ರಾಜಸ್ಥಾನ | ಬೃಹತ್‌ ಸಮಾವೇಶ ನಡೆಸಿದ ಸಚಿನ್‌ ಪೈಲಟ್‌; ಹೊಸ ಪಕ್ಷ ಸ್ಥಾಪನೆಯ ಕುತೂಹಲಕ್ಕೆ ತೆರೆ

Date:

  • 2018ರಲ್ಲಿ ಸರ್ಕಾರ ರಚನೆಯ ನಂತರ ಗೆಹ್ಲೋಟ್‌, ಪೈಲಟ್‌ ನಡುವೆ ಮುನಿಸು
  • ತಂದೆ ರಾಜೇಶ್‌ ಪೈಲಟ್‌ ಅವರ ಪುಣ್ಯತಿಥಿ ಕಾರ್ಯಕ್ರಮದಲ್ಲಿ ಪೈಲಟ್‌ ಮಾತು

ಕಾಂಗ್ರೆಸ್‌ ನಾಯಕ ಸಚಿನ್‌ ಪೈಲಟ್‌ ಅವರು ತಮ್ಮ ತಂದೆ ರಾಜೇಶ್‌ ಪೈಲಟ್‌ ಅವರ ಪುಣ್ಯತಿಥಿಯ ಅಂಗವಾಗಿ ರಾಜಸ್ಥಾನದ ಜೈಪುರದ ದೌಸಾದಲ್ಲಿ ಭಾನುವಾರ (ಜೂನ್ 11) ಏರ್ಪಡಿಸಿದ್ದ ಸಮಾವೇಶದಲ್ಲಿ ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಉಂಟಾಗಿದ್ದ ಕುತೂಹಲಕ್ಕೆ ತೆರೆ ಎಳೆದರು.

ಸಮಾವೇಶ ಆರಂಭಕ್ಕೂ ಮುನ್ನ ತಮ್ಮ ತಂದೆ ರಾಜೇಶ್‌ ಪೈಲಟ್‌ ಅವರಿಗೆ ಸಚಿನ್‌ ಗೌರವ ಸಲ್ಲಿಸಿದರು.

ಕಾಂಗ್ರೆಸ್‌ನ ಕಾರ್ಯಕರ್ತರು ಗೌರವ ನಮನ ಸಲ್ಲಿಸಿದ ನಂತರ ರಾಜಸ್ಥಾನದ ಉಪಮುಖ್ಯಮಂತ್ರಿಯೂ ಆದ ಸಚಿನ್‌ ಪೈಲಟ್‌ ಅವರು ರಾಜೇಶ್‌ ಪೈಲಟ್‌ ಅವರ ಪ್ರತಿಮೆಯನ್ನು ಅನಾವರಣಗೊಳಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಮಾವೇಶದಲ್ಲಿ ಮಾತನಾಡಿದ ಅವರು ಹೊಸ ಪಕ್ಷ ಸ್ಥಾಪನೆಯ ಬಗ್ಗೆ ಇದ್ದ ಊಹಾಪೋಹಗಳಿಗೆ ತೆರೆ ಎಳೆದರು.

ರಾಜಸ್ಥಾನ ಅಥವಾ ದೇಶದಲ್ಲಿ ಭಷ್ಟಾಚಾರಯುಕ್ತ ರಾಜಕೀಯಕ್ಕೆ ಅವಕಾಶವಿಲ್ಲ ಎಂದ ಸಚಿನ್‌, ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರ ಕಾರ್ಯಗಳ ಕುರಿತು ಮಾತನಾಡಿದರು.

ಸಚಿನ್‌ ಪೈಲಟ್‌ ಅವರು ಕಾರ್ಯಕ್ರಮದಲ್ಲಿ ಯಾವುದೇ ಪಕ್ಷ ಸ್ಥಾಪನೆಯ ಬಗ್ಗೆ ಮಾತನಾಡಲಿಲ್ಲ.

ಇದೇ ವೇಳೆ ಸಚಿನ್‌ ಅವರು ಅಶೋಕ್‌ ಗೆಹ್ಲೋಟ್‌ ಅವರ ಸರ್ಕಾರದ ಲೋಪಗಳ ಕುರಿತು ಮಾತನಾಡಿದರು.

