ಮಾಂಸಾಹಾರದ ಬಗ್ಗೆ ‘ಕೊಳಕು’ ನಿಂದನೆ: ಮುಂಬೈನಲ್ಲಿ ಮರಾಠಿಗಳು – ಗುಜರಾತಿಗಳ ನಡುವೆ ಘರ್ಷಣೆ

Date:

ಮುಂಬೈನ ಘಾಟ್ಕೋಪರ್‌ನಲ್ಲಿರುವ ಅಪಾರ್ಟ್ಮೆಂಟ್ ಒಂದರಲ್ಲಿ ಮಾಂಸಾಹಾರ ಸೇವನೆಯ ಮರಾಠಿ ಸಮುದಾಯದವರು ಮತ್ತು ಸಸ್ಯಾಹಾರ ಸೇವನೆಯ ಗುಜರಾತಿ ಸಮುದಾಯಗಳ ನಡುವೆ ಘರ್ಷಣೆ ನಡೆದಿದೆ.

ಅಪಾರ್ಟ್ ಮೆಂಟ್‌ನಲ್ಲಿ ವಾಸಿಸುತ್ತಿರುವ ಕೆಲ ಗುಜರಾತಿ ನಿವಾಸಿಗಳು ಮಾಂಸಾಹಾರ ಸೇವನೆಯ ಮರಾಠಿಯವರನ್ನು ʼಕೊಳಕರುʼ ಎಂದು ನಿಂದಿಸಿದ ಪರಿಣಾಮ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು, ಘರ್ಷಣೆಯಲ್ಲಿ ತೊಡಗಿದ್ದ ಎರಡೂ ಸಮುದಾಯಗಳ ಜನರ ಜೊತೆ ಮಾತುಕತೆ ನಡೆಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.

ಮರಾಠಿ ಭಾಷಿಕ ಜನರು ಮೀನು ಮತ್ತು ಮಾಂಸಾಹಾರ ಸೇವನೆ ಮಾಡುತ್ತಾರೆಂದು ಅದೇ ಅಪಾರ್ಟ್ಮೆಂಟ್‌ನಲ್ಲೇ ವಾಸಿಸುತ್ತಿರುವ ಕೆಲ ಗುಜರಾತಿಗರು ಕೀಳಾಗಿ ನೋಡುತ್ತಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೆಲ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಕಾರ್ಯಕರ್ತರು ಅಪಾರ್ಟ್ಮೆಂಟ್‌ನಲ್ಲಿ ವಾಸಿಸುತ್ತಿರುವ ಗುಜರಾತಿ ನಿವಾಸಿಗಳೊಂದಿಗೆ ವಾಗ್ವಾದ ನಡೆಸುತ್ತಾ, ಮರಾಠಿಗರ ಆಹಾರ ಆಯ್ಕೆಯನ್ನು ಸಮರ್ಥಿಸುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇಶವನ್ನಾಳುವ ಪ್ರಧಾನಿ ಮೋದಿ ಬಡ ಮುಸ್ಲಿಮರ ಪರವೇ?

ಮರಾಠಿ ಕುಟುಂಬಗಳನ್ನು ಕೊಳಕರು ಎಂದು ನಿಂದಿಸಿದ ಮತ್ತು ಮಾಂಸ ಹಾಗೂ ಮೀನು ಅಡುಗೆ ತಯಾರಿಸದಂತೆ ನಿರ್ಬಂಧಿಸಿದ ಅಪಾರ್ಟ್ಮೆಂಟ್‌ನ ಕೆಲ ನಿವಾಸಿಗಳ ಮೇಲೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ನಾಯಕರೊಬ್ಬರು ಆಕ್ರೋಶವನ್ನು ವ್ಯಕ್ತಪಡಿಸಿರುವುದು ವಿಡಿಯೊದಲ್ಲಿ ಸೆರೆಯಾಗಿದೆ.

ಗುಜರಾತಿ ನಿವಾಸಿಗಳ ಆಕ್ಷೇಪದ ಕಾರಣಕ್ಕೆ ಮರಾಠಿ ಭಾಷಿಕ ನಿವಾಸಿಗಳು ಹೊರಗಿನಿಂದ ಮಾಂಸಾಹಾರ ತರಿಸಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪಗಳು ಕೇಳಿ ಬಂದಿವೆ.

ಅಪಾರ್ಟ್ಮೆಂಟ್ ಸಮುಚ್ಚಯದಲ್ಲಿನ ಕುಟುಂಬಗಳು ಯಾವ ಆಹಾರವನ್ನು ಸೇವಿಸಬೇಕು ಎಂಬ ಬಗ್ಗೆ ಯಾವುದೇ ನಿರ್ಬಂಧಗಳಿಲ್ಲ ಎಂದು ಅಪಾರ್ಟ್ಮೆಂಟ್‌ನ ನಿವಾಸಿಯೊಬ್ಬರು ಸ್ಪಷ್ಟನೆ ನೀಡಲು ಯತ್ನಿಸಿದರೂ, ಇನ್ನಿತರರ ಆಹಾರಾಭ್ಯಾಸದ ಬಗ್ಗೆ ಯಾರೂ ಕೂಡ ತಾಕೀತು ಮಾಡಲು ಸಾಧ್ಯವಿಲ್ಲ. ವಿಶೇಷವಾಗಿ, ಮುಂಬೈನಂತಹ ಮಹಾನಗರದಲ್ಲಿ ನಿರ್ಬಂಧ ಸಾಧ್ಯವಿಲ್ಲ ಎಂದು ನಿವಾಸಿಯೊಬ್ಬರು ಒತ್ತಿ ಹೇಳುತ್ತಿರುವುದು ಆ ವಿಡಿಯೊದಲ್ಲಿ ದಾಖಲಾಗಿದೆ.

ಅಪಾರ್ಟ್ಮೆಂಟ್‌ನಲ್ಲಿ ಪ್ರಕ್ಷುಬ್ಧತೆ ಬಗ್ಗೆ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಧಾವಿಸಿದರು. ಆದರೆ, ಈ ಸಂಬಂಧ ಇದುವರೆಗೆ ಯಾವುದೇ ಅಧಿಕೃತ ದೂರು ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ, ಅಪಾರ್ಟ್ಮೆಂಟ್‌ನ ನಿವಾಸಿಗಳು ಪರಸ್ಪರ ಸೌಹಾರ್ದದಿಂದ ಜೀವಿಸಬೇಕು ಹಾಗೂ ಯಾರಿಗೂ ಕಿರುಕುಳ ನೀಡಬಾರದು ಎಂದು ಪೊಲೀಸರು ಅಲ್ಲಿನ ನಿವಾಸಿಗಳಿಗೆ ಕಿವಿಮಾತು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...