ಇದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...