ಗಲಭೆ ಲಾಭ ಪಡೆದ ವಿಮಾನಯಾನ ಸಂಸ್ಥೆಗಳು; ₹2 ಸಾವಿರ ಬೆಲೆಯ ಟಿಕೆಟ್ ₹25 ಸಾವಿರಕ್ಕೆ ಏರಿಕೆ

Date:

  • 2,500ರಿಂದ ₹5,000 ಟಿಕೆಟ್ ದರ ₹25 ಸಾವಿರಕ್ಕೆ ಏರಿಕೆ
  • ಮೇ 3ರಂದು ಶುರುವಾಗಿದ್ದ ಜನಾಂಗೀಯ ಘರ್ಷಣೆ

ಗಲಭೆಪೀಡಿತ ಮಣಿಪುರದಿಂದ ತೆರಳಲು ನೂರಾರು ಜನರು ಧಾವಿಸುತ್ತಿದ್ದಂತೆ, ಇಂಡಿಗೋ ಮತ್ತು ಏರ್ ಏಷ್ಯಾ ಸೇರಿದಂತೆ ಅನೇಕ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರ ಬೇಡಿಕೆಯ ಹಠಾತ್ ಹೆಚ್ಚಳದ ಹಿನ್ನೆಲೆಯಲ್ಲಿ ತಮ್ಮ ಪ್ರಯಾಣ ದರವನ್ನು ಹತ್ತಾರು ಪಟ್ಟು ಹೆಚ್ಚಿಸಿವೆ.

ಸಾಮಾನ್ಯವಾಗಿ, ಇಂಫಾಲ್ ಮತ್ತು ಕೋಲ್ಕತ್ತಾ ನಡುವಿನ ವಿಮಾನ ದರವು ಏಕಮುಖವಾಗಿ ಪ್ರಯಾಣಿಸುವ ವ್ಯಕ್ತಿಗೆ ₹2,500ರಿಂದ ₹5,000ವರೆಗೆ ಇರುತ್ತದೆ. ಇಂಫಾಲದಿಂದ ಗುವಾಹಟಿಗೆ ಹೋಗುವ ವಿಮಾನಕ್ಕೂ ಇದೇ ದರ ಅನ್ವಯಿಸುತ್ತದೆ. ನಾವು ವಾಯು ಮಾರ್ಗದ ದೂರವನ್ನು ಪರಿಗಣನೆಗೆ ತೆಗೆದುಕೊಂಡರೆ, ಇಂಫಾಲದಿಂದ ಕೋಲ್ಕತ್ತಾಗೆ 615 ಕಿಲೋಮೀಟರ್‌ಗಳಿದ್ದರೆ, ಇಂಫಾಲ್‌ನಿಂದ ಗುವಾಹಟಿಗೆ 269 ಕಿಲೋಮೀಟರ್‌ಗಳಿದೆ.

ಆದರೆ ಮೇ 3ರಂದು ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ಪ್ರಾರಂಭವಾದಾಗಿನಿಂದ ಇಂಫಾಲ್‌ನಿಂದ ಕೋಲ್ಕತ್ತಾಗೆ ವಿಮಾನದ ದರಗಳು ಗಗನಕ್ಕೇರಿವೆ. ಈ ಮಾರ್ಗದಲ್ಲಿ ಏಕಮುಖ ಪ್ರಯಾಣಕ್ಕೆ ಪ್ರಸ್ತುತ ದರ ₹12,000 ರಿಂದ ₹25,000 ವರೆಗೂ ಏರಿವೆ. ಅದೇ ಸಮಯದಲ್ಲಿ, ಇಂಫಾಲದಿಂದ ಗುವಾಹಟಿಗೆ ವಿಮಾನದ ಏಕಮುಖ ಟಿಕೆಟ್ ದರವನ್ನು ₹15,000ಕ್ಕೆ ಹೆಚ್ಚಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇಕ್‌ಮೈಟ್ರಿಪ್ ನಂತಹ ಟಿಕೆಟ್ ಬುಕಿಂಗ್ ವೆಬ್‌ಸೈಟ್‌ಗಳ ಪ್ರಕಾರ, ಇಂಫಾಲ್‌ನಿಂದ ಕೋಲ್ಕತ್ತಾ ಮತ್ತು ಇಂಫಾಲ್‌ನಿಂದ ಗುವಾಹಟಿಗೆ ಏಕಮುಖ ಟಿಕೆಟ್ ದರಗಳು ಮೇ 12 ರವರೆಗೆ ₹10,000 ರಿಂದ ₹15,000ರ ನಡುವೆ ಏರಿಸಲಾಗಿದೆ.

