ಮತದಾನದ ಹಕ್ಕಿಗೂ ಮೊದಲು ಬದುಕುವ ಹಕ್ಕು ಮುಖ್ಯ: ಮಣಿಪುರದ ಜನರ ಧ್ವನಿ

Date:

ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರದಿಂದ 11 ತಿಂಗಳ ಹಿಂದೆ ತಮ್ಮ ಮನೆಗಳನ್ನು ಕಳೆದುಕೊಂಡು ಈಗ ಪರಿಹಾರ ಶಿಬಿರದಲ್ಲಿ ವಾಸಿಸುತ್ತಿರುವ ಜನರು, “ನಮಗೆ ಮತದಾನದ ಹಕ್ಕಿಗೂ ಮೊದಲು ಬದುಕುವ ಹಕ್ಕು ಮುಖ್ಯ, ಚುನಾವಣೆಯ ಮೊದಲು ಶಾಂತಿ ಮುಖ್ಯ” ಎಂದು ಹೇಳಿದ್ದಾರೆ.

“ಇನ್ನು ಮುಂದೆ ನನ್ನದಲ್ಲದ ಸ್ಥಳದ ಪ್ರತಿನಿಧಿಯನ್ನು ಆಯ್ಕೆ ಮಾಡಲು ನಾನೇಕೆ ಮತ ಹಾಕಬೇಕು. ಚುನಾವಣೆ ನಮಗೆ ಏನೂ ಅರ್ಥವನ್ನು ನೀಡಲ್ಲ” ಎಂದು ಪರಿಹಾರ ಶಿಬಿರದಲ್ಲಿ ವಾಸಿಸುತ್ತಿರುವ ನೋಬಿ ಎಂಬವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

2019 ರ ಚುನಾವಣೆಯಲ್ಲಿ ಶೇಕಡಾ 82 ಕ್ಕಿಂತ ಹೆಚ್ಚು ಮತದಾನ ಮಣಿಪುರ ರಾಜ್ಯದಲ್ಲಿ ಆಗಿದೆ. ಆದರೆ ಜನಾಂಗೀಯ ಹಿಂಸಾಚಾರವು ಈ ಬಾರಿಯ ಮತದಾನದ ಮೇಲೆ ಪ್ರಭಾವ ಬೀರುವ ಸಾದ್ಯತೆಯಿದೆ. ಇಂತಹ ಪರಿಸ್ಥಿತಿಯಲ್ಲಿ ಚುನಾವಣೆ ನಡೆಸಿದರೆ ಏನು ಅರ್ಥವಿದೆ ಎಂದು ಹಲವಾರು ಮಂದಿ ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?   ಮಣಿಪುರ ಹಿಂಸಾಚಾರ| ಸ್ಥಳಾಂತರಗೊಂಡ 24,000 ಕ್ಕೂ ಹೆಚ್ಚು ನಾಗರಿಕರಿಗೆ ಪರಿಹಾರ ಶಿಬಿರದಲ್ಲೇ ಮತದಾನಕ್ಕೆ ಅವಕಾಶ

“ಗೌರವದಿಂದ ಬದುಕುವ ನನ್ನ ಹಕ್ಕನ್ನು ಕಾಪಾಡಲು ಸರ್ಕಾರಕ್ಕೆ ಸಾಧ್ಯವಾಗಲಿಲ್ಲ. ಈಗ ನನ್ನ ಮತದಾನದ ಹಕ್ಕನ್ನು ಕಾಪಾಡಿಕೊಳ್ಳಲು ಅವರು ಹೊರಟಿದ್ದಾರೆಯೇ?” ಎಂದು ನೋಬಿ ಪ್ರಶ್ನಿಸಿದ್ದು, “ನನ್ನ ಕಣ್ಣೆದುರೇ ನನ್ನ ಮನೆ ಸುಟ್ಟುಹೋಯಿತು. ನಾನು ಮತ್ತು ನನ್ನ ಕುಟುಂಬ ರಾತ್ರೋರಾತ್ರಿ ಬೀದಿಪಾಲಾದೆವು. ಸುಟ್ಟ ಮನೆಯಲ್ಲಿ ಏನು ಉಳಿದಿದೆ ಎಂಬುವುದು ಕೂಡಾ ನನಗೆ ತಿಳಿದಿಲ್ಲ” ಎಂದು ಹೇಳಿದರು.

“ಇನ್ನು ಮುಂದೆ ನನ್ನದಲ್ಲದ ಸ್ಥಳದ ಪ್ರತಿನಿಧಿಗೆ ನಾನು ಏಕೆ ಮತ ಹಾಕಬೇಕು? ಇದೆಲ್ಲವೂ ಗಿಮಿಕ್. ಚುನಾವಣೆಗಳು ನಮಗೆ ಏನೂ ಅರ್ಥವನ್ನು ನೀಡಿಲ್ಲ” ಎಂದಿದ್ದಾರೆ.

ಇದನ್ನು ಓದಿದ್ದೀರಾ?   ಲೋಕಸಭೆ ಚುನಾವಣೆಗೂ ಮುನ್ನ ಮಣಿಪುರಕ್ಕೆ ಅಮಿತ್ ಶಾ ಭೇಟಿ ಸಾಧ್ಯತೆ

ಕಣಿವೆ ರಾಜ್ಯದಲ್ಲಿ ಕಳೆದ ವರ್ಷ ಮೇ 3 ರಿಂದ ಬಹುಸಂಖ್ಯಾತ ಮೈತಿ ಸಮುದಾಯ ಮತ್ತು ಕುಕಿಗಳ ನಡುವೆ ಹಿಂಸಾಚಾರ ಆರಂಭವಾಗಿದ್ದು, ಸುಮಾರು 200ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಮೈತಿಗಳು ಇಂಫಾಲ್ ನಗರದಲ್ಲಿಯೇ ಇದ್ದರೆ, ಕುಕಿಗಳು ಬೆಟ್ಟಗಳಿಗೆ ಸ್ಥಳಾಂತರಗೊಂಡಿದ್ದಾರೆ. ಅಧಿಕಾರಿಗಳ ಪ್ರಕಾರ, ಪರಿಹಾರ ಶಿಬಿರಗಳಲ್ಲಿ 50,000 ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದಾರೆ.

ಮಣಿಪುರದ ಎರಡು ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ಮತ್ತು 26 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಇನ್ನು ಪರಿಹಾರ ಶಿಬಿರದಲ್ಲಿಯೇ ಚುನಾವಣೆಯನ್ನು ನಡೆಸಲು ಚುನಾವಣಾ ಆಯೋಗ ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...