ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

Date:

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ ದೇಶಭಕ್ತರು ಮತ್ತು ಕ್ರಾಂತಿಕಾರಿಗಳನ್ನು ‘ಅರಾಜಕತಾವಾದಿಗಳು’ ಎಂದು ಕರೆದಿತ್ತು. ಬ್ರಿಟಿಷ್ ಆಳ್ವಿಕೆಯ ಪರವಾಗಿ ಕೆಲಸ ಮಾಡಿತ್ತು. ಆರ್‌ಎಸ್‌ಎಸ್‌ ಕೈಗಳು ಮಹಾತ್ಮ ಗಾಂಧಿಯವರ ರಕ್ತದ ಕಲೆಗಳಿಂದ ತುಂಬಿಕೊಂಡಿವೆ ಎಂದು ಕಾಂಗ್ರೆಸ್‌ ಹೇಳಿದೆ.

ಬುಧವಾರ, ಆರ್‌ಎಸ್‌ಎಸ್‌ನ ಶತಮಾನೋತ್ಸವದ ನಾಣ್ಯವನ್ನು ಬಿಡುಗಡೆ ಮಾಡಿದ ಪ್ರಧಾನಿ ಮೋದಿ, “ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಸ್ಥಾಪಕ ಕೆ.ಬಿ ಹೆಡಗೇವಾರ್ ಸೇರಿದಂತೆ ಹಲವು ಸದಸ್ಯರು ಜೈಲಿಗೆ ಹೋಗಿದ್ದಾರೆ” ಎಂದು ಹೇಳಿದ್ದರು. ಅವರ ಹೇಳಿಕೆಯನ್ನು ಕಾಂಗ್ರೆಸ್‌ ಟೀಕಿಸಿದೆ. ಮೋದಿ ಹೇಳಿಕೆ ಸುಳ್ಳು ಎಂದು ಹೇಳಿದೆ.

“ಪ್ರಧಾನಿ ಮೋದಿ ಅವರು ಸುಳ್ಳು ಹೇಳುತ್ತಿದ್ದಾರೆ. ಹಿಂದುತ್ವ ಸಂಘಟನೆ ಕ್ವಿಟ್ ಇಂಡಿಯಾ ಚಳವಳಿಯ ಸಮಯದಲ್ಲಿ ಬ್ರಿಟಿಷರೊಂದಿಗೆ ಕೈ ಜೋಡಿಸಿತ್ತು. ಆರ್‌ಎಸ್‌ಎಸ್ ‘ದೇಶವನ್ನು ವಿಭಜಿಸುತ್ತದೆ” ಎಂದು ಕಾಂಗ್ರೆಸ್‌ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಆರ್‌ಎಸ್‌ಎಸ್‌ ನಾಯಕರು ಜೈಲಿಗೆ ಹೋಗಿಲ್ಲ, ಅದನ್ನು ಬ್ರಿಟಿಷರು ಎಂದಿಗೂ ನಿಷೇಧಿಸಿರಲಿಲ್ಲ. 1942ರಲ್ಲಿ ಬ್ರಿಟಿಷರ ವಿರುದ್ಧ ಪ್ರಾರಂಭವಾದ ‘ಕ್ವಿಟ್ ಇಂಡಿಯಾ ಚಳುವಳಿ’ಯ ಸಮಯದಲ್ಲಿ, ಇಡೀ ದೇಶ ಜೈಲಿಗೆ ಹೋಗುತ್ತಿದ್ದಾಗ, ಆರ್‌ಎಸ್‌ಎಸ್ ಈ ಚಳುವಳಿಯನ್ನು ಹತ್ತಿಕ್ಕಲು ಬ್ರಿಟಿಷರಿಗೆ ಸಹಾಯ ಮಾಡುತ್ತಿತ್ತು” ಎಂದು ಕಾಂಗ್ರೆಸ್ ತಿಳಿಸಿದೆ.

ಹಿಂದುತ್ವ ಸಂಘಟನೆಯು ಹಿಂದೂಗಳು ಮತ್ತು ಮುಸ್ಲಿಮರ ನಡುವೆ ಕೋಮು ವಿಭಜನೆಯನ್ನು ಸೃಷ್ಟಿಸಿತು. ದೇಶವನ್ನು ಎರಡು ಭಾಗಗಳಾಗಿ ವಿಭಜಿಸಿತು ಮತ್ತು ಅದನ್ನು ಅವಮಾನಿಸಿತು.

