ಇಂದಿನಿಂದ 2,000 ರೂ. ನೋಟು ಬದಲಾವಣೆ; ಆಧಾರ್ ಕಡ್ಡಾಯವಾ?

Date:

ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) 2,000 ರೂ. ಮುಖಬೆಲೆಯ ನೋಟುಗಳನ್ನು ಹಿಂಪಡೆಯುವುದಾಗಿ ಘೋಷಿಸಿದೆ. ಇಂದಿನಿಂದ (ಮಂಗಳವಾರ) ಸಾರ್ವಜನಿಕರು 2,000 ರೂ. ನೋಟುಗಳನ್ನು ಬದಲಾವಣೆ ಮಾಡಿಕೊಳ್ಳಲು ಅವಕಾಶ ನೀಡಿರುವುದಾಗಿ ಹೇಳಿದೆ.

ಎಲ್ಲ ರಾಷ್ಟ್ರೀಕೃತ ಮತ್ತು ಖಾಸಗಿ ಬ್ಯಾಂಕ್‌ಗಳಲ್ಲಿ ಜನರು 2,000 ರೂ. ನೋಟುಗಳನ್ನು ನೀಡಿ, 500, 200, 100 ರೂ. ಮುಖಬೆಲೆಯ ನೋಟುಗಳನ್ನು ಪಡೆದುಕೊಳ್ಳಬಹುದಾಗಿದೆ. ನೋಟು ಬದಲಾವಣೆಗೆ ಜನರು ಯಾವ ರೀತಿಯ ಕ್ರಮಗಳನ್ನು ಅನುಸರಿಸಬೇಕು ಎಂದೂ ಆರ್‌ಬಿಐ ಹೇಳಿದೆ.

ನೋಟು ಬದಲಾವಣೆಗಾಗಿ ಆರ್‌ಬಿಐ ಅರ್ಜಿ ಬಿಡುಗಡೆ ಮಾಡಿದೆ. ಎಲ್ಲ ಬ್ಯಾಂಕ್‌ಗಳಲ್ಲಿಯೂ ಈ ಅರ್ಜಿ ದೊರೆಯಲಿದೆ. ಹಣ ಬದಲಾವಣೆ ಮಾಡಬಯಸುವವರು ಅರ್ಜಿಯನ್ನು ಭರ್ತಿ ಮಾಡಿ, ಅರ್ಜಿ ಮತ್ತು 2,000 ರೂ. ನೋಟುಗಳನ್ನು ಬ್ಯಾಂಕ್‌ಗಳಿಗೆ ಸಲ್ಲಿಸಿ, ನೋಟುಗಳನ್ನು ಬದಲಿಸಿಕೊಳ್ಳಬಹುದು ಎಂದು ಆರ್‌ಬಿಐ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹಣವನ್ನು ಠೇವಣಿ ಇಡುವವರು ಅಥವಾ ತಮ್ಮ ಖಾತೆಗಳಿಗೆ ಜಮೆ ಮಾಡುವವರು ಈ ಅರ್ಜಿಯನ್ನು ಭರ್ತಿ ಮಾಡಬೇಕಿಲ್ಲ. ಅಂತಹವರು ತಾವು ಖಾತೆ ಹೊಂದಿರುವ ಬ್ಯಾಂಕ್‌ಗಳಿಗೆ ಹೋಗಿ, ಚಲನ್ ಭರ್ತಿ ಮಾಡಿ, 2,000 ರೂ. ನೋಟುಗಳನ್ನು ಜಮೆ ಮಾಡಿಕೊಳ್ಳಬಹುದು ಎಂದು ಆರ್‌ಬಿಐ ತಿಳಿಸಿದೆ.

ಈ ನಡುವೆ, ನೋಟು ಬದಲಾವಣೆಗೆ ಆಧಾರ್ ಕಾರ್ಡ್‌ ಕಡ್ಡಾಯವಾ ಎಂಬ ಚರ್ಚೆಯೂ ಸಾರ್ವಜನಿಕ ವಲಯದಲ್ಲಿ ನಡೆಯುತ್ತಿದೆ. ಈ ಬಗ್ಗೆ ಎಸ್‌ಬಿಐ ಸ್ಪಷ್ಟನೆ ನೀಡಿದ್ದು, ಹಣ ಬದಲಾವಣೆಗೆ ಯಾವುದೇ ದಾಖಲೆ ಬೇಕಿಲ್ಲವೆಂದು ಹೇಳಿದೆ.

ಒಬ್ಬ ವ್ಯಕ್ತಿ ಒಮ್ಮೆಗೆ 10 ನೋಟುಗಳನ್ನು ಬದಲಿಸಿಕೊಳ್ಳಬಹುದು ಎಂದು ಆರ್‌ಬಿಐ ಹೇಳಿದೆ. ಅಲ್ಲದೆ, ಆರ್‌ಬಿಐ ಹೊರಡಿಸಿರುವ ಸೂಚನೆಯಂತೆ ಸೆಪ್ಟೆಂಬರ್ 30ರವರೆಗೆ ನೋಟು ಬದಲಾವಣೆಗೆ ಅವಕಾಶವಿದೆ.

ಈ ಸುದ್ದಿ ಓದಿದ್ದೀರಾ?: ಕೇಜ್ರಿವಾಲ್ ನಿಯಂತ್ರಿಸಲು ‘ಸುಪ್ರೀಂ’ ಆದೇಶ ಧಿಕ್ಕರಿಸಿ ಸುಗ್ರೀವಾಜ್ಞೆ ಹೊರಡಿಸಿದ ಮೋದಿ ಸರ್ಕಾರ

ಆರ್‌ಬಿಐ ನಿರ್ಧಾರ ವಿರುದ್ಧ ಸಾರ್ವಜನಿಕ ಮತ್ತು ರಾಜಕೀಯ ವಲಯದಲ್ಲಿ ಟೀಕೆಗಳು, ವಿರೋಧಗಳು ವ್ಯಕ್ತವಾಗುತ್ತಿವೆ. ಕೇಂದ್ರ ಸರ್ಕಾರದ ನಡೆಯು ಮೂರ್ಖತನದ್ದು ಎಂದಿರುವ ಕಾಂಗ್ರೆಸ್‌ ಹಿರಿಯ ನಾಯಕ ಪಿ ಚಿದಂಬರಂ, ”ಕಪ್ಪುಹಣ ಹೊಂದಿರುವವರಿಗೆ ಸುಲಭವಾಗಿ ಹಣ ಕೂಡಿಡಲು ಈ 2,000 ಮುಖಬೆಲೆಯು ನೋಟುಗಳು ಸಹಾಯ ಮಾಡಿವೆ. ಅಲ್ಲದೆ, ಈಗ ಮತ್ತೆ 2,000 ಮುಖಬೆಲೆಯ ನೋಟು ಬ್ಯಾನ್ ಮಾಡಿ ಆ ನೋಟುಗಳನ್ನು ವಿನಿಮಯ ಮಾಡಿಕೊಳ್ಳಲು ಅವರಿಗೆ ‘ರತ್ನಗಂಬಳಿ ಹಾಸಿ ಸ್ವಾಗತ ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...