ಮನೆ, ಶೂಟಿಂಗ್ ಇಷ್ಟೇ ಬದುಕು: ಜೀವ ಬೆದರಿಕೆ ಬಗ್ಗೆ ಮೌನ ಮುರಿದ ಸಲ್ಮಾನ್ ಖಾನ್

Date:

ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯ್ ಕಡೆಯಿಂದ ನೇರವಾಗಿ ಅಥವಾ ಪರೋಕ್ಷವಾಗಿ ಜೀವ ಬೆದರಿಕೆ ಹೊಂದಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಮೊದಲ ಬಾರಿಗೆ ತನ್ನ ಮೌನ ಮುರಿದಿದ್ದಾರೆ. “ಬದುಕು ಈಗ ಮನೆಯಿಂದ ಶೂಟಿಂಗ್, ಶೂಟಿಂಗ್‌ನಿಂದ ಮನೆ ಅಷ್ಟೇ ಆಗಿದೆ. ನಾನು ದೇವರನ್ನು ನಂಬುವವನು. ನನಗೆ ಎಷ್ಟು ಜೀವಿತಾವಧಿ ಬರೆಯಲಾಗಿದೆಯೋ ಅಷ್ಟು ಕಾಲ ಬದುಕುತ್ತೇನೆ” ಎಂದು ಹೇಳಿದ್ದಾರೆ.

ಕಳೆದ ವರ್ಷ ಮುಂಬೈನ ಬಾಂದ್ರಾದಲ್ಲಿರುವ ಅವರ ನಿವಾಸದ ಹೊರಗೆ ಗುಂಡಿನ ದಾಳಿ ನಡೆದಿದೆ. ಹಲವು ಬಾರಿ ಜೀವ ಬೆದರಿಕೆ ಹಾಕಲಾಗಿದೆ. ಅದಾದ ಬಳಿಕ ಸಲ್ಮಾನ್ ಭದ್ರತೆಯನ್ನು ಹೆಚ್ಚಿಸಲಾಗಿದೆ. ಮನೆಯ ಬಾಲ್ಕನಿಯಲ್ಲಿ ಗುಂಡು ತಗುಲದಂತಹ ಗಾಜನ್ನು ಹಾಕಲಾಗಿದೆ.

ಇದನ್ನು ಓದಿದ್ದೀರಾ? ಸಲ್ಮಾನ್‌ ಖಾನ್‌ಗೆ ಮತ್ತೆ ಜೀವ ಬೆದರಿಕೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂಬೈನಲ್ಲಿ ಈ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಲ್ಮಾನ್ ಖಾನ್, “ದೇವರು ಮತ್ತು ಅಲ್ಲಾ ಗಮನಿಸುತ್ತಿದ್ದಾರೆ. ಎಷ್ಟು ಜೀವಿತಾವಧಿ ಇದೆಯೋ ಅಷ್ಟು ಕಾಲ ಬದುಕುತ್ತೇನೆ ಅಷ್ಟೇ” ಎಂದಿದ್ದಾರೆ. ಹಾಗೆಯೇ ತನ್ನ ಭದ್ರತೆ ಬಗ್ಗೆಯೂ ಮಾತನಾಡಿದ್ದಾರೆ. “ಕೆಲವೊಮ್ಮೆ ಇಷ್ಟೊಂದು ಜನರು ಸುತ್ತುವರೆದಿರುವುದು ಸಮಸ್ಯೆ ಅನಿಸುತ್ತದೆ” ಎಂದು ಹೇಳಿದ್ದಾರೆ.

ಬೆದರಿಕೆ ಬಳಿಕ ಸಲ್ಮಾನ್ ಈಗ ತಮ್ಮ ಮನೆ ಮತ್ತು ಶೂಟಿಂಗ್ ಸೆಟ್‌ಗೆ ನಡುವೆ ಮಾತ್ರ ಪ್ರಯಾಣಿಸುತ್ತಿರುವುದಾಗಿ ಹೇಳಿದ್ದಾರೆ. “ನಾನು ಪತ್ರಕರ್ತರೊಂದಿಗೆ ಇದ್ದಾಗ ಯಾವುದೇ ಚಿಂತೆ ಪಡುವುದಿಲ್ಲ. ಪತ್ರಕರ್ತರು ಇಲ್ಲದಾಗ ಕಷ್ಟ ಅನಿಸುತ್ತದೆ” ಎಂದೂ ತಿಳಿಸಿದ್ದಾರೆ.

1998ರ ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಅವರ ಭಾಗಿಯಾಗಿರುವ ವಿಚಾರದಲ್ಲಿ ಬಿಷ್ಣೋಯ್ ಗ್ಯಾಂಗ್ ಸಲ್ಮಾನ್ ಅವರನ್ನು ಗುರಿಯಾಗಿಸಿಕೊಂಡಿದೆ. ಈ ಪ್ರಾಣಿಯನ್ನು ಬಿಷ್ಣೋಯ್ ಸಮುದಾಯವು ಪೂಜಿಸುತ್ತದೆ.

ಮಾರ್ಚ್ 30ರಂದು ಸಲ್ಮಾನ್ ಖಾನ್ ನಟನೆಯ ಸಿಕಂದರ್ ಸಿನಿಮಾ ಬಿಡುಗಡೆಯಾಗಲಿದ್ದು, ಈ ಸಿನಿಮಾದಲ್ಲಿ ಕಾಜಲ್ ಅಗರ್ವಾಲ್ ಮತ್ತು ರಶ್ಮಿಕಾ ಮಂದಣ್ಣ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...