ಎಎಸ್ಐ ಸಮೀಕ್ಷೆ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಸಂಭಲ್ ಮಸೀದಿ ಸಮಿತಿ; ನ.29ರಂದು ಅರ್ಜಿ ವಿಚಾರಣೆ

Date:

ಸ್ಥಳೀಯ ನ್ಯಾಯಾಲಯ ನೀಡಿದ ಸಂಭಲ್ ಮಸೀದಿ ಸಮೀಕ್ಷೆ ಆದೇಶದ ವಿರುದ್ಧ ಉತ್ತರ ಪ್ರದೇಶದ ಸಂಭಲ್‌ನ ಜಾಮಾ ಮಸೀದಿಯ ವ್ಯವಸ್ಥಾಪನಾ ಸಮಿತಿಯು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಪೀಠವು ಶುಕ್ರವಾರ ಅರ್ಜಿ ವಿಚಾರಣೆ ನಡೆಸಲಿದೆ ಎಂದು ವರದಿಯಾಗಿದೆ.

ಭಾನುವಾರ, ಶಾಹಿ ಜಾಮಾ ಮಸೀದಿಯ ಭಾರತೀಯ ಪುರಾತತ್ವ ಸರ್ವೇಕ್ಷಣಾ (ಎಎಸ್ಐ) ಸಮೀಕ್ಷೆಯನ್ನು ವಿರೋಧಿಸುವ ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವಿನ ಘರ್ಷಣೆಯಲ್ಲಿ ಮೂವರು ಸಾವನ್ನಪ್ಪಿದ್ದರು. ಭದ್ರತಾ ಸಿಬ್ಬಂದಿ ಮತ್ತು ಅಧಿಕಾರಿಗಳು ಸೇರಿದಂತೆ ಹಲವಾರು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ನಾಲ್ಕನೇ ವ್ಯಕ್ತಿ ಸೋಮವಾರ ನಿಧನರಾಗಿದ್ದಾರೆ.

ನವೆಂಬರ್ 19ರಂದು ನ್ಯಾಯಾಲಯದ ಆದೇಶದ ಮೇರೆಗೆ ಜಾಮಾ ಮಸೀದಿಯನ್ನು ಮೊದಲು ಸಮೀಕ್ಷೆ ಮಾಡಿದಾಗಿನಿಂದ ಈ ಪ್ರದೇಶದಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ. ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆಂದು ಪರಿಶೀಲಿಸುವ ಸಲುವಾಗಿ ಪೊಲೀಸರು ಹಲವಾರು ಅಪ್ರಾಪ್ತರು ಸೇರಿದಂತೆ ಸುಮಾರು 100 ಮಂದಿ ಫೋಟೋಗಳನ್ನು ಗುರುತಿಸಲು ಬುಧವಾರ ಬಿಡುಗಡೆ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಿಸಿಟಿವಿ ಕ್ಯಾಮೆರಾಗಳು ಮತ್ತು ವಿಡಿಯೊಗಳ ತುಣುಕುಗಳನ್ನು ಬಳಸಿಕೊಂಡು ಪಡೆದ ಫೋಟೋಗಳನ್ನು ಸಂಭಾಲ್‌ನಾದ್ಯಂತ ಸಾರ್ವಜನಿಕ ಪ್ರದೇಶಗಳಲ್ಲಿ ಪ್ರದರ್ಶಿಸಲಾಗುವುದು ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಲಾಗುವುದು” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಉತ್ತರ ಪ್ರದೇಶ ಸರ್ಕಾರದ ಅಧಿಕೃತ ವಕ್ತಾರರು ಮಾತನಾಡಿ, “ಹಿಂಸಾಚಾರದಲ್ಲಿ ಭಾಗಿಯಾಗಿರುವವರಿಂದ ನಾಶವಾದ ಸಾರ್ವಜನಿಕ ಆಸ್ತಿಯ ಹಾನಿಯನ್ನು ರಾಜ್ಯವು ವಸೂಲಿ ಮಾಡುತ್ತದೆ. ಕಲ್ಲು ತೂರಾಟಗಾರರು ಮತ್ತು ದುಷ್ಕರ್ಮಿಗಳ ಫೋಟೋಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಪ್ರದರ್ಶಿಸಲಾಗುವುದು. ಬಂಧನಕ್ಕೆ ಕಾರಣವಾಗುವ ಮಾಹಿತಿ ನೀಡಿದವರಿಗೆ ಬಹುಮಾನವನ್ನು ಘೋಷಿಸಲಾಗುವುದು. ಅಶಾಂತಿಗೆ ಕಾರಣರಾದವರ ವಿರುದ್ಧ ಸರ್ಕಾರ ದೃಢವಾದ ನಿಲುವನ್ನು ತೆಗೆದುಕೊಳ್ಳುತ್ತಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಸತ್ಯ ಹೇಳುವುದು ದೇಶದ್ರೋಹ ಅಲ್ಲ- ಸಂವಿಧಾನ ವಿರೋಧ ಅಸಲು ದೇಶದ್ರೋಹ

ಹಿಂಸಾಚಾರದ ನಂತರ, ಸಮಾಜವಾದಿ ಪಕ್ಷದ ಸಂಭಾಲ್ ಸಂಸದ ಜಿಯಾ-ಉರ್-ರೆಹಮಾನ್ ಬಾರ್ಕ್ ಮತ್ತು ಶಾಸಕ ಇಕ್ಬಾಲ್ ಮಹಮ್ಮದ್ ಅವರ ಪುತ್ರ ಸೊಹೈಲ್ ಮಹ‌ಮ್ಮದ್‌ ವಿರುದ್ಧ ಉತ್ತರ ಪ್ರದೇಶದ ಸಂಭಾಲ್‌ ನಗರದಲ್ಲಿ ಭಾನುವಾರ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

“ಮಸೀದಿಯ ನಿರ್ವಹಣಾ ಸಮಿತಿಯ ಭಾಗವಾಗಿರುವ ವಕೀಲ ಜಾಫರ್ ಅಲಿ ವಿರುದ್ಧವೂ ಆರೋಪವಿದ್ದು, ಅವರು ಎರಡನೇ ಸಮೀಕ್ಷೆಯ ಮಾಹಿತಿಯನ್ನು ಆರೋಪಿ ಶಾಸಕರಿಗೆ ಸೋರಿಕೆ ಮಾಡಿದ್ದಾರೆ” ಎಂದು ಎಫ್ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...