ರಾಜ್ಯ ಸರ್ಕಾರಗಳು ತಮ್ಮ ಜನರನ್ನು ಮರಳಿ ಅವರ ವಾಸ ಸ್ಥಳಕ್ಕೆ ಸ್ಥಳಾಂತರಿಸಲು ಕೈಗೊಂಡ ಕ್ರಮಗಳಿಂದಾಗಿ, ಇಂಫಾಲ್ ಮತ್ತು ಕೋಲ್ಕತ್ತಾ ನಡುವೆ ಕೆಲವು ಹೆಚ್ಚುವರಿ ವಿಮಾನಗಳನ್ನು ನಿರ್ವಹಿಸಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಶಾಂತಿಯುತ ರಾಜ್ಯದಲ್ಲಿ ಗಲಭೆ ಹರಡುವ ಪ್ರಯತ್ನ; ಯೂಟ್ಯೂಬರ್ ಅರ್ಜಿ ತಿರಸ್ಕರಿಸಿದ ಸುಪ್ರೀಂ

ಹಿಂಸಾಚಾರ ಪೀಡಿತ ಮಣಿಪುರದಲ್ಲಿ ಸಹಜತೆ ನಿಧಾನವಾಗಿ ಮರಳುತ್ತಿದೆ. ಏಕೆಂದರೆ ಮೇ 3ರಂದು ವಿಧಿಸಲಾದ ಕರ್ಫ್ಯೂ ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಬೆಳಿಗ್ಗೆ 5 ರಿಂದ 8 ರವರೆಗೆ ಜನರಿಗೆ ದಿನಸಿ, ತರಕಾರಿಗಳು ಮತ್ತು ಔಷಧಿಗಳಂತಹ ಅಗತ್ಯ ವಸ್ತುಗಳನ್ನು ಖರೀದಿಸಲು ಅನುವು ಮಾಡಿಕೊಡುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹೆಲಿಕಾಪ್ಟರ್‌ಗಳು ಮತ್ತು ಡ್ರೋನ್‌ಗಳ ಸಹಾಯದಿಂದ ವೈಮಾನಿಕ ಕಣ್ಗಾವಲು ಮುಂದುವರಿಯಿತು. ಆದರೆ, ಭಾರತೀಯ ಸೇನೆ ಮತ್ತು ಅಸ್ಸಾಂ ರೈಫಲ್ಸ್‌ನ ಸಿಬ್ಬಂದಿ ಜನಾಂಗೀಯ ಹಿಂಸಾಚಾರದಿಂದ ಪೀಡಿತ ಪ್ರದೇಶಗಳಲ್ಲಿ ಧ್ವಜ ಮೆರವಣಿಗೆ ನಡೆಸಿದರು.

