ಕೇಂದ್ರದ ಸುಗ್ರೀವಾಜ್ಞೆ | ಎಎಪಿಗೆ ಸಮಾಜವಾದಿ ಪಕ್ಷ ಬೆಂಬಲ

Date:

  • ಸಮಾಜವಾದಿ ಪಕ್ಷ ಏರ್ಪಡಿಸಿದ್ದ ಸಭೆಯಲ್ಲಿ ಅರವಿಂದ್ ಕೇಜ್ರಿವಾಲ್ ಭಾಗಿ
  • ದೆಹಲಿ ಅಧಿಕಾರಿಗಳ ನೇಮಕಾತಿ ಚುನಾಯಿತ ಸರ್ಕಾರಕ್ಕೆ ನೀಡಿ ಸುಪ್ರೀಂ ಕೋರ್ಟ್ ಆದೇಶ

ದೆಹಲಿ ಆಡಳಿತ ಸೇವೆಗಳನ್ನು ನಿಯಂತ್ರಿಸುವ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ ವಿರುದ್ಧದ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೋರಾಟಕ್ಕೆ ಸಮಾಜವಾದಿ ಪಕ್ಷ (ಎಸ್‌ಪಿ) ಬುಧವಾರ (ಜೂನ್ 7) ಬೆಂಬಲ ಸೂಚಿಸಿದೆ ಎಂದು ವರದಿಯಾಗಿದೆ.

ಲಖನೌದಲ್ಲಿ ಆಮ್ ಅದ್ಮಿ ಪಕ್ಷದ (ಎಎಪಿ) ಸಂಚಾಲಕರ ಜೊತೆ ಸಭೆ ನಡೆಸಿದ ಬಳಿಕ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಈ ತೀರ್ಮಾನ ಪ್ರಕಟಿಸಿದರು.

ಸಮಾಜವಾದಿ ಪಕ್ಷ ಏರ್ಪಡಿಸಿದ್ದ ಸಭೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಹಾಗೂ ಅರವಿಂದ್ ಕೇಜ್ರಿವಾಲ್ ಸಹ ಇದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರೊಂದಿಗೆ ನಾವು ಚರ್ಚೆ ನಡೆಸಿದ್ದೇವೆ. ಕೇಂದ್ರದ ಸುಗ್ರೀವಾಜ್ಞೆ ರಾಜ್ಯಸಭೆಯಲ್ಲಿ ಮತಕ್ಕೆ ಬಂದಾಗ ಅದನ್ನು ವಿರೋಧಿಸಲು ತಮ್ಮ ಬೆಂಬಲ ನೀಡುವುದಾಗಿ ಅಖಿಲೇಶ್ ಭರವಸೆ ನೀಡಿದ್ದಾರೆ” ಎಂದು ಸಭೆಯ ನಂತರ ಅರವಿಂದ್ ಕೇಜ್ರಿವಾಲ್ ಜಂಟಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಎಸ್‌ಪಿ ನಾಯಕ ಅಖಿಲೇಶ್ ಅವರು ಸುಗ್ರೀವಾಜ್ಞೆಯನ್ನು ಪ್ರಜಾಪ್ರಭುತ್ವ ವಿರೋಧಿ ಎಂದು ಕರೆದರು.

ಸಮಾಜವಾದಿ ಪಕ್ಷ ಎಂದಿಗೂ ಕೇಜ್ರಿವಾಲ್ ಅವರ ಪರ ಇರುತ್ತದೆ ಎಂದು ಅಖಿಲೇಶ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.

“ಬಿಜೆಪಿಗೆ ಬಹುಮತ ಇಲ್ಲದ ರಾಜ್ಯಸಭೆಯಲ್ಲಿ ಬಿಜೆಪಿ ವಿರೋಧಿ ಪಕ್ಷಗಳು ಒಗ್ಗೂಡಿ ರಾಜ್ಯಸಭೆಯಲ್ಲಿ ಈ ಸುಗ್ರೀವಾಜ್ಞೆ ಸೋಲಿಸಿದರೆ ಆಗ ಇದು ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಮಣಿಸಲು ಉಪಾಂತ ಅಂತಿಮ ಸ್ಪರ್ಧೆ ಎನಿಸಲಿದೆ ಎಂದು ದೇಶಕ್ಕೆ ಒಂದು ಪ್ರಬಲ ಸಂದೇಶ ರವಾನಿಸಿದಂತಾಗುತ್ತದೆ” ಎಂದು ಕೇಜ್ರಿವಾಲ್ ಹೇಳಿದರು.

ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ, ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್, ಶಿವಸೇನಾ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದುವರೆಗೆ ಕೇಂದ್ರದ ಸುಗ್ರೀವಾಜ್ಞೆ ವಿರುದ್ಧ ಎಎಪಿಗೆ ತಮ್ಮ ಬೆಂಬಲ ನೀಡಿರುವ ನಾಯಕರಾಗಿದ್ದಾರೆ.

ಬಿಹಾರದ ಮುಖ್ಯಮಂತ್ರಿ ಹಾಗೂ ಜೆಡಿಯುನ ನಾಯಕ ನಿತೀಶ್ ಕುಮಾರ್ ಹಾಗೂ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಸಹ ಕೇಜ್ರಿವಾಲ್ಗೆ ಸುಗ್ರೀವಾಜ್ಞೆ ವಿಚಾರದಲ್ಲಿ ತಮ್ಮ ಬೆಂಬಲ ಸೂಚಿಸಿದ್ದಾರೆ.

ದೆಹಲಿಯ ಗ್ರೂಪ್-ಎ ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಾತಿಗಾಗಿ ಪ್ರಾಧಿಕಾರವೊಂದನ್ನು ರಚಿಸಲು ಕೇಂದ್ರ ಸರ್ಕಾರ ಮೇ 19 ರಂದು ಸುಗ್ರೀವಾಜ್ಞೆ ಪ್ರಕಟಿಸಿತು. ಇದು ಸುಪ್ರೀಂ ಕೋರ್ಟ್ ತೀರ್ಪಿನ ವಿರೋಧಿ ನಡೆ ಎಂದು ಎಎಪಿ ಆರೋಪಿಸಿದೆ.

ಈ ಸುದ್ದಿ ಓದಿದ್ದೀರಾ? ಟಿಪ್ಪು, ಔರಂಗಜೇಬ್ ಬಗ್ಗೆ ಸೋಷಿಯಲ್ ಮೀಡಿಯಾ ಪೋಸ್ಟ್‌: ಕೊಲ್ಲಾಪುರ ಉದ್ವಿಗ್ನ

ದೆಹಲಿಯಲ್ಲಿ ಪೊಲೀಸ್, ಸಾರ್ವಜನಿಕ ಸೇವೆಗಳು ಹಾಗೂ ಭೂಮಿಗೆ ಸಂಬಂಧಿಸಿದ ಸೇವೆಗಳನ್ನು ಹೊರತುಪಡಿಸಿ ಇತರ ಸೇವೆಗಳ ನಿಯಂತ್ರಣವನ್ನು ಚುನಾಯಿತ ಸರ್ಕಾರಕ್ಕೆ ಹಸ್ತಾಂತರಿಸುವ ಸುಪ್ರೀಂ ಕೋರ್ಟ್ ತೀರ್ಪಿನ ಒಂದು ವಾರದ ನಂತರ ಕೇಂದ್ರ ಸರ್ಕಾರ ಈ ಸುಗ್ರೀವಾಜ್ಞೆ ಹೊರಡಿಸಿದೆ.

ಮೇ 11ರ ಸುಪ್ರೀಂ ಕೋರ್ಟ್‌ನ ತೀರ್ಪಿಗೂ ಮುನ್ನ ದೆಹಲಿ ಸರ್ಕಾರದ ಅಧಿಕಾರಿಗಳ ವರ್ಗಾವಣೆ ಮತ್ತು ನೇಮಕಾತಿಯು ಲೆಫ್ಟಿನೆಂಟ್ ಗೌರ್ನರ್ ಅವರ ನಿಯಂತ್ರಣದಲ್ಲಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...