ಉತ್ತರಾಖಂಡ| ಹೆಚ್ಚುತ್ತಿದೆ ಚಾರ್ ಧಾಮ್ ಯಾತ್ರಾರ್ಥಿಗಳ ಸಾವಿನ ಸಂಖ್ಯೆ; 116 ಮಂದಿ ಮೃತ್ಯು

Date:

ಉತ್ತರಾಖಂಡದಲ್ಲಿ ಚಾರ್ ಧಾಮ್ ಯಾತ್ರಿಕರ ಸಾವಿನ ಸಂಖ್ಯೆಯು ಹೆಚ್ಚಳವಾಗುತ್ತಿದ್ದು, ಬುಧವಾರ ಮತ್ತೆ ಐವರು ಯಾತ್ರಿಕರು ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಮೂವರು ಯಾತ್ರಾರ್ಥಿಗಳು ಕೇದಾರನಾಥದಲ್ಲಿ, ಒಬ್ಬರು ಬದರಿನಾಥದಲ್ಲಿ ಮತ್ತು ಒಬ್ಬರು ಯಾತ್ರಿಕರು ಯಮುನೋತ್ರಿಯಲ್ಲಿ ಸಾವನ್ನಪ್ಪಿದ್ದಾರೆ.

ಒಂದು ತಿಂಗಳ ಸುದೀರ್ಘ ಯಾತ್ರೆಯಲ್ಲಿ ಪ್ರಾಣ ಕಳೆದುಕೊಂಡ ಒಟ್ಟು 116 ಯಾತ್ರಾರ್ಥಿಗಳ ಪೈಕಿ ಶೇ 80ರಷ್ಟು ಮಂದಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

ಒಟ್ಟಿನಲ್ಲಿ ಹಿಮಾಲಯ ಪ್ರದೇಶದಲ್ಲಿರುವ ಚಾರ್ ಧಾಮ್‌ಗೆ ಪ್ರಯಾಣಿಸುವ ಭಕ್ತರ ಸಾವಿನ ಪ್ರಮಾಣ ಅಧಿಕವಾಗುತ್ತಿರುವುದು ಸದ್ಯ ಉತ್ತರಾಖಂಡ ಸರ್ಕಾರದ ಕಳವಳ ಉಂಟು ಮಾಡಿದೆ. ಆರು ತಿಂಗಳ ಚಾರ್‌ಧಾಮ್ ಯಾತ್ರೆಯ ಮೊದ ಒಂದು ತಿಂಗಳಲ್ಲೇ 100ಕ್ಕೂ ಅಧಿಕ ಸಾವು ಸಂಭವಿಸಿರುವುದು ಸರ್ಕಾರವನ್ನು ಸಂದಿಗ್ಧ ಸ್ಥಿತಿಗೆ ತಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿದ ರಾಜ್ಯ ಆರೋಗ್ಯ ಕಾರ್ಯದರ್ಶಿ ಡಾ. ಆರ್. ರಾಜೇಶ್ ಕುಮಾರ್, “ಆರೋಗ್ಯ ತಪಾಸಣೆ ನಡೆಸಿದ ಬಳಿಕ ಪ್ರತಿಕೂಲ ಸ್ಥಿತಿ ಇದ್ದರೂ ಕೂಡಾ ಕೆಲವು ಯಾತ್ರಿಕರು ಧಾಮಗಳಿಗೆ ಪ್ರಯಾಣವನ್ನು ಮಾಡಲು ಅವಕಾಶಕ್ಕಾಗಿ ನಮ್ಮಲ್ಲಿ ಒತ್ತಾಯಿಸುವಾಗ ನಮಗೆ ದೊಡ್ಡ ಸಂದಿಗ್ಧತೆ ಉಂಟಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ?  ಚಾರ್ ಧಾಮ್ ಯಾತ್ರೆ: 16 ದಿನಗಳಲ್ಲಿ 58 ಯಾತ್ರಿಕರು ಸಾವು