ಮೇ 3ರಂದು ಕುಕಿ ಬುಡಕಟ್ಟು ಸಮುದಾಯ ಆಯೋಜಿಸಿದ್ದ ಪ್ರತಿಭಟನಾ ಮೆರವಣಿಗೆಯ ನಂತರ ಮಣಿಪುರದಲ್ಲಿ ಅಶಾಂತಿ ಭುಗಿಲೆದ್ದಿದ್ದು, ಬುಡಕಟ್ಟೇತರ ಮೇಟಿ ಸಮುದಾಯದೊಂದಿಗೆ ಘರ್ಷಣೆಗೆ ಕಾರಣವಾಯಿತು. ಬಹುಸಂಖ್ಯಾತ ಮತ್ತು ಪ್ರಧಾನವಾಗಿ ಹಿಂದೂ ಮೇಟಿ ಸಮುದಾಯವನ್ನು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಪಟ್ಟಿಗೆ ಸೇರಿಸುವ ಬೇಡಿಕೆಗೆ ಸಂಬಂಧಿಸಿ ಕೇಂದ್ರಕ್ಕೆ ಶಿಫಾರಸ್ಸು ಕಳುಹಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿರುವ ಇತ್ತೀಚಿನ ಮಣಿಪುರ ಹೈಕೋರ್ಟ್ ಆದೇಶವನ್ನು ವಿರೋಧಿಸಿ ಮೆರವಣಿಗೆಗೆ ಕರೆ ನೀಡಲಾಯಿತು.

ಇದಾದ ನಂತರ ಮುಂದಿನ ಎರಡು ದಿನಗಳಲ್ಲಿ, ಚುರಾಚಂದ್‌ಪುರ, ಇಂಫಾಲ್ ಪೂರ್ವ ಮತ್ತು ಪಶ್ಚಿಮ, ಬಿಷ್ಣುಪುರ್, ತೆಂಗ್‌ನೌಪಾಲ್ ಮತ್ತು ಕಾಂಗ್‌ಪೋಕ್ಪಿಯಂತಹ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನಾಕಾರರ ಗುಂಪುಗಳು ಕಾರುಗಳು ಮತ್ತು ಕಟ್ಟಡಗಳನ್ನು ಸುಟ್ಟುಹಾಕಿವೆ. ಅಂಗಡಿಗಳು, ಹೋಟೆಲ್‌ಗಳು ಮತ್ತು ಚರ್ಚ್‌ಗಳನ್ನು ಧ್ವಂಸಗೊಳಿಸಲಾಗಿದೆ. ಘರ್ಷಣೆ ನಿಯಂತ್ರಿಸಲು ಪೊಲೀಸರು ಮತ್ತು ಅರೆಸೇನಾ ಪಡೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಹಿಂಸಾಚಾರ ಉಲ್ಬಣಗೊಳ್ಳುತ್ತಿದ್ದಂತೆ, ರಾಜ್ಯ ಸರ್ಕಾರವು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿ ಕರ್ಫ್ಯೂ ವಿಧಿಸಿ, ಕಂಡಲ್ಲಿ ಗುಂಡು ಆದೇಶಿಸಿತ್ತು.

ಈವರೆಗೆ, 23,000 ನಾಗರಿಕರನ್ನು ಹಿಂಸಾಚಾರ ಪೀಡಿತ ಪ್ರದೇಶಗಳಿಂದ ರಕ್ಷಿಸಲಾಗಿದೆ ಮತ್ತು ಮಿಲಿಟರಿ ಕ್ಯಾಂಪ್‌ಗಳಿಗೆ ಸ್ಥಳಾಂತರಿಸಲಾಗಿದೆ. ಮಣಿಪುರ ಹೊತ್ತಿ ಉರಿಯುತ್ತಿದ್ದರೂ ಆಡಳಿತಾರೂಢ ಬಿಜೆಪಿ ಮತ್ತು ಅದರ ಪ್ರಮುಖ ನಾಯಕರು ಮೇ 10ರಂದು ನಡೆಯುತ್ತಿರುವ ಕರ್ನಾಟಕ ವಿಧಾನಸಭೆ ಚುನಾವಣೆಯ ಪ್ರಚಾರದಲ್ಲಿ ತೊಡಗಿಸಿಕೊಂಡು ಗಲಭೆ ನಿಯಂತ್ರಿಸಲು ಸರಿಯಾದ ಕ್ರಮ ಕೈಗೊಳ್ಳದ ಕಾರಣ ವಿರೋಧ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...