“ಭಾರತ ಮತ್ತು ರಾಜಸ್ಥಾನದ ರಾಜಕೀಯದಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ಇರಬಾರದು. ಇದರಿಂದ ಯುವ ಜನತೆ ಅಸಮಾಧಾನಗೊಂಡರೆ ದೇಶ ಎಂದಿಗೂ ಅಭಿವೃದ್ಧಿಯಾಗುವುದಿಲ್ಲ” ಎಂದು ಸಚಿನ್ ಅವರು ಅಶೋಕ್‌ ಗೆಹ್ಲೋಟ್‌ ಅವರ ಆಡಳಿತವನ್ನು ಪರೋಕ್ಷವಾಗಿ ಟೀಕಿಸಿದರು.

“ನಾನು 365 ದಿನವೂ ಬಿಜೆಪಿಯ ಮಾಜಿ ಮುಖ್ಯಮಂತ್ರಿ ವಸುಂಧರ ರಾಜೆ ಅವರನ್ನು ವಿರೋಧಿಸುತ್ತೇನೆ. ಆದರೆ ಅವರ ವಿರುದ್ಧ ಎಂದಿಗೂ ಅವಹೇಳನಕಾರಿ ಪದಗಳನ್ನು ಬಳಸುವುದಿಲ್ಲ. ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರನ್ನು ಎಂದಿಗೂ ಅವಮಾನಿಸಿಲ್ಲ” ಎಂದು ಸಚಿನ್‌ ಹೇಳಿದರು.

“ನಮ್ಮ ಆಡಳಿತದಲ್ಲಿ ಏನಾದರೂ ಲೋಪವಿದ್ದರೆ ಇತರರನ್ನು ದೂಷಿಸದೆ ಅದನ್ನು ಸರಿಪಡಿಸಿಕೊಳ್ಳಬೇಕು. ಇತರರನ್ನು ಅವಮಾನಿಸಲು ನಾನು ನನ್ನ ಬೇಡಿಕೆಗಳನ್ನು ಮುಂದಿಟ್ಟಿಲ್ಲ. ರಾಜಕೀಯದಲ್ಲಿ ನಿಮ್ಮ ಅಭಿಪ್ರಾಯಗಳನ್ನು ಮಂಡಿಸುವುದು ಬಹಳ ಮುಖ್ಯವಾಗಿದೆ” ಎಂದು ಸಚಿನ್‌ ಅವರು ಗೆಹ್ಲೋಟ್‌ ಸರ್ಕಾರದ ವಿರುದ್ಧದ ಮುನಿಸನ್ನು ಪರೋಕ್ಷವಾಗಿ ಹೊರಹಾಕಿದರು.

ಈ ಸುದ್ದಿ ಓದಿದ್ದೀರಾ? 2022ರ ವಿಶ್ವ ಡಿಜಿಟಲ್ ಪಾವತಿ ವಹಿವಾಟಿನಲ್ಲಿ ಭಾರತಕ್ಕೆ ಮೊದಲ ಸ್ಥಾನ | ಕೇಂದ್ರದ ದತ್ತಾಂಶ

ಸಚಿನ್‌ ಪೈಲಟ್‌ ಹಾಗೂ ಅಶೋಕ್ ಗೆಹ್ಲೋಟ್‌ ಅವರ ಜೊತೆ ಕಳೆದ ವಾರ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್‌ ಗಾಂಧಿ ಅವರು ಚರ್ಚೆ ನಡೆಸಿದ್ದರು.

2018ರಲ್ಲಿ ರಾಜಸ್ಥಾನದಲ್ಲಿ ಕಾಂಗ್ರೆಸ್‌ ಸರ್ಕಾರ ರಚನೆಯಾದಾಗಿನಿಂದ ಸಚಿನ್‌ ಹಾಗೂ ಅಶೋಕ್‌ ಗೆಹ್ಲೋಟ್‌ ನಡುವೆ ಅಧಿಕಾರ ಹಂಚಿಕೆಯ ಬಿಕ್ಕಟ್ಟು ಉಂಟಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...