ಬದುಕುವ ಹಕ್ಕು ಎಲ್ಲರಿಗೂ ಇದೆ: ಅಸ್ಸಾಂ ಸರ್ಕಾರಕ್ಕೆ ಸುಪ್ರೀಂ ತಪರಾಕಿ

Date:

ವಿದೇಶಿ ಪ್ರಜೆಗಳನ್ನು ಏಕೆ ಬಂಧನ ಕೇಂದ್ರಗಳಲ್ಲಿ ಇರಿಸಲಾಗಿದೆ ಹಾಗೂ ಏಕೆ ಅವರನ್ನು ಆಯಾ ದೇಶಗಳಿಗೆ ಗಡೀಪಾರು ಮಾಡಿಲ್ಲ ಎಂಬ ಬಗ್ಗೆ ವಿವರಣೆ ನೀಡುವಂತೆ ಸುಪ್ರೀಂ ಕೋರ್ಟ್, ಅಸ್ಸಾಂ ಸರ್ಕಾರಕ್ಕೆ ಆದೇಶ ನೀಡಿದೆ. ಪ್ರಕರಣದ ಮುಂದಿನ ವಿಚಾರಣೆಯ ವೇಳೆ ರಾಜ್ಯದ ಮುಖ್ಯ ಕಾರ್ಯದರ್ಶಿ ಈ ಸಂಬಂಧ ವಿವರಣೆ ನೀಡಲು ವರ್ಚುವಲ್ ವಿಧಾನದ ಮೂಲಕ ಹಾಜರಾಗುವಂತೆ ಸೂಚಿಸಿದೆ.

ಮೂಲಭೂತ ಹಕ್ಕುಗಳು ಕೇವಲ ಭಾರತೀಯ ಪ್ರಜೆಗಳಿಗೆ ಮಾತ್ರ ಸೀಮಿತವಲ್ಲ; ವಿದೇಶಿಯರು ಸೇರಿದಂತೆ ಎಲ್ಲ ಜನತೆಗೆ ಇರುವಂಥದ್ದು. ಆದ್ದರಿಂದ ಬಂಧನ ಕೇಂದ್ರಗಳಲ್ಲಿರುವವರನ್ನು ಆಯಾ ದೇಶಗಳಿಗೆ ಗಡೀಪಾರು ಮಾಡಲು ತಕ್ಷಣದ ಕ್ರಮ ಕೈಗೊಳ್ಳಬೇಕು ಎಂದು ನ್ಯಾಯಮೂರ್ತಿ ಅಭಯ್ ಎಸ್.ಓಕಾ ಮತ್ತು ಎನ್.ಕೋಟೀಶ್ವರ ಸಿಂಗ್ ಅವರನ್ನೊಳಗೊಂಡ ನ್ಯಾಯಪೀಠ ಆದೇಶಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಲ್ಕತ್ತಾದ ಭೀಭತ್ಸ ರೇಪ್-ಹತ್ಯೆ ತನಿಖೆಯಲ್ಲಿ ವಿಫಲವಾಯಿತೇ ಸಿಬಿಐ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಸ್ಸಾಂನ ಬಂಧನ ಕೇಂದ್ರಗಳು/ ತಾತ್ಕಾಲಿಕ ಶಿಬಿರಗಳಲಿ 270 ಮಂದಿಯನ್ನು ಇರಿಸಿರುವ ಬಗೆಗಿನ ಪ್ರಕರಣದ ಬಗ್ಗೆ ನ್ಯಾಯಪೀಠ ವಿಚಾರಣೆ ನಡೆಸುತ್ತಿದೆ.”ಅನುಸರಣಾ ಅಫಿಡವಿಟ್ ಸಲ್ಲಿಸಲು ಸರ್ಕಾರಕ್ಕೆ ಆರು ವಾರಗಳ ಕಾಲಾವಕಾಶ ನೀಡಲಾಗಿತ್ತು. ತಾತ್ಕಾಲಿಕ ಶಿಬಿರಗಳಲ್ಲಿ 270 ಮಂದಿ ವಿದೇಶಿ ಪ್ರಜೆಗಳನ್ನು ಇರಿಸಿದ ಬಗ್ಗೆ ಸಕಾರಣಗಳನ್ನು ದಾಖಲೆ ರೂಪದಲ್ಲಿ ನೀಡುವುದನ್ನು ನಾವು ನಿರೀಕ್ಷಿಸಿದ್ದೇವೆ. ಜತೆಗೆ ಅವರನ್ನು ಆಯಾ ದೇಶಗಳಿಗೆ ಗಡೀಪಾರು ಮಾಡಲು ಕೈಗೊಳ್ಳಲಾದ ಕ್ರಮಗಳ ಬಗ್ಗೆಯೂ ವಿವರಣೆ ನೀಡಬೇಕು ಎಂದು ಸೂಚಿಸಿತ್ತು.

“ವಿದೇಶಿಯರು 10 ವರ್ಷಕ್ಕಿಂತಲೂ ಅಧಿಕ ಕಾಲದಿಂದ ಈ ಶಿಬಿರಗಳಲ್ಲಿ ಇದ್ದಾರೆ. ಅವರನ್ನು ಬಂಧನದಲ್ಲಿ ಇರಿಸಿದ ಬಗ್ಗೆ ಅಫಿಡವಿಟ್ ನಲ್ಲಿ ಯಾವ ಸಮರ್ಥನೆಯೂ ಇಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಅವರ ಗಡೀಪಾರಿಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಇದು ನ್ಯಾಯಾಲಯ ಆದೇಶದ ಸ್ಪಷ್ಟ ಉಲ್ಲಂಘನೆ. ಅನುಸರಣೆ ಮಾಡದ ಬಗ್ಗೆ ವಿವರಣೆ ನೀಡಲು ಮುಂದಿನ ವಿಚಾರಣೆ ದಿನಾಂಕದಂದು ಅಸ್ಸಾಂ ಮುಖ್ಯ ಕಾರ್ಯದರ್ಶಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗುವಂತೆ ನಿರ್ದೇಶಿಸುತ್ತಿದ್ದೇವೆ” ಎಂದು ನ್ಯಾಯಾಲಯ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...