“ನಾವು ಯಾತ್ರಿಕರಿಗೆ ಅರ್ಥಮಾಡಿಕೊಳ್ಳಲು ಹೇಳುತ್ತೇವೆ. ಆದರೆ ನಮ್ಮ ಮಾತನ್ನು ಯಾತ್ರಿಕರು ಕೇಳಿದಿದ್ದರೆ, ಸಹಿ ಹಾಕಿ ಪ್ರಯಾಣ ಮಾಡಬೇಕಾಗುತ್ತದೆ. ನಿರ್ದಿಷ್ಟ ಸಂದರ್ಭಗಳಲ್ಲಿ, ವಯಸ್ಸಾದ ಮತ್ತು ವೈದ್ಯಕೀಯವಾಗಿ ಸಮಸ್ಯೆ ಹೊಂದಿರುವ ಯಾತ್ರಾರ್ಥಿಗಳನ್ನು ಹಿಂದಿರುಗುವಂತೆ ನಾವು ಮನವಿ ಮಾಡುತ್ತೇವೆ” ಎಂದು ತಿಳಿಸಿದ್ದಾರೆ.

43 ಡಿಗ್ರಿ ತಾಪಮಾನದಿಂದ ಏಕಾಏಕಿಯಾಗಿ ಒಂದು ಡಿಗ್ರಿ ತಾಪಮಾನಕ್ಕೆ ತಲುಪಿದಾಗ ಹವಾಮಾನ ಬದಲಾವಣೆಯಿಂದಾಗಿ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಈ ಹವಾಮಾನ ಬದಲಾವಣೆಯಿಂದ ಸಾವು ಸಂಭವಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಆದರೆ ಈ ಯಾತ್ರೆ ಬಗ್ಗೆ ಮಾತನಾಡಿದ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ, “ಚಾರ್ ಧಾಮ್ ಯಾತ್ರೆ ವ್ಯವಸ್ಥಿತವಾಗಿ ನಡೆಯುತ್ತಿದೆ. ಯಾತ್ರಾರ್ಥಿಗಳು ತಮ್ಮ ಯಾತ್ರೆಯಿಂದ ಉತ್ತಮ ಅನುಭವದೊಂದಿಗೆ ಮರಳುತ್ತಿದ್ದಾರೆ. ದಮ್ತಾ ಮುಂದಿರುವ ರಸ್ತೆ ಅಗಲೀಕರಣಕ್ಕೆ ಗಡ್ಕರಿ ಅವರಿಗೆ ಮನವಿ ಮಾಡುತ್ತೇನೆ. ಗರಿಷ್ಠ ಸಂಖ್ಯೆಯಲ್ಲಿ ಯಾತ್ರಾರ್ಥಿಗಳು ಬಂದಿದ್ದಾರೆ” ಎಂದು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಕೇದಾರನಾಥ | ಗಿರಗಿರನೆ ತಿರುಗಿ ತುರ್ತು ಭೂಸ್ಪರ್ಶಗೈದ ಹೆಲಿಕಾಪ್ಟರ್‌: ಪಾರಾದ ಯಾತ್ರಿಕರು; ವಿಡಿಯೋ ವೈರಲ್‌ 

ಪ್ರವಾಸೋದ್ಯಮ ಇಲಾಖೆಯ ಯಾತ್ರಾ ವಿಭಾಗದಿಂದ ಬಂದ ಮಾಹಿತಿಯ ಪ್ರಕಾರ, “ಚಾರ್ ಧಾಮ್ ಯಾತ್ರೆಯ ನೋಂದಣಿ ಸಂಖ್ಯೆ 36 ಲಕ್ಷಕ್ಕೆ ತಲುಪಿದೆ. ಅದರಲ್ಲಿ 2,194,349 ಭಕ್ತರು ಯಾತ್ರೆಯನ್ನು ಪೂರ್ಣಗೊಳಿಸಿದ್ದಾರೆ. ಈ ಪೈಕಿ ಅತಿ ಹೆಚ್ಚು ಯಾತ್ರಾರ್ಥಿಗಳು ಅಂದರೆ 822,019 ಜನರು ಕೇದಾರನಾಥಕ್ಕೆ ಭೇಟಿ ನೀಡಿದ್ದಾರೆ.

ಬದರಿನಾಥಕ್ಕೆ 542310, ಗಂಗೋತ್ರಿ ಧಾಮಕ್ಕೆ 384256 ಮತ್ತು ಯಮುನೋತ್ರಿ ಧಾಮಕ್ಕೆ 382122, ಹೇಮಕುಂಡ್ ಸಾಹಿಬ್‌ಗೆ 63,642 ಭಕ್ತರು ಯಾತ್ರೆ ಮಾಡಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...