ಸಲಿಂಗ ವಿವಾಹ | ಬಹಿರಂಗ ವಿಚಾರಣೆಗಾಗಿ ಸುಪ್ರೀಂಗೆ ಅರ್ಜಿದಾರರ ಮನವಿ

Date:

ಸಲಿಂಗ ವಿವಾಹ ಪ್ರಕರಣದ ಅರ್ಜಿದಾರರು ತಮ್ಮ ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯದಲ್ಲಿ ಬಹಿರಂಗವಾಗಿ ನಡೆಸುವಂತೆ ಸುಪ್ರೀಂ ಕೋರ್ಟ್‌ಗೆ ಮಂಗಳವಾರ ಮನವಿ ಮಾಡಿದ್ದಾರೆ. ಆದಾಗ್ಯೂ, ಮರುಪರಿಶೀಲನಾ ಅರ್ಜಿಗಳನ್ನು ಚೇಂಬರ್ ವಿಚಾರಣೆಗಳಲ್ಲಿ ನಿರ್ಧರಿಸಲಾಗುತ್ತದೆ ಮತ್ತು ಸಾಂವಿಧಾನಿಕ ಪೀಠವು ಅರ್ಜಿಗಳ ಅರ್ಹತೆಯ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಸಲಿಂಗ ವಿವಾಹದ ಕೆಲವು ಅರ್ಜಿದಾರರನ್ನು ಪ್ರತಿನಿಧಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮತ್ತು ನೀರಜ್ ಕಿಶನ್ ಕೌಲ್ ಅವರು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠದ ಮುಂದೆ ಮರುಪರಿಶೀಲನಾ ಅರ್ಜಿಯ ವಿಷಯವನ್ನು ಪ್ರಸ್ತಾಪಿಸಿದ್ದಾರೆ. ಸಲಿಂಗ ವಿವಾಹಗಳನ್ನು ಕಾನೂನಿನಲ್ಲಿ ಮಾನ್ಯವೆಂದು ಗುರುತಿಸಲು ನಿರಾಕರಿಸಿರುವ ಸುಪ್ರೀಂ ಕೋರ್ಟ್‌ನ ಹಿಂದಿನ ನಿರ್ಧಾರವನ್ನು ಅರ್ಜಿಯು ಪ್ರಶ್ನಿಸಿದೆ. “ದಯವಿಟ್ಟು ಮರುಪರಿಶೀಲನಾ ಅರ್ಜಿಗಳನ್ನು ನ್ಯಾಯಾಲಯದಲ್ಲಿ ಬಹಿರಂಗವಾಗಿ ವಿಚಾರಣೆ ನಡೆಸಬೇಕು” ಎಂದು ಕೌಲ್ ವಿನಂತಿಸಿಕೊಂಡಿದ್ದಾರೆ.

ಸಿಜೆಐ ಡಿ.ವೈ ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಪೀಠವು ಜುಲೈ 10 (ಬುಧವಾರ) ಈ ಅರ್ಜಿಗಳ ವಿಚಾರಣೆ ನಡೆಸಲಿದೆ. ಆದರೆ, ಮುಕ್ತ ನ್ಯಾಯಾಲದ ಬದಲಾಗಿ ಚೇಂಬರ್‌ನಲ್ಲಿ ವಿಚಾರಣೆ ನಡೆಯಲಿದೆ. ವಿಚಾರಣಾ ಪೀಠದಲ್ಲಿ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ, ಬಿವಿ ನಾಗರತ್ನ, ಹಿಮಾ ಕೊಹ್ಲಿ ಮತ್ತು ಪಿ ಎಸ್ ನರಸಿಂಹ ಇರಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪರಿಶೀಲನಾ ಅರ್ಜಿಗಳನ್ನು ಚೇಂಬರ್‌ಗಳಲ್ಲಿ ವಿಚಾರಣೆ ನಡೆಸಲಾಗುವುದು. ಅಲ್ಲಿ ಅರ್ಜಿದಾರರು, ಪ್ರತಿವಾದಿಗಳು, ವಕೀಲರು ಅಥವಾ ದಾವೆದಾರರು ಹಾಜರಾಗುವುದಿಲ್ಲ ಎಂಬುದು ಗಮನಿಸಬೇಕಾದ ಸಂಗತಿ. ಆದಾಗ್ಯೂ, ವಿಚಾರಣೆಯು ನ್ಯಾಯಾಲಯದ ಪಡಸಾಲೆಯಲ್ಲಿ ವಿಚಾರಣೆ ಸೂಕ್ತವೆಂದು ಅರ್ಜಿದಾರರು ಭಾವಿಸಿದರೆ ನ್ಯಾಯಾಲಯಕ್ಕೆ ಅಥವಾ ಸುಪ್ರೀಂ ಕೋರ್ಟ್‌ನ ಆಯಾ ಪೀಠಕ್ಕೆ ಮನವಿ ಮಾಡಲು ಅವಕಾಶವಿದೆ.

ಈ ವರದಿ ಓದಿದ್ದೀರಾ?: ದಲಿತರು-ಬುಡಕಟ್ಟು ಜನರು ಹಾಗೂ ಹಿಂದುಳಿದವರೇ ಉಷ್ಣೋಗ್ರತೆಯ ಬಲಿಪಶುಗಳು

ಕಳೆದ ವರ್ಷ ಅಕ್ಟೋಬರ್ 17 ರಂದು, ಒಂದು ಮಹತ್ವದ ತೀರ್ಪಿನಲ್ಲಿ, ಸಲಿಂಗ ವಿವಾಹಗಳಿಗೆ ಕಾನೂನು ಮಾನ್ಯತೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿತ್ತು.

“ಸಲಿಂಗ ವಿವಾಹವನ್ನು ಕಾನೂನುಬದ್ದಗೊಳಿಸುವ ಅಧಿಕಾರವು ಕೇವಲ ಸಂಸತ್ತು ಮತ್ತು ರಾಜ್ಯ ಶಾಸಕಾಂಗಗಳ ವ್ಯಾಪ್ತಿಗೆ ಬರುತ್ತದೆ. ಶಾಸಕಾಂಗವು ಅನುಚ್ಛೇದ 14 ಮತ್ತು 15(3)ಗೆ ತಿದ್ದುಪಡಿ ತಂದು, ಸಲಿಂಗ ವಿವಾಹ ಸಂಬಂಧ ಕಾನೂನನ್ನು ರಚಿಸಬಹುದು” ಎಂದು ಸುಪ್ರೀಂ ಕೋರ್ಟ್‌ ಹೇಳಿತ್ತು.

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ನೀಡಲು ಶಾಸಕಾಂಗಕ್ಕೆ ಸಕಾರಾತ್ಮಕ ನಿರ್ದೇಶನವನ್ನು ನೀಡಲು ತಮಗೆ ಅಧಿಕಾರವಿಲ್ಲ ಎಂದೂ ಕೋರ್ಟ್‌ ಹೇಳಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...