ದೆಹಲಿಯಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಆರ್‌ಎಸ್‌ಎಸ್‌ ಕಚೇರಿ ಪುನರ್‌ ನಿರ್ಮಾಣ

Date:

ನವದೆಹಲಿಯ ಝಂಡೇವಾಲನ್ ಪ್ರದೇಶದಲ್ಲಿ 150 ಕೋಟಿ ರೂ. ವೆಚ್ಚದಲ್ಲಿ ಆರ್‌ಎಸ್‌ಎಸ್‌ನ ನೂತನ ಕಟ್ಟಡ ‘ಕೇಶವ್ ಕುಂಜ್’ ಪುನರ್ ನಿರ್ಮಾಣ ನೂತನ ಕಚೇರಿಯನ್ನು ನಿರ್ಮಾಣ ಮಾಡಲಾಗಿದೆ. ಕಟ್ಟಡ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ.

3.75 ಎಕರೆ ವಿಸ್ತೀರ್ಣದ ವಿಶಾಲ ಪ್ರದೇಶದಲ್ಲಿ ಕಟ್ಟಡವನ್ನು ನಿರ್ಮಿಸಲಾಗಿದ್ದು, 2018ರಲ್ಲಿ ನಿರ್ಮಾಣ ಕಾರ್ಯ ಪ್ರಾರಂಭವಾಗಿದೆ. ಪ್ರಾಚೀನ ಮತ್ತು ಆಧುನಿಕ ತಂತ್ರಗಳನ್ನು ಬಳಸಿಕೊಂಡು ಕಚೇರಿಯನ್ನು ನಿರ್ಮಿಸಲಾಗಿದೆ. 12 ಅಂತಸ್ತಿನ ಕಟ್ಟಡದಲ್ಲಿ 300 ಕೊಠಡಿಗಳಿವೆ. ಮೂರು ದೊಡ್ಡ ಸಭಾಂಗಣಗಳನ್ನು ಹೊಂದಿದ್ದು,1,300ಕ್ಕೂ ಹೆಚ್ಚು ಆಸನದ ಸಾಮರ್ಥ್ಯವನ್ನು ಹೊಂದಿದೆ.

ಗುಜರಾತ್ ಮೂಲದ ವಾಸ್ತುಶಿಲ್ಪಿ ಅನುಪ್ ಡೇವ್ ಕೇಶವ್ ಕುಂಜ್ ಅವರು ಕಟ್ಟಡದ ವಿನ್ಯಾಸ ಕಾರ್ಯವನ್ನು ಮಾಡಿದ್ದಾರೆ. ಕಚೇರಿ ಮತ್ತು ವಸತಿಗಳನ್ನು ಹೊಂದಿರುವ ಮೂರು ಕಟ್ಟಡಗಳಿಗೆ ಸಾಧನ, ಪ್ರೇರಣಾ ಮತ್ತು ಅರ್ಚನಾ ಎಂದು ಹೆಸರಿಸಲಾಗಿದೆ. ಕಟ್ಟಡದಲ್ಲಿ ವಿಶಾಲವಾದ ಪಾರ್ಕಿಂಗ್ ವ್ಯವಸ್ಥೆಯನ್ನು ಕೂಡ ಮಾಡಲಾಗಿದೆ. ಸುಮಾರು 8,500 ಪುಸ್ತಕಗಳನ್ನು ಹೊಂದಿರುವ ಬೃಹತ್ ಗ್ರಂಥಾಲಯ, ಹೊರರೋಗಿ ಚಿಕಿತ್ಸಾಲಯ, ಐದು ಹಾಸಿಗೆಗಳ ಸಣ್ಣ ಒಳರೋಗಿ ಸೌಲಭ್ಯವಿರುವ ಚಿಕಿತ್ಸಾಲಯವನ್ನು ಹೊಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೆಟ್ರೋ ದರ ಏರಿಕೆ- ‘ಸತ್ತಂತೆಯೂ ಅತ್ತಂತೆಯೂ’ ಆಡುತ್ತಿರುವ ಈ ನಾಟಕ ನಿಲ್ಲಲಿ

ಆರ್‌ಎಸ್‌ಎಸ್‌ ಕಾರ್ಯಕ್ರಮಗಳನ್ನು ಆಯೋಜಿಸಲು, ಆರ್‌ಎಸ್‌ಎಸ್‌ ಮುಖಂಡರು ಮತ್ತು ಕಾರ್ಯಕರ್ತರಿಗೆ ವಸತಿ ಒದಗಿಸಲು ಹೊಸ ಕಚೇರಿಯನ್ನು ಬಳಸಲಾಗುತ್ತದೆ.

ಹಳೆಯ ಸಂಘದ ಕಚೇರಿಯನ್ನು ಪುನರ್ ನಿರ್ಮಿಸಲು ಕನಿಷ್ಠ 75,000 ಆರ್‌ಎಸ್‌ಎಸ್‌ ಕಾರ್ಯಕರ್ತರು ನೆರವು ನೀಡಿದ್ದಾರೆ ಎಂದು ಹೇಳಲಾಗಿದೆ. ಹೊಸದಾಗಿ ನಿರ್ಮಿಸಲಾದ ಸಂಕೀರ್ಣದಲ್ಲಿ ಫೆಬ್ರವರಿ 19ರಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ.

1962ರಿಂದ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಈ ಆರ್‌ಎಸ್‌ಎಸ್‌ ಕಚೇರಿಯಲ್ಲಿ ನವೀಕರಣ ಕಾಮಗಾರಿ ಪ್ರಾರಂಭಿಸಿದ್ದರಿಂದ 2016ರಿಂದ ಬಾಡಿಗೆ ಕಚೇರಿಯಲ್ಲಿ ಕಾರ್ಯಚರಿಸುತ್ತಿತ್ತು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...