ಸಿಗರೇಟ್ ಜತೆ ಆರೋಗ್ಯ ಎಚ್ಚರಿಕೆ ಪಟ್ಟಿಗೆ ಸೇರಿದ ಚಹಾ, ಸಮೋಸಾ, ಜಿಲೇಬಿ,ಬಿಸ್ಕತ್

Date:

ಬಹುತೇಕ ಮಂದಿಯ ಅಚ್ಚುಮೆಚ್ಚಿನ ತಿನಸುಗಳಾದ ಜಿಲೇಬಿ, ಸಮೋಸಾ, ಬಿಸ್ಕತ್ ಹಾಗೂ ನಿತ್ಯ ಸೇವಿಸುವ ಚಹಾ ಕೂಡಾ “ಅಪಾಯಕಾರಿ” ಎಂಬ ಎಚ್ಚರಿಕೆಯ ಫಲಕಗಳೊಂದಿಗೆ ಲಭ್ಯವಾಗಲಿವೆ.

ನಾಗ್ಪುರ ಎಐಐಎಂಎಸ್ ಸೇರಿದಂತೆ ಎಲ್ಲ ಕೇಂದ್ರೀಯ ಸಂಸ್ಥೆಗಳು, ಜನಸಾಮಾನ್ಯರ ದೈನಂದಿನ ತಿಂಡಿ ತಿನಸುಗಳಲ್ಲಿ ಎಷ್ಟರ ಮಟ್ಟಿಗೆ ಜಿಡ್ಡು ಮತ್ತು ಸಕ್ಕರೆ ಅಂಶಗಳು ಹುದುಗಿರುತ್ತವೆ ಎಂಬ ಬಗ್ಗೆ ಫಲಕಗಳನ್ನು ಅಳವಡಿಸುವಂತೆ ಆರೋಗ್ಯ ಸಚಿವಾಲಯ ಸೂಚನೆ ನೀಡಿದೆ. ಜಂಕ್ ಫುಡ್ ಉತ್ಪನ್ನಗಳನ್ನು ತಂಬಾಕಿನ ಸಾಲಿಗೆ ಸೇರಿಸುವ ನಿಟ್ಟಿನಲ್ಲಿ ಇದು ಮೊದಲ ಹೆಜ್ಜೆ ಎನ್ನಲಾಗಿದೆ.

ಸರ್ಕಾರಿ ಸಂಸ್ಥೆಗಳಲ್ಲಿ ಅಳವಡಿಕೆಯಾಗಲಿರುವ ಈ ಫಲಕಗಳು ಜನಸಾಮಾನ್ಯರಿಗೆ ಸಾಂಪ್ರದಾಯಿಕ ತಿಂಡಿ ತಿನಸುಗಳು ಎಂದು ಬಳಕೆಯಾಗುತ್ತಿರುವ ಈ ಖಾದ್ಯಗಳಲ್ಲಿ ಅಡಗಿರುವ ಸಕ್ಕರೆ ಮತ್ತು ಜಿಡ್ಡಿನ ಅಂಶದ ಬಗ್ಗೆ ಎಚ್ಚರಿಕೆ ನೀಡಲಿವೆ. ಲಡ್ಡು, ವಡಾ-ಪಾವ್, ಪಕೋಡಾದಂಥ ತಿನಸುಗಳ ಮೇಲೆಯೂ ನಿಗಾ ವಹಿಸಲಾಗುತ್ತದೆ. ಈ ನಿರ್ದೇಶನವನ್ನು ಎಐಐಎಂಎಸ್ ಅಧಿಕಾರಿಗಳು ದೃಢಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೈಗಾರಿಕೆಯಲ್ಲಿ ತಮಿಳುನಾಡು ಮಾದರಿ ಅಳವಡಿಸಿಕೊಳ್ಳಲಿ ಕರ್ನಾಟಕ

ಈ ಎಚ್ಚರಿಕೆಯನ್ನು ನೀಡುವ ಫಲಕಗಳನ್ನು ಕೆಫೆಟೇರಿಯಾ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

“ಸಿಗರೇಟ್ ಎಚ್ಚರಿಕೆಯಂತೆ ಆಹಾರದ ಲೇಬಲಿಂಗ್ ನಲ್ಲಿ ಸಹ ಎಚ್ಚರಿಕೆ ಸಂದೇಶ ನೀಡುವ ನಿಟ್ಟಿನಲ್ಲಿ ಇದು ಮೊದಲ ಹೆಜ್ಜೆ” ಎಂದು ಭಾರತೀಯ ಹೃದ್ರೋಗ ತಜ್ಞರ ಸಂಘದ ನಾಗ್ಪುರ ಶಾಖೆಯ ಅಧ್ಯಕ್ಷ ಅಮರ್ ಅಮಾಲ್ ಹೇಳಿದ್ದಾರೆ. ಸಕ್ಕರೆ ಮತ್ತು ವರ್ಗಾಂತರದ ಕೊಬ್ಬಿನ ಅಂಶಗಳು ಹೊಸ ತಂಬಾಕು. ಜನರಿಗೆ ತಾವು ಏನು ತಿನ್ನುತ್ತಿದ್ದೇವೆ ಎಂಬ ಬಗ್ಗೆ ಅರಿವು ಅಗತ್ಯ ಎಂದು ಅವರು ಪ್ರತಿಪಾದಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...