ಜನವರಿ 30, 1948 ರಂದು ನವದೆಹಲಿಯಲ್ಲಿ ಮಹಾತ್ಮ ಗಾಂಧಿಯನ್ನು ನಾಥೂರಾಮ್ ಗೋಡ್ಸೆ ಹತ್ಯೆ ಮಾಡಿದನು. ಗೋಡ್ಸೆ ಆರ್‌ಎಸ್‌ಎಸ್ ಸದಸ್ಯನಾಗಿದ್ದನು. ಆದರೆ, ಆ ಹತ್ಯೆಗೆ ಬಹಳ ಹಿಂದೆಯೇ ಆತ ಸಂಘ ತೊರೆದಿದ್ದನೆಂದು ಆರ್‌ಎಸ್‌ಎಸ್‌ ಹೇಳಿಕೊಂಡಿತ್ತು.

ಒಂದು ಶತಮಾನದ ಹಿಂದೆ ರಚನೆಯಾದಾಗಿನಿಂದ ಆರ್‌ಎಸ್‌ಎಸ್ ದೇಶಕ್ಕೆ ಪ್ರಯೋಜನಕಾರಿಯಾದ ಒಂದೇ ಒಂದು ಕೆಲಸವನ್ನು ಮಾಡಿಲ್ಲ, ಬದಲಾಗಿ ಕೇವಲ ಹಾನಿಯನ್ನುಂಟುಮಾಡಿದೆ ಎಂದು ಕಾಂಗ್ರೆಸ್ ಹೇಳಿದೆ.

ಆರ್‌ಎಸ್‌ಎಸ್‌ನಂತಹ ಕೋಮುವಾದಿ ಮತ್ತು ದ್ವೇಷಪೂರಿತ ಸಂಘಟನೆಯ ಕಾರ್ಯಕರ್ತರು ನೇರವಾಗಿ ಸರ್ಕಾರವನ್ನು ನಡೆಸುತ್ತಿರುವುದು ನಮ್ಮ ದೇಶದ ದುರಂತ. ಸಂವಿಧಾನಕ್ಕಿಂತ ಮನುಸ್ಮೃತಿಯನ್ನು ಯಾವಾಗಲೂ ಪ್ರತಿಪಾದಿಸುವವರು ಈಗ ನಮ್ಮ ದೇಶದಲ್ಲಿ ಮುಖ್ಯಮಂತ್ರಿಗಳು ಮತ್ತು ಪ್ರಧಾನ ಮಂತ್ರಿಗಳಾಗುತ್ತಿದ್ದಾರೆ. ಅವರಿಂದ ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ನ್ಯಾಯವನ್ನು ನಿರೀಕ್ಷಿಸಲು ಹೇಗೆ ಸಾಧ್ಯ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಸ್ವಾತಂತ್ರ್ಯ ಬಂದು 78 ವರ್ಷಗಳಾದರೂ, ಆರ್‌ಎಸ್‌ಎಸ್‌ಗೆ ಇರುವುದು ಒಂದೇ ಒಂದು ಕಾರ್ಯಸೂಚಿ, ಅದು ದೇಶದಲ್ಲಿ ಹಿಂದೂ-ಮುಸ್ಲಿಂ ಉದ್ವಿಗ್ನತೆಯನ್ನು ಹೆಚ್ಚಿಸುವ ಮೂಲಕ ಅಧಿಕಾರ ಪಡೆಯುವುದು. ಸಂಸ್ಥೆಗಳನ್ನು ವಶಪಡಿಸಿಕೊಳ್ಳುವುದು ಮತ್ತು ದ್ವೇಷ ಮತ್ತು ಉನ್ಮಾದವನ್ನು ಹರಡುವುದು ಎಂದು ಹೇಳಿದೆ.

ದೇಶದ ಹೆಚ್ಚಿನ ಸಮಸ್ಯೆಗಳಿಗೆ ಆರ್‌ಎಸ್‌ಎಸ್ ಮೂಲ ಎಂದು ಹೇಳುವುದು ಅತಿಶಯೋಕ್ತಿಯಾಗುವುದಿಲ್ಲ. ಈ ಸಂಘಟನೆ ದೇಶಕ್ಕೆ ಬೆಂಕಿ ಹಚ್ಚುವುದನ್ನು ಮತ್ತು ಅದನ್ನು ಅವಮಾನಿಸುವುದನ್ನು ನಿಲ್ಲಿಸಿದ ದಿನ ದೇಶದ ಅರ್ಧಕ್ಕಿಂತ ಹೆಚ್ಚು ಸಮಸ್ಯೆಗಳು ಬಗೆಹರಿಯುತ್ತವೆ ಎಂದು ಪಕ್ಷವು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...