ಶಾಲಾ ಮಕ್ಕಳ ಪೌಷ್ಟಿಕಾಂಶ ಗುಣಮಟ್ಟ ಪರಿಷ್ಕರಣೆ; ಮೊಟ್ಟೆ ಕಡ್ಡಾಯವಿಲ್ಲ

Date:

  • ಆಂತರಿಕ ಸಚಿವಾಲಯ ಸಮಿತಿಯ ಶಿಫಾರಸುಗಳ ಮೇರೆಗೆ ಪೌಷ್ಟಿಕಾಂಶ ಗುಣಮಟ್ಟ ಪರಿಷ್ಕರಣೆ
  • ಆಹಾರದಲ್ಲಿ ಕ್ಯಾಲರಿಗಳು ಮತ್ತು ಪ್ರೋಟೀನ್‌ಗಳ ಪ್ರಮಾಣವನ್ನು ಹೆಚ್ಚಿಸುವ ಬಗ್ಗೆ ಶಿಫಾರಸು

ಶಾಲೆಗಳು ಮತ್ತು ಅಂಗನವಾಡಿಗಳಲ್ಲಿ ನೀಡುವ ಆಹಾರ ಪೌಷ್ಟಿಕಾಂಶ ಗುಣಮಟ್ಟವನ್ನು ಕೇಂದ್ರ ಸರ್ಕಾರ ಪರಿಷ್ಕರಿಸಿದೆ ಎಂದು ಮಾಧ್ಯಮಗಳು ಸೋಮವಾರ (ಮೇ 1) ವರದಿ ಮಾಡಿವೆ.

ಸರ್ಕಾರದ ಆಹಾರ ಸುರಕ್ಷತಾ ಕಾರ್ಯಕ್ರಮದ ಭಾಗವಾಗಿ ಮೊಟ್ಟೆಗಳನ್ನು ನೀಡುವುದನ್ನು ಕಡ್ಡಾಯಗೊಳಿಸುವ ಬಗ್ಗೆಯೂ ಕರಡು ವರದಿಯಲ್ಲಿ ಶಿಫಾರಸು ಮಾಡಲಾಗಿತ್ತು. ಆದರೆ, ಸದ್ಯ ಈ ಪ್ರಸ್ತಾವನೆಯನ್ನು ಕೇಂದ್ರ ಕೈಬಿಟ್ಟಿದೆ.

ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರು ಸೇರಿ ಶಾಲಾ ಪೂರ್ವ ಮಕ್ಕಳು ಮತ್ತು ಅಂಗನವಾಡಿಗಳಲ್ಲಿ ಸಂಯೋಜಿತ ಮಕ್ಕಳ ಅಭಿವೃದ್ಧಿ ಸೇವೆಗಳು (ಐಸಿಡಿಎಸ್‌) ಯೋಜನೆ ಹಾಗೂ ಶಾಲೆಗಳಲ್ಲಿ ಪಿಎಂ ಪೋಷಣೆ ಹಸರಿನಲ್ಲಿ ಆಹಾರ ಸುರಕ್ಷತಾ ಕಾರ್ಯಕ್ರಮಗಳಡಿ ವಿತರಿಸುವ ಮಧ್ಯಾಹ್ನದ ಬಿಸಿಯೂಟಗಳ ಪಟ್ಟಿಯಲ್ಲಿ ಮೊಟ್ಟೆಗಳು ಹಾಗೂ ಇತರ ಪದಾರ್ಥಗಳನ್ನು ಸೇರಿಸಲು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಯಾವುದೇ ನಿರ್ಬಂಧಗಳಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯಗಳು ಆಹಾರದಲ್ಲಿ ಮೊಟ್ಟೆಗಳನ್ನು ವಿತರಿಸಲು ಹಿಂಜರಿದರೆ ನೂತನ ಪೌಷ್ಟಿಕಾಂಶ ಗುಣಮಟ್ಟ ತಲುಪಲು ಆಹಾರ ಪಟ್ಟಿಯನ್ನು ಪರಿಷ್ಕರಿಸಿ ಅದರಲ್ಲಿ ಬೇಳೆಕಾಳುಗಳು ಮತ್ತು ಹಸಿರು ತರಕಾರಿಗಳನ್ನು ಸೇರಿಸಬಹುದು. ಈಗ 14 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮೊಟ್ಟೆಗಳು ಮಧ್ಯಾಹ್ನ ಬಿಸಿಯೂಟದ ಭಾಗವಾಗಿವೆ” ಎಂದು ಸರ್ಕಾರದ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಯುಪಿಎ ಸರ್ಕಾರದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಜಾರಿಗೊಂಡ ಒಂದು ದಶಕದ ನಂತರ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಆಹಾರದಲ್ಲಿ ಪೌಷ್ಟಿಕಾಂಶ ಕ್ಯಾಲರಿಗಳು ಮತ್ತು ಪ್ರೋಟೀನ್‌ಗಳ ಪ್ರಮಾಣ ಹೆಚ್ಚಿಸುವುದು ಮತ್ತು ಸೂಕ್ಷ್ಮ ಪೋಷಕಾಂಶಗಳ ಸೇರಿಸುವಿಕೆ ಕಡ್ಡಾಯಗೊಳಿಸುವುದನ್ನು ಈ ಪರಿಷ್ಕರಣೆ ಒಳಗೊಂಡಿದೆ.

