2,283 ಕೋಟಿ ರೂಪಾಯಿಗಳ ಹೂಡಿಕೆ ಹಗರಣ ಬಯಲು: ದೆಹಲಿಯಲ್ಲಿ ಇಬ್ಬರ ಬಂಧನ

Date:

ಮಧ್ಯಪ್ರದೇಶ ವಿಶೇಷ ಕಾರ್ಯಪಡೆ(STF) ಸುಮಾರು 2,283 ಕೋಟಿ ರೂಪಾಯಿಗಳ ಪ್ಯಾನ್-ಇಂಡಿಯಾ ಹೂಡಿಕೆ ಹಗರಣವನ್ನು ಬಯಲಿಗೆಳೆದಿದೆ. ಈ ಪ್ರಕರಣದಲ್ಲಿ ಇಬ್ಬರು ಮಾಸ್ಟರ್‌ಮೈಂಡ್‌ಗಳಾದ ದೀಪಕ್ ಶರ್ಮಾ ಮತ್ತು ಮದನ್ ಮೋಹನ್ ಕುಮಾರ್ ಎಂಬವರನ್ನು ದೆಹಲಿಯಲ್ಲಿ ಅಧಿಕಾರಿಗಳು ಬಂಧಿಸಿದ್ದಾರೆ.

ಶೆಲ್ ಸಂಸ್ಥೆಗಳಾದ ಯಾರ್ಕರ್ ಎಫ್‌ಎಕ್ಸ್ ಮತ್ತು ಯಾರ್ಕರ್ ಕ್ಯಾಪಿಟಲ್ ಮೂಲಕ ಬೋಟ್‌ಬ್ರೋನಂತಹ ಆನ್‌ಲೈನ್ ವ್ಯಾಪಾರ ವೇದಿಕೆ ಹೆಸರಲ್ಲಿ ಏಳು ರಾಜ್ಯಗಳಲ್ಲಿ ಸಾವಿರಾರು ಹೂಡಿಕೆದಾರರನ್ನು ವಂಚಿಸಲಾಗಿದೆ. ಇಂದೋರ್ ನಿವಾಸಿ ಇಶಾನ್ ಸಲೂಜಾ ಅವರು ದೂರು ನೀಡಿದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಸಲೂಜಾ ಅವರಿಗೆ 20.18 ಲಕ್ಷ ರೂಪಾಯಿಗಳ ಹೂಡಿಕೆಗೆ 6-8% ಮಾಸಿಕ ಲಾಭ ನೀಡುವ ಭರವಸೆ ನೀಡಲಾಗಿತ್ತು.

ಇದನ್ನು ಓದಿದ್ದೀರಾ? ‘ಭಾರತದಲ್ಲಿ ಬಹುದೊಡ್ಡ ಬದಲಾವಣೆ ನಡೆಯಲಿದೆ’; ಅದಾನಿ ಬಣ್ಣ ಬಯಲು ಮಾಡಿದ್ದ ಹಿಂಡೆನ್‌ಬರ್ಗ್‌ ಹೀಗೆ ಹೇಳಿದ್ಯಾಕೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರೋಪಿಗಳು ರೈನೆಟ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ಮತ್ತು ಕಿಂಡೆಂಟ್ ಬಿಸಿನೆಸ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಖಾತೆಗಳಿಗೆ ಹೂಡಿಕೆದಾರರಿಂದ ಹಣವನ್ನು ಸಂಗ್ರಹಿಸುತ್ತಿದ್ದರು. ಬಳಿಕ ಹಣವನ್ನು ಯುಸ್‌ ಡಾಲರ್‍‌ಗೆ ಪರಿವರ್ತಿಸುತ್ತಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ. ಮಧ್ಯಪ್ರದೇಶ ವಿಶೇಷ ಕಾರ್ಯಪಡೆಯು 20ಕ್ಕೂ ಹೆಚ್ಚು ಅನುಮಾನಾಸ್ಪದ ಬ್ಯಾಂಕ್ ಖಾತೆಗಳಲ್ಲಿ ಸುಮಾರು 90 ಕೋಟಿ ರೂಪಾಯಿಗಳನ್ನು ಸ್ಥಗಿತಗೊಳಿಸಿದೆ.

ಕಿಂಡೆಂಟ್ ಬಿಸಿನೆಸ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ 2023-24ನೇ ಹಣಕಾಸು ವರ್ಷದಲ್ಲಿ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯಕ್ಕೆ 1.10 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್‌ ಅನ್ನು ಘೋಷಿಸಿದೆ. ಆದರೆ 2023ರ ಜನವರಿಯಿಂದ 2024ರ ಡಿಸೆಂಬರ್‌ವರೆಗೆ ಒಟ್ಟು ಸುಮಾರು 7,020 ಕೋಟಿ ರೂ.ಗಳ ವಹಿವಾಟು ನಡೆಸಿದೆ.

ಅದೇ ರೀತಿ, ರೈನೆಟ್ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ 2023–24ನೇ ಹಣಕಾಸು ವರ್ಷದಲ್ಲಿ 7.80 ಕೋಟಿ ರೂ.ಗಳ ಬ್ಯಾಂಕ್ ಬ್ಯಾಲೆನ್ಸ್ ತೋರಿಸಿದೆ. ಆದರೆ ಅದೇ ಅವಧಿಯಲ್ಲಿ 15,800 ಕೋಟಿ ರೂ.ಗಳ ವಹಿವಾಟು ನಡೆಸಿದೆ. ಒಟ್ಟಾರೆಯಾಗಿ, ಎರಡೂ ಕಂಪನಿಗಳು 16 ಬ್ಯಾಂಕ್ ಖಾತೆಗಳಲ್ಲಿ ಸುಮಾರು 22,830 ಕೋಟಿ ರೂ.ಗಳನ್ನು ಪಡೆದಿವೆ. ಬಳಿಕ ಆ ಹಣವನ್ನು ಇತರೆ ಖಾತೆಗಳಿಗೆ ವರ್ಗಾಯಿಸಲಾಗಿದೆ.

ಎರಡೂ ಕಂಪನಿಗಳು ಆರ್‌ಬಿಐ ಅಥವಾ ಸೆಬಿಯಲ್ಲಿ ನೋಂದಾಯಿಸದೆ ಕಾರ್ಯನಿರ್ವಹಿಸುತ್ತಿದ್ದವು. ಹಲವು ಹಣಕಾಸು ಮತ್ತು ನಿಯಂತ್ರಕ ನಿಯಮಗಳನ್ನು ಉಲ್ಲಂಘಿಸಿವೆ. ಸದ್ಯ ಜಾರಿ ನಿರ್ದೇಶನಾಲಯ (ED) ಸಹ FEMA ಕಾಯ್ದೆಯಡಿಯಲ್ಲಿ ಪ್ರಕರಣವನ್ನು ತನಿಖೆ ನಡೆಸುತ್ತಿದೆ. ಆರೋಪಿಗಳು ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರ ಪ್ರದೇಶ, ರಾಜಸ್ಥಾನ, ತಮಿಳುನಾಡು, ಹಿಮಾಚಲ ಪ್ರದೇಶ ಮತ್ತು ಅಸ್ಸಾಂನಲ್ಲಿ ಜನರಿಗೆ ವಂಚನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...