ಆಂತರಿಕ ಸಚಿವಾಲಯ ಸಮಿತಿಯ ಶಿಫಾರಸುಗಳ ಮೇರೆಗೆ ಕೇಂದ್ರ ಈ ಎನ್‌ಎಫ್‌ಎಸ್‌ಎಗೆ ಪರಿಷ್ಕರಣೆಯ ತಿದ್ದುಪಡಿ ಮಾಡಿದೆ.

ಅಪೌಷ್ಟಿಕತೆಯ ಬಿಕ್ಕಟ್ಟನ್ನು ಮತ್ತಷ್ಟು ಹದಗೆಡಿಸುವುದರಲ್ಲಿ ಕೋವಿಡ್‌ ಪಿಡುಗಿನ ಸಂಭವನೀಯ ಪರಿಣಾಮ ಉಲ್ಲೇಖಿಸಿ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಂತರಿಕ ಸಚಿವಾಲಯದ ತಂಡ ಕರಡು ವರದಿಯಲ್ಲಿ ಶಿಫಾರಸು ಮಾಡಿತ್ತು.

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಗೆ ಜನವರಿ 25ರಂದು ತಿದ್ದುಪಡಿ ಮಾಡಲಾಗಿದೆ. ಆಹಾರಗಳ ಪೌಷ್ಟಿಕಾಂಶ ಗುಣಮಟ್ಟವನ್ನು ಒಂಬತ್ತು ಗುಂಪುಗಳಾಗಿ ವಿಭಾಗಿಸಲಾಗಿದೆ. ಆರು ತಿಂಗಳ ಶಿಶುವಿನಿಂದ ಒಂದು ವರ್ಷದ ಮಗು ಹಾಗೂ ಪ್ರೌಢಶಾಲೆಯ ಮಕ್ಕಳವರೆಗೆ ವರ್ಗೀಕರಿಸಲಾಗಿದೆ.

ಆರು ತಿಂಗಳಿಂದ ಆರು ವರ್ಷದ ಅಪೌಷ್ಟಿಕ ಮಕ್ಕಳಿಗಾಗಿ ಹೊಸ ಮೂರು ವಿಭಾಗಗಳನ್ನು ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಗೆಹ್ಲೋಟ್‌ ರಾವಣ ಹೋಲಿಕೆ; ಕೇಂದ್ರ ಸಚಿವ ಗಜೇಂದ್ರ ಸಿಂಗ್‌ ವಿರುದ್ಧ ಪ್ರಕರಣ

ಅಸ್ತಿತ್ವದಲ್ಲಿರುವ ಕಿರಿಯ ಪ್ರಾಥಮಿಕ ಶಾಲೆಗಳು ಹಾಗೂ ಹಿರಿಯ ಪ್ರಾಥಮಿಕ ಶಾಲೆಗಳ ವಿಭಾಗಗಳಿಗೆ ಪೌಷ್ಟಿಕಾಂಶ ಗುಣಮಟ್ಟವನ್ನು ಪರಿಷ್ಕರಿಸಲಾಗಿದೆ.

ಅದರಂತೆ ಹಿಂದಿನ ಮಾನದಂಡಗಳ ಅಡಿಯಲ್ಲಿ ಪೂರ್ವ ಪ್ರಾಥಮಿಕ ತರಗತಿಗಳಲ್ಲಿನ ಪ್ರತಿ ಮಗುವೂ ಮಧ್ಯಾಹ್ನ ಬಿಸಿಯೂಟದೊಡನೆ 450 ಕಿಲೋ ಕ್ಯಾಲರಿ ಮತ್ತು 12 ಗ್ರಾಂ ಪ್ರೊಟೀನ್‌ ಪಡೆಯಲು ಅರ್ಹವಾಗಿರುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...